ಪೌರಕಾರ್ಮಿಕರಿಗೆ ವಸತಿ ಮನೆ ಮಂಜೂರು


Team Udayavani, Jun 8, 2019, 1:35 PM IST

bg-tdy-4..

ಚಿಕ್ಕೋಡಿ: ನಿಪ್ಪಾಣಿ ನಗರಸಭೆಯ 46 ಜನ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಮನೆಗಳ ಮಂಜೂರಾತಿ ಆದೇಶ ಪ್ರತಿಗಳನ್ನು ಶಾಸಕಿ ಶಶಿಕಲಾ ಜೊಲ್ಲೆ ವಿತರಿಸಿದರು.

ಚಿಕ್ಕೋಡಿ: ಸ್ಥಳೀಯ ಪೌರ ಕಾರ್ಮಿಕರಿಗೆ ವಿಶೇಷ ಆದ್ಯತೆ ನೀಡುವುದರೊಂದಿಗೆ‌ ಸ್ವಂತ ಮನೆ ನಿರ್ಮಿಸಲು ಪೌರ ಕಾರ್ಮಿಕ ಗೃಹಭಾಗ್ಯ ಯೋಜನೆಯಡಿ ನಿಪ್ಪಾಣಿ ನಗರಸಭೆಯ 46 ಜನ ಪೌರಕಾರ್ಮಿಕರಿಗೆ ತಲಾ 6 ಲಕ್ಷ ರೂ. ಮಂಜೂರು ಮಾಡಿಸಿ ಆದೇಶ ಪ್ರತಿ ನೀಡಲಾಗಿದೆಯೆಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.

ನಿಪ್ಪಾಣಿ ನಗರಸಭೆಯ ಪೌರ ಕಾರ್ಮಿಕರಿಗೆ ವಸತಿ ಯೋಜನೆಯ ಮಂಜೂರಾತಿ ಆದೇಶ ಪ್ರತಿಗಳನ್ನು ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಪೌರಕಾರ್ಮಿಕರಿಗೆ ತಮ್ಮ ಹಕ್ಕಿನ ಮನೆ ದೊರಕಬೇಕೆಂದು ಕಳೆದ ಐದು ವರ್ಷಗಳಿಂದ ಪ್ರಯತಿಸಲಾಗುತ್ತಿತ್ತು. ಮೊದಲ ಹಂತದಲ್ಲಿ 80 ಕಾರ್ಮಿಕರಿಗೆ ಪ್ಲಾಟ್ ನೀಡುವ ಕಾರ್ಯ ಕೈಗೊಳ್ಳಲಾಗಿತ್ತು. ಇದರಲ್ಲಿನ 46 ಜನ ಪೌರಕಾರ್ಮಿಕರಿಗೆ ಈಗಾಗಲೇ ಗೃಹಭಾಗ್ಯ ಯೋಜನೆಯಡಿ ತಲಾ 6 ಲಕ್ಷ.ರೂ. ಮಂಜೂರು ಮಾಡಲಾಗಿದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಜೀ ಕನಸಾದ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 1.50 ಲಕ್ಷರೂ. ಕೂಡ ಮಂಜೂರು ಮಾಡಿಸಿ ಕೊಡಲಾಗುವುದು ಎಂದರು.

ಯಾವ ಪೌರಕಾರ್ಮಿಕರ ಸ್ಥಿತಿ ಚೆನ್ನಾಗಿದೆಯೋ ಅವರಿಗೆ 1.50 ಲಕ್ಷದ ವೆಚ್ಚದಲ್ಲಿ ಮನೆ ನಿರ್ಮಿಸಲು ಅನುಕೂಲ ಮಾಡಲಾಗುವುದು ಆದರೆ ಯಾರಿಗೆ ಅಸಾಧ್ಯವೋ ಅವರಿಗೆ ಕಡಿಮೆ ಸಾಲದ ಬಡ್ಡಿದರದಲ್ಲಿ 1.50 ಲಕ್ಷ ಸಾಲ ನೀಡಿ ಸುಸಜ್ಜಿತ ಮನೆ ಒದಗಿಸಲಾಗುವುದು. ಸರ್ವೇ ನಂ. 178/ಬ ಯಲ್ಲಿನ 2 ಎಕರೆ ಜಾಗದಲ್ಲಿ 80 ಕಾರ್ಮಿಕರಿಗೆ ಪ್ಲಾಟ್‌ಗಳ ಆದೇಶ ಪ್ರತಿ ನೀಡಲಾಗಿದೆ.

ಉಳಿದ ಕಾರ್ಮಿಕರಿಗೆ ಇನ್ನುಳಿದ ಯೋಜನೆಗಳಡಿ ವಸತಿ ಮನೆಗಳಿಗೆ ಮಂಜೂರಾತಿ ನೀಡಲಾಗುವುದು. ಕೇಂದ್ರ ಸರ್ಕಾರದ ಪ್ರತಿ ಯೋಜನೆಯನ್ನು ಕ್ಷೇತ್ರದ ಪ್ರತಿಯೊಬ್ಬರ ಮನೆ ಬಾಗಿಲಿಗೂ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ, ನಗರಸೇವಕರಾದ ಜಯವಂತ ಭಾಟಲೆ, ಸದ್ದಾಂ ನಾಗಾರ್ಜಿ, ರಾಜು ಗುಂದೇಶಾ, ಸಂತೋಶ ಸಾಂಗಾವಕರ, ನಗರಸೇವಕಿಯರಾದ ನೀತಾ ಬಾಗಡಿ, ಪ್ರಭಾವತಿ ಸೂರ್ಯವಂಶಿ, ರಾಣಿ ಶೇಲಾರ್‌, ದೀಪಾಲಿ ಗಿರಿ, ರಂಜನಾ ಇಂಗವಲೆ, ಅರುಣಾ ಮುದಕುಡೆ, ಆಶಾ ಟವಳೆ, ಉಪಾಸನಾ ಗಾರವೆ, ಪ್ರಣವ ಮಾನವಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.