ಜನರ ಸುರಕ್ಷತೆಗೆ ಸ್ಥಳಾಂತರವೇ ಏಕೈಕ ಪರಿಹಾರ

ಇದರಲ್ಲಿ 58 ಹಳ್ಳಿಗಳು ಪೂರ್ಣವಾಗಿ ಮುಳುಗಿದ್ದರೆ 37 ಗ್ರಾಮಗಳು ಭಾಗಶಃ ಮುಳುಗಡೆಯಾಗಿದ್ದವು.

Team Udayavani, Apr 29, 2022, 6:19 PM IST

ಜನರ ಸುರಕ್ಷತೆಗೆ ಸ್ಥಳಾಂತರವೇ ಏಕೈಕ ಪರಿಹಾರ

ಬೆಳಗಾವಿ: ನದಿ ತೀರದ ಜನರ ಸುರಕ್ಷತೆ ದೃಷ್ಟಿಯಿಂದ ಹಳ್ಳಿಗಳ ಸ್ಥಳಾಂತರ ಅಗತ್ಯವಾಗಿ ಆಗಬೇಕು. ಇದು ಸರಕಾರ, ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಮತ್ತು ನದಿ ದಂಡೆಯ ಗ್ರಾಮಗಳ ಜನರ ಮಾತು. ಕಳೆದ 15 ವರ್ಷಗಳಿಂದ ನಿರಂತರವಾಗಿ ಈ ಮಾತು ಕೇಳುತ್ತಲೇ ಇದೆ.

ಮಳೆಗಾಲ ಬಂದಾಗ, ಜಲಾಶಯಗಳ ನೀರಿನ ಮಟ್ಟ ಅಪಾಯದ ಮಟ್ಟ ತಲುಪಿದಾಗ ಸ್ಥಳಾಂತರದ ವಿಷಯ ಆದ್ಯತೆಯ ಮೇಲೆ ಪ್ರಸ್ತಾಪವಾಗುತ್ತದೆ. ಹೋರಾಟ ನಡೆಯುತ್ತವೆ. ಶಾಸಕರಾದಿಯಾಗಿ ಎಲ್ಲರೂ ಒತ್ತಾಯ ಮಾಡುತ್ತಾರೆ. ಆದರೆ ಜಲಾಶಯಗಳ ಒಳಹರಿವಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಈ ಮಾತು ಅಲ್ಲಿಗೇ ನಿಲ್ಲುತ್ತದೆ. ಹೋರಾಟಗಳು ಮೌನವಾಗುತ್ತವೆ.

ಗಡಿ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಎಂಬುದು ರೂಢಿಯಾಗಿಬಿಟ್ಟಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಅತಂಕದಿಂದಲೇ ದಿನ ಕಳೆಯುವದನ್ನು ನದಿ ತೀರದ
ಗ್ರಾಮಸ್ಥರು ರೂಢಿಸಿಕೊಂಡಿದ್ದಾರೆ. ಇದುವರೆಗೆ ಸ್ಥಳಾಂತರ ಬಗ್ಗೆ ಅಷ್ಟು ಗಂಭೀರವಾಗಿ ಒತ್ತಾಯ ಮಾಡದೇ ಇದ್ದ ಕೃಷ್ಣಾ, ವೇದಗಂಗಾ, ಘಟಪ್ರಭಾ ಹಾಗೂ ಮಲಪ್ರಭಾ ನದಿ ತೀರದ ಜನರು ಸುರಕ್ಷತೆಯ ದೃಷ್ಟಿಯಿಂದ ಹಳ್ಳಿಗಳನ್ನು ಸ್ಥಳಾಂತರ ಮಾಡಿ. ಅಲ್ಲಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿ ಎಂದು ಸರಕಾರದ ಮುಂದೆ ಬೇಡಿಕೆ ಮಂಡಿಸಿದ್ದು ಅಲ್ಲಿಯ ವಾಸ್ತವ ಸ್ಥಿತಿಯ ಭೀಕರತೆಯನ್ನು ಪರಿಚಯ ಮಾಡಿಕೊಟ್ಟಿತ್ತು.

ಆಗ ಮುಖ್ಯಮಂತ್ರಿಗಳಾಗಿದ್ದ ಬಿ ಎಸ್‌ ಯಡಿಯೂರಪ್ಪ ಅವರೇ ಸ್ವತಃ ನದಿ ತೀರದ ಹಳ್ಳಿಗಳ ಸ್ಥಳಾಂತರ ವಿಷಯ ಪ್ರಸ್ತಾಪ ಮಾಡಿದ್ದಲ್ಲದೆ ಸಂತ್ರಸ್ತರು ಲಿಖೀತ ರೂಪದಲ್ಲಿ ಬರೆದುಕೊಟ್ಟರೆ ಸರಕಾರ ಇದಕ್ಕೆ ಸಿದ್ದ ಎಂದು ಹೇಳಿ ನದಿ ಪಾತ್ರದ ಜನರ ಆತಂಕದ ಜೀವನಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡುವ ಹೆಜ್ಜೆ ಇಟ್ಟಿದ್ದರು. ಆದರೆ ಎಲ್ಲವೂ ಅಂದುಕೊಂಡಂತೆ ಆಗಲೇ ಇಲ್ಲ. ನದಿ ನೀರಿನ ಅಬ್ಬರ ಇಳಿಯುತ್ತಿದ್ದಂತೆ ಹಳ್ಳಿಗಳ ಸ್ಥಳಾಂತರದ ಬಿಸಿಯೂ ಆರಿತು. ಪ್ರವಾಹದ ಆತಂಕಕ್ಕೆ ಸ್ಥಳಾಂತರವೇ ಪರಿಹಾರ ಎಂದು ಹೇಳಿದ್ದ ಜನಪ್ರತಿನಿಧಿಗಳು ಸಹ ಆನಂತರ ಸುಮ್ಮನಾದರು.ಸಾಲದ್ದಕ್ಕೆ ಕೊರೊನಾ ಹೆಮ್ಮಾರಿ ಸಹ ಎಲ್ಲ ಕಾರ್ಯಗಳಿಗೆ ಅಡ್ಡಿಯಾಯಿತು.

ಶಾಶ್ವತ ಸ್ಥಳಾಂತರ ಯೋಜನೆ: 2019 ರಲ್ಲಿ ಕೃಷ್ಣಾ, ವೇದಗಂಗಾ ನದಿಗಳ ಜೊತೆಗೆ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಸಹ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿವೆ. ಜಿಲ್ಲಾಡಳಿತದ ಸಮೀಕ್ಷೆ ಪ್ರಕಾರ ಅತಿಯಾದ ಮಳೆ ಹಾಗೂ ನದಿಗಳ ಪ್ರವಾಹದಿಂದ 872 ಗ್ರಾಮಗಳು ತೊಂದರೆಗೆ ತುತ್ತಾಗಿದ್ದವು. ಕೃಷ್ಣಾ ಹಾಗೂ ವೇದಗಂಗಾ ನದಿಗಳು ಚಿಕ್ಕೋಡಿ, ಅಥಣಿ ಹಾಗೂ ರಾಯಬಾಗ ತಾಲೂಕುಗಳಲ್ಲಿ ತೀವ್ರ ತೊಂದರೆ ಉಂಟುಮಾಡಿದ್ದರೆ ಘಟಪ್ರಭಾ ನದಿಯ
ದಾಖಲೆಯ ಪ್ರಮಾಣದ ನೀರಿನಿಂದ ಗೋಕಾಕ ತಾಲೂಕು ಬಹಳ ಹಾನಿ ಅನುಭವಿಸಿತು. ನಾಲ್ಕೈದು ಹಳ್ಳಿಗಳು ಸಂಪೂರ್ಣ ಮುಳುಗಡೆಯಾಗಿದ್ದವು.ಗೋಕಾಕ ಪಟ್ಟಣದ ಅರ್ಧಭಾಗ ನೀರಿನಲ್ಲಿತ್ತು.

ಅದೇ ರೀತಿ ಮಲಪ್ರಭಾ ನದಿಯೂ ಸಹ ದಾಖಲೆಯ ಪ್ರಮಾಣದಲ್ಲಿ ನೀರು ಕಂಡಿದ್ದರಿಂದ ರಾಮದುರ್ಗ ತಾಲೂಕು ಹಿಂದೆಂದೂ ಕಂಡಿರದಂತಹ ಅನಾಹುತಕ್ಕೆ ಸಾಕ್ಷಿಯಾಯಿತು. ನದಿ ತೀರದ ಗೊಣಗನೂರು, ಸುನ್ನಾಳ, ಕಿಲಬನೂರ, ಹಂಪಿಹೋಳಿ, ಬೆನ್ನೂರ ಗ್ರಾಮಗಳು ಅಕ್ಷರಶಃ ನದಿಗಳಂತೆ ಕಂಡುಬಂದಿದ್ದವು.

ಈ ಹಿಂದೆ 2005 ರಲ್ಲಿ ಕೃಷ್ಣಾ ನದಿಗೆ ಇದೇ ರೀತಿ ಭೀಕರ ಪ್ರವಾಹ ಬಂದಾಗ ನದಿ ತೀರದ ಹಳ್ಳಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಆಗಿನ ಸರಕಾರ ನಿರ್ಧಾರ ಮಾಡಿ ಪ್ರಕ್ರಿಯೆ ಸಹ ಆರಂಭಿಸಲಾಗಿತ್ತು. ಅನೇಕ ಹಳ್ಳಿಗಳಿಗೆ ಪರಿಹಾರ ನೀಡಲಾಗಿತ್ತು. ಆದರೆ ಯಾವ ಹಳ್ಳಿಯೂ ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರವಾಗಲೇ ಇಲ್ಲ. ಹೀಗಾಗಿ ಸ್ಥಳಾಂತರಕ್ಕೆ ಬಹಳ ಆಲೋಚನೆ ಮಾಡಿ ನಿರ್ಧಾರ ಕೈಗೊಳ್ಳಬೇಕಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.2005 ರಲ್ಲಿ ಉಂಟಾದ ಪ್ರವಾಹದಿಂದ 95 ಹಳ್ಳಿಗಳು ಪ್ರವಾಹಕ್ಕೆ ಸಿಲುಕಿ ಬಹಳ ನಲುಗಿದ್ದವು.

ಇದರಲ್ಲಿ 58 ಹಳ್ಳಿಗಳು ಪೂರ್ಣವಾಗಿ ಮುಳುಗಿದ್ದರೆ 37 ಗ್ರಾಮಗಳು ಭಾಗಶಃ ಮುಳುಗಡೆಯಾಗಿದ್ದವು. ಕೃಷ್ಣಾ ನದಿ ತೀರದ ಚಿಕ್ಕೋಡಿ, ಅಥಣಿ ಹಾಗೂ ರಾಯಬಾಗ ತಾಲೂಕುಗಳಲ್ಲೇ 80 ಹಳ್ಳಿಗಳು ಪ್ರವಾಹದ ಸುಳಿಗೆ ಸಿಲುಕಿದ್ದವು. ಆಗ ಅಥಣಿ ತಾಲೂಕಿನ ಜುಗೂಳ ಮಂಗಾವತಿ, ಕೃಷ್ಣಾ ಕಿತ್ತೂರ, ಕಾತ್ರಾಳ, ಜನವಾಡ, ಚಿಕ್ಕೋಡಿ ತಾಲೂಕಿನಲ್ಲಿ ಯಡೂರ, ಕಲ್ಲೋಳ, ಯಡೂರವಾಡಿ, ಮಾಂಜರಿ ಮೊದಲಾದ ಹಳ್ಳಿಗಳ ಸ್ಥಳಾಂತರ ಪ್ರಸ್ತಾಪವಾಗಿತ್ತು.

ಮೇಲಿಂದ ಮೇಲೆ ಪ್ರವಾಹ ನೋಡಿ ನದಿ ತೀರದ ಜನರು ಈಗ ಸುರಕ್ಷತೆಯ ದೃಷ್ಟಿಯಿಂದ ಸ್ಥಳಾಂತರವಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಅವರಲ್ಲಿ ಹಳ್ಳಿಗಳ ಸ್ಥಳಾಂತರ ಮಾಡಿದರೆ ತಮಗೆ ಬರುವ ಪರಿಹಾರ ಹಾಗೂ ಪುನರ್ವಸತಿಯ ಬಗ್ಗೆ ಆತಂಕ ಹಾಗೂ ಗೊಂದಲ ಇದೆ. ಸಂತ್ರಸ್ತರಿಗೆ ಯಾವ ರೀತಿ ಪರಿಹಾರ ನೀಡಲಾಗುವದು. ಪುನರ್ವಸತಿ ಎಲ್ಲಿ ಮತ್ತು ಯಾವ ರೀತಿ ಎಂಬುದರ ಬಗ್ಗೆ ಸರಕಾರದ ಸ್ಪಷ್ಟತೆ ಇಲ್ಲ. ಇದರಿಂದ ದೊಡ್ಡ ರೈತರು ಹಾಗೂ ಆರ್ಥಿಕವಾಗಿ ಸದೃಢರಾದವರು ಸ್ಥಳಾಂತರಕ್ಕೆ ಹಿಂದೇಟು ಹಾಕುತ್ತಿದ್ದಾರೆ.

ಸ್ಥಳಾಂತರ ಅನಿವಾರ್ಯ. ಆದರೆ ಇಲ್ಲಿ ತಾಂತ್ರಿಕ ಸೇರಿದಂತೆ ಸಾಕಷ್ಟು ಅಡೆತಡೆಗಳಿವೆ. ಆನೇಕ ಕಡೆ ಜಾಗದ ಸಮಸ್ಯೆ ಬಹಳಷ್ಟಿದೆ. ಜಾಗ ಇದ್ದರೂ ಅದು ಹಳೆಯ ಗ್ರಾಮಗಳಿಂದ 10 ಕಿಲೋಮೀಟರ್‌ ದೂರ ಇರುವುದರಿಂದ ಗ್ರಾಮಸ್ಥರು ಅಲ್ಲಿಗೆ ಹೋಗಲು ಒಪ್ಪುತ್ತಿಲ್ಲ. ಇನ್ನು ಕೆಲವು ಕಡೆ ಜಾಗ ಗುರುತಿಸಿ ಮನೆಗಳನ್ನು ನಿರ್ಮಾಣ ಮಾಡಿದ್ದರೂ ಮೂಲಭೂತ ಸೌಲಭ್ಯಗಳು ಇರದ ಕಾರಣ ಜನರು ಅಲ್ಲಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದ ಹೊರತು ಮನೆಗಳ ಹಕ್ಕುಪತ್ರ ನೀಡುವಂತಿಲ್ಲ. ಈ ಎಲ್ಲ ಕಾರಣಗಳಿಂದ ಹಳ್ಳಿಗಳ ಸ್ಥಳಾಂತರ ಸುಲಭವಾಗಿ ಆಗುತ್ತಿಲ್ಲ. ಬಹಳ ಗೊಂದಲ ಇದೆ. ಹೀಗಾಗಿ ಪ್ರತಿವರ್ಷಪ್ರವಾಹದಿಂದ ಜನರು ಸಂಕಷ್ಟ ಎದುರಿಸಬೇಕಾಗಿದೆ.
ಮಹೇಶ ಕುಮಟಳ್ಳಿ, ಶಾಸಕರು, ಅಥಣಿ.

ಜನರ ಸುರಕ್ಷತೆ ದೃಷ್ಟಿಯಿಂದ ಭವಿಷ್ಯದಲ್ಲಿ ನದಿ ತೀರದ ಹಳ್ಳಿಗಳ ಸ್ಥಳಾಂತರ ಮಾಡಲೇಬೇಕು. ಪ್ರತಿ ವರ್ಷ ಪರಿಹಾರ ಕೊಡುವದರಿಂದ ಸಮಸ್ಯೆ ನಿವಾರಣೆಯಾಗುವುದಿಲ್ಲ. ಆದರೆ ಹಳ್ಳಿಗಳನ್ನು ಸ್ಥಳಾಂತರ ಮಾಡಿದರೂ ಜನರು ಅಲ್ಲಿಗೆ ಹೋಗುವದಿಲ್ಲ. ಇದರಿಂದ ಸಮಸ್ಯೆಯಾಗಿದೆ. ಅರಭಾವಿ ವಿಧಾನಸಭಾ ಕ್ಷೇತ್ರವೊಂದರಲ್ಲೇ ಸುಮಾರು 30 ಹಳ್ಳಿಗಳು ನದಿ ದಂಡೆಯ ಮೇಲಿವೆ. ಸರಕಾರ ಇದರ ಬಗ್ಗೆ ಆಲೋಚನೆ ಮಾಡಬೇಕು.
ಬಾಲಚಂದ್ರ ಜಾರಕಿಹೊಳಿ, ಶಾಸಕರು

ಕೇಶವ ಆದಿ

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.