ನೇಕಾರರಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹ
Team Udayavani, May 3, 2020, 3:06 PM IST
ರಾಮದುರ್ಗ: ರಾಜ್ಯದಲ್ಲಿ ಲಾಕ್ಡೌನ್ ಹೇರಿಕೆಯಿಂದ ಸಾಂಪ್ರದಾಯಿಕ ನೇಕಾರಿಕೆ ವೃತ್ತಿ ಅವಲಂಬಿಸಿದ ನೇಕಾರರ ಸಂಕಷ್ಟಕ್ಕೆ ಸ್ಪಂದಿಸಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲೂಕು ನೇಕಾರ ವೇದಿಕೆಯಿಂದ ಮಂಗಳವಾರ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
ಕಳೆದ 40 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಲಾಕಡೌನ್ ಹೇರಲಾಗಿದೆ. ಇದರಿಂದ ತಾಲೂಕಿನಲ್ಲಿ ಸಾವಿರಾರು ಸಂಖ್ಯೆ ನೇಕಾರರು ಉದ್ಯೋಗ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ತುತ್ತು ಅನ್ನಕ್ಕಾಗಿ ಇತರರನ್ನು ಬೇಡುವ ಪರಿಸ್ಥಿತಿಗೆ ನೇಕಾರರು ಬಂದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೇಕಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಪರಿಹಾರ ನೀಡಬೇಕು. ಮಾರುಕಟ್ಟೆ ಶುರುವಾಗುವ ತನಕ ಸರ್ಕಾರವು ನೇಕಾರರು ಉತ್ಪಾದಿಸಿದ ಸೀರೆಗಳನ್ನು ಖರೀದಿಸಬೇಕು ಅಥವಾ ಶೇ. 80 ಹಣ ನೀಡಿ ಅಡವಿಟ್ಟು ಕೊಳ್ಳಬೇಕು. ಜವಳಿ ಇಲಾಖೆ ಮೂಲಕ ಪ್ರತಿ ತಿಂಗಳು 5000 ರೂ. ಧನ ಸಹಾಯ ನೀಡಬೇಕು. ಲಾಕಡೌನ್ ಸಮಯದಲ್ಲಿ ಆದ ನಷ್ಟಕ್ಕೆ ಪ್ರತಿಯಾಗಿ ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ತಾಲೂಕು ನೇಕಾರ ವೇದಿಕೆ ಅಧ್ಯಕ್ಷ ಶಂಕ್ರಣ್ಣ ಮುರುಡಿ, ವಿಠಲ ಮುರುಡಿ, ಏಕನಾಥ ಕೊಣ್ಣೂರ, ಪುರಸಭೆ ಸದಸ್ಯರಾದ ಶಂಕರ ಬೆನ್ನೂರ, ಪ್ರಹ್ಲಾದ್ ಬಡಿಗೇರ, ರಾಮಚಂದ್ರ ಯಾದವಾಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ