ರಸ್ತೆ ಅಪಘಾತ: ಮೂವರ ದುರ್ಮರಣ
Team Udayavani, Aug 18, 2021, 7:57 PM IST
ಘಟಪ್ರಭಾ : ಗೋಕಾಕ ಸಮೀಪದ ಲೋಳಸೂರ ಬ್ಯಾಳಿ ಬಸವನ ದೇವಸ್ಥಾನದ ಬಳಿ ಅತಿ ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರೊಂದು 2 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 3 ಜನ ಮೃತಪಟ್ಟ ದುರ್ಘಟನೆ ನಡೆದಿದೆ.
ಗೋಕಾಕದಿಂದ ಹುಣಶ್ಯಾಳದ ಕಡೆ ಹೊರಟಿದ್ದ, ಎರಡು ಬೈಕ್ ಗಳಿಗೆ ಎದುರಿಗೆ ಮೂಡಲಗಿಯಿಂದ ಗೋಕಾಕ ಕಡೆ ಬರುತ್ತಿದ್ದ ಸ್ವೀಪ್ಟ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಮೂವರು ದುರ್ಮರಣಕ್ಕಿಡಾಗಿದ್ದಾರೆ.
ಮೃತ ದುರ್ದೈವಿಗಳನ್ನು ಹುಣಶ್ಯಾಳದ ನಾಗಪ್ಪ ಮಗ್ಯಾಪ್ಪಗೋಳ, ಗೋಪಾಲ ಮತ್ನಾಳ ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯ ಬಗ್ಗೆ ಇನ್ನಷ್ಟೆ ಮಾಹಿತಿ ಸಿಗಬೇಕಿದೆ.
ಇದನ್ನೂ ಓದಿ:ಕಲಬುರಗಿ : ಕೋವಿಡ್ ನಿಯಮ ಉಲ್ಲಂಘಿಸಿ ಜನಾಶೀರ್ವಾದ ಯಾತ್ರೆ: ಎಫ್ಐಆರ್ ದಾಖಲು
ಸ್ವಿಫ್ಟ್ ಕಾರಿನ ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಘಟನೆ ನಡೆದ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೂ, ಸ್ಥಳದಲ್ಲಿಯೇ ಮೂವರ ಕಾಲುಗಳು ತುಂಡುತುಂಡಾಗಿವೆ. ಮೃತರೆಲ್ಲರೂ ಹುಣಶ್ಯಾಳ ಗ್ರಾಮದವರು ಎನ್ನಲಾಗುತ್ತಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರನ್ನು ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯೆ ಮೃತರಾಗಿದ್ದಾರೆ.
ಘಟಪ್ರಭಾ ಪೊಲೀಸರು ಪ್ರಾಥಮಿಕ ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್