![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಟ್ರಾಫಿಕ್ ಸಮಸ್ಯೆ ಪರಿಹರಿಸಲು ಕರವೇ ಆಗ್ರಹ
Team Udayavani, May 17, 2019, 3:57 PM IST
![belegavi-tdy-7..](https://www.udayavani.com/wp-content/uploads/2019/05/belegavi-tdy-7..-620x227.jpg)
ಗೋಕಾಕ: ನಗರದಲ್ಲಿ ಟ್ರಾಫಿಕ್ ಸಮಸ್ಯೆ ತಡೆಗಟ್ಟುವಲ್ಲಿ ವಿಫಲವಾಗುತ್ತಿರುವುದನ್ನು ಖಂಡಿಸಿ ಪಿಎಸ್ಐ ಶ್ರೀಶೈಲ್ ಬ್ಯಾಕೂಡ ಮುಖಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಗೋಕಾಕ: ನಗರದಲ್ಲಿ ಬೇಕಾಬಿಟ್ಟಿ ವಾಹನ ನಿಲ್ಲಿಸುವುದನ್ನು ತಡೆಗಟ್ಟಬೇಕು. ವಾಹನ ಸವಾರರು ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪಿಎಸ್ಐ ಶ್ರೀಶೈಲ್ ಬ್ಯಾಕೂಡ ಅವರ ಮುಖಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
ಕಳೆದ ಹಲವಾರು ತಿಂಗಳುಗಳಿಂದ ಗೋಕಾಕ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬ್ಯಾಳಿಕಾಟಾವರೆಗೆ ಮತ್ತು ಬಸವೇಶ್ವರ ವೃತ್ತದಿಂದ ಅಜಂತಾ ಖೂಟವರೆಗಿನ ರಸ್ತೆ ಅಗಲೀಕರಣಗೊಂಡು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಈ ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರು ಮತ್ತು ನಾಲ್ಕು ಚಕ್ರ ವಾಹನ ಸವಾರರು ತಮ್ಮ ವಾಹನಗಳನ್ನು ಎಲ್ಲಿ ಬೇಕೆಂದರಲ್ಲಿ ನಿಲ್ಲಿಸಿ ತಮ್ಮ ಬೇಜವಾಬ್ದಾರಿ ತೋರುತ್ತಿದ್ದಾರೆ. ಇದರಿಂದ ಈ ಎರಡೂ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಪಾದಚಾರಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಈ ಎರಡೂ ರಸ್ತೆಗಳು ಅಗಲೀಕರಣಗೊಂಡರೂ ಯಾವುದೇ ಪ್ರಯೋಜನವಾಗದೆ ಟ್ರಾಫಿಕ್ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಪ್ರತಿಭಟನೆಯಲ್ಲಿ ಕೃಷ್ಣಾ ಖಾನಪ್ಪನವರ, ಸಾಧಿಕ್ ಹಲ್ಯಾಳ, ದೀಪಕ್ ಹಂಜಿ, ಹನೀಪಸಾಬ ಸನದಿ, ರಮೇಶ ಕಮತಿ, ರೆಹಮಾನ ಮೊಕಾಶಿ, ಮುಗುಟ ಪೈಲವಾನ, ನಿಜಾಮ ನದಾಫ್, ಸುರೇಶ ಪತ್ತಾರ, ಮಲ್ಲು ಸಂಪಗಾರ, ನಿಯಾಜ ಪಟೇಲ್, ಮಹಾದೇವ ಮಕ್ಕಳಗೇರಿ, ದುರ್ಗಪ್ಪ ಗಾಡಿವಡ್ಡರ, ಬಸು ಹುಲಕುಂದ, ರಾಜೇಶ್ವರಿ ವಡೇರ, ಶೆಟ್ಟೆಪ್ಪ ಗಾಡಿವಡ್ಡರ, ದಸ್ತಗೀರ ಮುಲ್ಲಾ, ಫಕೀರಪ್ಪ ಗಣಾಚಾರಿ, ಬಸು ಗಾಡಿವಡ್ಡರ, ಅಮೀರಖಾನ ಜಗದಾಳೆ, ಹಣಮಂತ ಕಮತೆ, ಯಲ್ಲಪ್ಪ ಧರ್ಮಟ್ಟಿ, ಮಹಾಂತೇಶ ಮರಿಕಟ್ಟಿ, ಅಪ್ಪಯ್ಯ ತಿಗಡಿ, ವಿಠuಲ ಕಮತಿ, ಸಂತು ಕೋಲಕಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.