ಚೋರ್ಲಾ ಘಾಟ್ ಬಳಿ ಭೀಕರ ಅಪಘಾತ: ಸುಟ್ಟು ಕರಕಲಾದ ಲಾರಿ-ಬಸ್
Team Udayavani, Sep 24, 2019, 11:54 AM IST
ಬೆಳಗಾವಿ: ಜಾಂಬೋಟಿ ಬಳಿಯ ಚೋರ್ಲಾ ಘಾಟ್ ನ ಕಾಲಮಣಿ ಕ್ರಾಸ್ ನ ಧಾಬಾ ಸಮೀಪ ಬಸ್ ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿದ್ದು, ನಾಲ್ಕು ಜನರಿಗೆ ಗಾಯಗಳಾಗಿವೆ.
ಖಾನಾಪುರದಿಂದ ಗೋವಾಕ್ಕೆ ತೆರಳುವ ಜಾಂಬೋಟಿ ಮಾರ್ಗದ ಚೋರ್ಲಾ ಘಾಟ್ ಬಳಿ ಅವಘಡ ಸಂಭವಿಸಿದೆ. ಗೋವಾದಿಂದ ಮುಂಡರಗಿಗೆ ಬರುತ್ತಿದ್ದ ಬಸ್ ಗೆ ಬೆಳಗಾವಿಯಿಂದ ಗೋವಾಕ್ಕೆ ಹೊರಟಿದ್ದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಆಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಡಿಸೇಲ್ ಬಾಕ್ಸ್ ಒಡೆದು ಬೆಂಕಿ ಹೊತ್ತಿಕೊಂಡಿದೆ.
ಬಸ್ ನಲ್ಲಿ 21 ಪ್ರಯಾಣಿಕರು ಇದ್ದರು. ಕೆಲವರು ನಿದ್ದೆಯ ಮಂಪರಿನಲ್ಲಿದ್ದರು. ಬೆಂಕಿ ಆವರಿಸಿಕೊಳ್ಳುತ್ತಿದ್ದಂತೆ ಬಹುತೇಕರು ಕೆಳಗಿಳಿದು ಬಂದಿದ್ದಾರೆ. ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ವಾಹನಗಳು ಸುಟ್ಟು ಕರಕಲಾಗಿದ್ದು, ವಾಹನಗಳನ್ನು ತೆಗೆದು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್