ಪಂಢರಪುರಕ್ಕೆ ಹೊರಟಿದ್ದ ಬೆಳಗಾವಿಯ ಐವರು ವಾರಕರಿಗಳು ಅಪಘಾತದಲ್ಲಿ ಸಾವು
Team Udayavani, Nov 8, 2019, 9:12 AM IST
ಬೆಳಗಾವಿ: ಕಾರ್ತಿಕ ಏಕಾದಶಿಯಂದು ಪಂಢರಪುರದ ಶ್ರೀ ವಿಠ್ಠಲನ ದರ್ಶನಕ್ಕೆ ಹೊರಟಿದ್ದ ಬೆಳಗಾವಿ ತಾಲೂಕಿನ ಐವರು ವಾರಕರಿಗಳು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಬೆಳಗಿನ ಜಾವ ಮಹಾರಾಷ್ಟ್ರದ ಸಾಂಗೋಲ್ಯಾ ಬಳಿ ಸಂಭವಿಸಿದೆ.
ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ ನಾಲ್ವರು ಹಾಗೂ ಹಂಗರಗಾ ಗ್ರಾಮದ ಒಬ್ಬ ವಾರಕರಿ ಮೃತಪಟ್ಟಿದ್ದಾರೆ. ಏಳು ಜನರು ಗಾಯಗೊಂಡಿದ್ದಾರೆ.
ಬುಲೇರೋ ಟೆಂಪೋ ವಾಹನದಲ್ಲಿ ಮಂಡೋಳಿಯಿಂದ ಗುರುವಾರ ರಾತ್ರಿ ವಾಹನ ಹೊರಟಿತ್ತು. ಪಂಢರಪುರಕ್ಕೆ ತೆರಳುತ್ತಿದ್ದ ವಾರಕರಿಗಳು ಸಾಂಗೋಲ್ಯಾದಿಂದ ಸುಮಾರು 10 ಕಿ.ಮೀ. ದೂರದಲ್ಲಿ ಹೋದಾಗ ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಟ್ರ್ಯಾಕ್ಟರ್ ಹಾಗೂ ಬುಲೇರೋ ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಇಟ್ಟಿಗೆ ತುಂಬಿಕೊಂಡು ಟ್ರಾಕ್ಟರ್ ಹೊರಟಿತ್ತು. ಹಿಂದಿನಿಂದ ಜೋರಾಗಿ ಬಂದ ಬುಲೇರೋ ವಾಹನ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನದಲ್ಲಿದ್ದ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು.
ಈ ಎರಡೂ ವಾಹನಗಳ ಅಪಘಾತದಲ್ಲಿ ಬುಲೇರೋ ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತರ ಹೆಸರುಗಳು ಇನ್ನೂ ಪತ್ತೆ ಆಗಿಲ್ಲ. ಮಂಡೋಳಿ ಹಾಗೂಬಹಂಗರಗಾದಿಂದ ಸ್ಥಳೀಯರು ಸಾಂಗೋಲ್ಯಾದತ್ತ ತೆರಳಿದ್ದಾರೆ. ಈ ಎರಡೂ ಊರುಗಳಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ