ಸಮರ್ಪಕ ವೇತನ ನೀಡಲು ಆಗ್ರಹ
Team Udayavani, Oct 5, 2019, 2:41 PM IST
ಬೈಲಹೊಂಗಲ: ಸಮರ್ಪಕ ವೇತನ ನೀಡುವಂತೆ ಆಗ್ರಹಿಸಿ ವಾಟರ್ಮನ್ಗಳು ಉಪವಿಭಾಗಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಪುರಸಭೆಯಲ್ಲಿ ಗುತ್ತಿಗೆ ಆಧಾರ ಮೇಲೆ ವಾಟರ್ಮನ್ಗಳಾಗಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡದೆ ಸತಾಯಿಸಲಾಗುತ್ತಿದೆ. ಇದರಿಂದ ಬಡ ಕುಟುಂಬಗಳು ಬೀದಿ ಪಾಲಾಗುತ್ತಿವೆ ಎಂದು ಆರೋಪಿಸಿದರು. ಪುರಸಭೆಯಲ್ಲಿ ಹಲವಾರು ವರ್ಷಗಳಿಂದ ವಾಟರಮನಗಳಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಪದೇ, ಪದೇ ಮುಖ್ಯಾಧಿಕಾರಿಗಳು, ಅಭಿಯಂತರು ಕುಂಟು ನೆಪ ಹೇಳುತ್ತಾ 3 ತಿಂಗಳಿನಿಂದ ಸಂಬಳ ನೀಡಿಲ್ಲ. ಗುತ್ತಿಗೆದಾರರನ್ನು ವಿಚಾರಿಸಿದರೆ ಅಧಿಕಾರಿಗಳನ್ನು ಕೇಳಿರಿ ಎನ್ನುತ್ತಾರೆ. ಅಧಿಕಾರಿಗಳನ್ನು ಕೇಳಿದರೆ ಸ್ಪಂದಿಸುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಕಾರ್ಮಿಕ ಮುಖಂಡ ಸುಭಾಸ ಕಾಜಗಾರ ಮಾತನಾಡಿ, ನಿಯಮಾನುಸಾರ ಪುರಸಭೆಯಿಂದ ನೀಡಬೇಕಾದ ವೇತನ ನೀಡದೆ ಸತಾಯಿಸಲಾಗುತ್ತಿದೆ. ಸಂಬಳವಿಲ್ಲದೆ ಒಂದೊತ್ತಿನ ಊಟಕ್ಕೂ ತೊಂದರೆಯಾಗಿದೆ. ಮೇಲಧಿ ಕಾರಿಗಳು ತುರ್ತು ಗಮನ ಹರಿಸಿ ವೇತನ ಕೊಡಿಸಿ ಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸೋಮಪ್ಪ ಕಡಕೋಳ, ಯಲ್ಲಪ್ಪ ಸನದಿ, ವಿಠಲ ಚಳಕೊಪ್ಪ, ಮುಸ್ತಾಕ ಲಕನವಿ, ಶಮಶುದ್ದೀನ ದೇಶನೂರ, ಶೆಟ್ಟೆಪ್ಪ ಕೆಳಗೇರಿ, ರಾಘವೇಂದ್ರ ಕಬ್ಬಲಗಿ, ಅಣ್ಣಪ್ಪ ಗಾಣಿಗೇರ, ಮಹೇಶ ಭರಮನ್ನವರ, , ಸುನೀಲ ಮ್ಯಾಗೇರಿ, ಶಿವಾನಂದ ಅಕ್ಕಿ, ಅಜಯ ಪೂಜೇರಿ, ಶಿವಾನಂದ ಶಿರವಂತಿ ಹಾಗೂ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್