ಸಹಕಾರಿ ಸಂಘಗಳ ಒಕ್ಕೂಟದಿಂದ ಮನವಿ
Team Udayavani, Dec 14, 2019, 1:04 PM IST
ಕಾಗವಾಡ: ಸಹಕಾರ ಸಂಘಗಳ ಮೇಲೆ ವಿಧಿಸಿರುವ ಆದಾಯ ತೆರಿಗೆ, ಟಿಡಿಎಸ್ ಮತ್ತು ಇಎಸ್ಟಿಗಳನ್ನು ಶೀಘ್ರವೇ ರದ್ದು ಪಡಿಸಬೇಕೆಂದು ಒತ್ತಾಯಿಸಿ ಸಹಕಾರಿ ಸಂಘಗಳ ಒಕ್ಕೂಟ ವತಿಯಿಂದ ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬ್ರಹ್ಮನಾಥ ಸೊಸೈಟಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಖೋತ ಮಾತನಾಡಿ, ಕೇಂದ್ರ ಸರ್ಕಾರವು ಸಹಕಾರ ಸಂಸ್ಥೆಗಳ ಮೇಲೆ ಆದಾಯ ತೆರಿಗೆ, ಟಿಡಿಎಸ್ ಹಾಗೂ ಜಿಎಸ್ಟಿ ವಿ ಧಿಸಿರುವದರಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 52 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಹಿನ್ನಡೆ ಉಂಟಾಗುತ್ತಿದೆ. ಆದ್ದರಿಂದ ಸಹಕಾರಿ ಕ್ಷೇತ್ರದ ಮೇಲೆ ವಿಧಿ ಸಿರುವ ಆದಾಯ ತೆರಿಗೆ, ಟಿಡಿಎಸ್ ಮತ್ತು ಇಎಸ್ಟಿಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಸಹಕಾರಿ ಕ್ಷೇತ್ರದಲ್ಲಿ ಕೋಟ್ಯಂತರ ಜನರು ಸದಸ್ಯರಿದ್ದು, ಲಕ್ಷಾಂತರ ಉದ್ಯೋಗ ಅವಕಾಶವನ್ನು ಸಹಕಾರಿ ಕ್ಷೇತ್ರ ನೀಡಿದೆ. ಈ ಹಿನ್ನಲೆಯಲ್ಲಿ ಸಹಕಾರಿ ಕ್ಷೇತ್ರವನ್ನು ಉಳಿಸಿ, ಬೆಳೆಸುವ ದೃಷ್ಟಿಯಿಂದ ಕೇಂದ್ರದ ನೂತನ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಲ್ಲ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ