ಕುಂದುಕೊರತೆ ಸಭೆ ನಡೆಸಲು ಮನವಿ
Team Udayavani, Jan 25, 2020, 12:23 PM IST
ಬೆಳಗಾವಿ: ಕಳೆದ ನಾಲ್ಕು ವರ್ಷಗಳಿಂದ ಬೆಳಗಾವಿ ತಾಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ, ವರ್ಗದ ಕುಂದುಕೊರತೆಗಳ ಚರ್ಚೆ ಮತ್ತು ನಿವಾರಣೆ ಸಭೆಯನ್ನು ನಡೆಸುತ್ತಿಲ್ಲ. ಇದರಿಂದ ಪರಿಶಿಷ್ಟ ಜಾತಿ ಹಾಗೂ ವರ್ಗದವರ ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ ಎಂದು ಆರೋಪಿಸಿ ಎಸ್ಸಿ ಎಸ್ಪಿ-ಟಿಎಸ್ಪಿ ಜನಜಾಗೃತಿ ವೇದಿಕೆಯ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಎಸ್ಸಿ ಎಸ್ಪಿ/ಟಿಎಸ್ ಪಿ ಕಾಯ್ದೆ 2013-14ರಲ್ಲಿ ಜಾರಿಗೆ ಬಂದಿದೆ. ಈ ಕಾಯ್ದೆ ಪ್ರಕಾರ ಎಸ್ಸಿ/ಎಸ್ಟಿ ಕುಂದುಕೊರತೆಗಳಿಗೆ ಪರಿಹಾರ ಕಲ್ಪಿಸಲು ತಾಲೂಕು ಮಟ್ಟದಲ್ಲಿ ವರ್ಷಕ್ಕೆ ಕನಿಷ್ಠ 4 ಸಭೆಗಳನ್ನು ನಡೆಸಲೇಬೇಕು. ಆದರೆ ಕಳೆದ 6 ವರ್ಷಗಳಿಂದ ಇಂತಹ ಸಭೆ ನಡೆದಿಲ್ಲ. ಎಸ್ಸಿ ಹಾಗೂ ಎಸ್ಟಿ ಸಮಾಜದ ಮುಖಂಡರಿಗೆ ಕಾಯ್ದೆ ಪ್ರಕಾರ ತರಬೇತಿಯನ್ನೂ ನೀಡಲಾಗಿಲ್ಲ. ಮೇಲಾಗಿ ಪರಿಶಿಷ್ಟರ ಅಭಿವೃದ್ಧಿಗೆ ಸಂಬಂಧಿಸಿದ 33 ಇಲಾಖೆಗಳು ಹಾಗೂ ಗ್ರಾಮ ಪಂಚಾಯತ್ ಗಳಿಗೆ ನೀಡಲಾಗುತ್ತಿದ್ದ ಅನುದಾನವೂ ಸಮರ್ಪಕವಾಗಿ ಬರುತ್ತಿಲ್ಲ ಎಂದು ದೂರಿದರು.
ವೇದಿಕೆಯ ಮುಖಂಡರಾದ ಕಲ್ಲಪ್ಪ ರಾಮಚನ್ನವರ, ಸಂತೋಷ ಕಾಂಬಳೆ, ಮಲ್ಲೇಶ ಕೋರಂಗಿ, ಅಂಜಲಿ, ಮಹಾದೇವ ತಳವಾರ, ರವಿ ಬಸ್ತವಾಡಕರ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ