ವಿದ್ಯುತ್‌ ಸೌಲಭ್ಯ ಕಲ್ಪಿಸಲು ಎಸ್ಪಿಗೆ ಮನವಿ

ಪ್ರತಿಭಟನಾಕಾರರ ಮೇಲಿನ ಪ್ರಕರಣ ಹಿಂಪಡೆಯಿರಿ

Team Udayavani, Oct 4, 2019, 2:36 PM IST

bg-tdy-2

ಬೆಳಗಾವಿ: ಗೋಕಾಕ ಫಾಲ್ಸ್‌ನ ದನದ ಓಣಿಗೆ ಸೌಭಾಗ್ಯ ಯೋಜನೆ ಅಡಿ ವಿದ್ಯುತ್‌ ಸೌಲಭ್ಯ ಕಲ್ಪಿಸುವಂತೆ ಹಾಗೂ ಪೂರ್ವಾನುಮತಿ ಪಡೆದು ಶಾಂತಿಯುತ ಪಾದಯಾತ್ರೆ ನಡೆಸಿದವರ ವಿರುದ್ಧ ವಿನಾಕಾರಣ ದಾಖಲಿಸಿರುವ ಪ್ರಕರಣ ಹಿಂಪಡೆಯುವಂತೆ ಒತ್ತಾಯಿಸಿ ಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಬಿಜೆಪಿ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಪರಿಶಿಷ್ಟ ಜಾತಿ-ಜನಾಂಗದ ಸುಮಾರು 500 ಕುಟುಂಬಗಳು ವಾಸಿಸುತ್ತಿರುವ ಗೋಕಾಕ ಫಾಲ್ಸ್‌ನ ದನದ ಓಣಿಗೆ ಇಂದಿನವರೆಗೂ ವಿದ್ಯುತ್‌ ಸೌಲಭ್ಯ ಇಲ್ಲ. ಅಲ್ಲಿಯ ಬಡ ಜನರು ಕತ್ತಲಲ್ಲಿಯೇ ಬದುಕುತ್ತಿದ್ದಾರೆ. ಆ ಓಣಿಗೆ ಸೌಭಾಗ್ಯ ಯೋಜನೆ ಮಂಜೂರಾಗಿದ್ದರೂ ಅಧಿ ಕಾರಿಗಳು ಯೋಜನೆ ಜಾರಿಗೊಳಿಸದಿರುವುದನ್ನು ಖಂಡಿಸಿ ಹಾಗೂ ವಿದ್ಯುತ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿದರು. ತಾಲೂಕು ಆಡಳಿತ ಮತ್ತು ಪೊಲೀಸ್‌ ಇಲಾಖೆಯ ಪೂರ್ವಾನುಮತಿ ಪಡೆದು ಪಾದಯಾತ್ರೆ ನಡೆಸಲಾಗಿತ್ತು. ಪಾದಯಾತ್ರೆಯ ಆರಂಭದಿಂದ ಮುಕ್ತಾಯದವರೆಗೆ ಮತ್ತು ತಹಶೀಲ್ದಾರರಿಗೆ ಮನವಿ ಸಲ್ಲಿಸುವವರೆಗೂ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಮತ್ತು ಅವರ ಅಳಿಯ ಅಂಬಿರಾವ್‌ ಪಾಟೀಲ ಅವರ ಬೆಂಬಲಿಗರು ನಿರಂತರವಾಗಿ ಅಡ್ಡಿಪಡಿಸಿದ್ದರು. ಘೋಷಣೆ ಕೂಗಿದ್ದರು ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸುವ ಸಂಚು ರೂಪಿಸಿದ್ದರು. ಈ ಎಲ್ಲ ಕಿರುಕುಳ ಸಹಿಸಿಕೊಂಡು ಪ್ರತಿಭಟನಾಕಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದರು.

ಈಗ ಪೋಲಿಸರು ಪ್ರತಿಭಟನಾಕಾರರ ಮೇಲೆ ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಆರೋಪಿಸಿದರು. ಶಾಂತಿಯುತ ಪ್ರತಿಭಟನೆಗೆ ಅಡ್ಡಿಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಅನುಮತಿ ಪಡೆದು ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಪ್ರಕರಣ ದಾಖಲಿಸಿರುವುದು ಅಚ್ಚರಿ ಮೂಡಿಸಿದೆ. ಗೋಕಾಕ ತಾಲೂಕಿನಲ್ಲಿ ಪೋಲಿಸ್‌ ಇಲಾಖೆಯೂ ಮುಕ್ತವಾಗಿ ಆಡಳಿತ ನಡೆಸದಂತಹ ಪರಿಸ್ಥಿತಿ ಇದೆ ಎಂಬುದು ಮತ್ತೂಮ್ಮೆ ಸಾಬೀತಾಗಿದೆ ಎಂದರು.

ಪಾದಯಾತ್ರೆ ನಡೆಸಿದವರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಗೋಕಾಕದಲ್ಲಿ ರಾಜಕೀಯ ಒತ್ತಡ ರಹಿತ ಆಡಳಿತ ನಿರ್ವಹಿಸುವ ವಾತಾವರಣ ನಿರ್ಮಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಪ್ರವೀಣ ಪಾಟೀಲ, ಎಂ.ಟಿ. ಪಾಟೀಲ, ರಾಜು ಜಾಧವ, ದೀಪಕ ರಾಯನ್ನವರ, ಸುನಿಲ ಮುರಕಿಬಾವಿ, ನಿಂಗಪ್ಪ ನಾಯಕ, ವಿಠಲ ಬೋರನ್ನವರ, ಸುಭಾಷ ಕವಲಗಿ, ಪ್ರೇಮಾ ಚಿಕ್ಕೋಡಿ, ಮಂಜುನಾಥ ಮರೆನ್ನವರ, ದಶರಥ ಪೂಜಾರಿ, ಶ್ರೀಕಾಂತ ಪೂಜಾರಿ ಇತರರು ಇದ್ದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.