ತಗ್ಗು-ಗುಂಡಿಗಳಲ್ಲಿ ಜೋಕಾಲಿ ಪಯಣ
•ಮಳೆ ಅವಾಂತರಕ್ಕೆ ಕೆರೆಯಂತಾದ ರಸ್ತೆ ಗುಂಡಿಗಳು•ನಾಗರಿಕರಿಂದ ಇಂದು ಪ್ರತಿಭಟನೆ
Team Udayavani, Jul 8, 2019, 10:16 AM IST
ಬೈಲಹೊಂಗಲ: ಮುಂಗಾರು ಮಳೆಗೆ ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳ ಗುಂಡಿಗಳಿದ್ದ ಪರಿಣಾಮ ರಸ್ತೆಗಳೇ ಹೊಂಡಗಳಾಗಿ ಮಾರ್ಪಟ್ಟಿವೆ.
ಬಸ್ ನಿಲ್ದಾಣ ರಸ್ತೆಯಲ್ಲಿ ಬಾರಿ ಮಳೆಯಿಂದ ನೀರು ಹರಿಯುತ್ತಿದೆ. ವಾಹನ ಸವಾರರು, ಪಾದಚಾರಿಗಳು ಓಡಾಡುವುದು ಕಷ್ಟವಾಗುತ್ತಿದೆ. ಮಳೆ ನೀರು ತುಂಬಿಕೊಂಡಿರುವ ಗುಂಡಿಯನ್ನು ನೋಡದೆ ವಾಹನ ಸವಾರರು ವೇಗವಾಗಿ ಚಲಿಸುವುದರಿಂದ ಕೊಚ್ಚೆ ನೀರು ಪಾದಚಾರಿಗಳಿಗೆ, ಪಕ್ಕದಲ್ಲಿ ಚಲಿಸುವ ವಾಹನಗಳಿಗೆ ಸಿಡಿಯುತ್ತಿದೆ. ಮಳೆ ಬರುವಾಗ ಹೊಂಡದಲ್ಲಿ ನೀರು ತುಂಬಿದರೆ ಹೊಸದಾಗಿ ಬರುವವರು ಹೊಂಡಕ್ಕೆ ಬೀಳುವ ಸ್ಥಿತಿಯಿದೆ.
ಮಳೆ ಬಂದಾಗ ಮಧ್ಯಭಾಗದಲ್ಲಿ 1ರಿಂದ 2ಅಡಿಯಷ್ಟು ಮಳೆ ನೀರು ಶೇಖರಣೆಯಾಗುತ್ತದೆ. ರಸ್ತೆಯಲ್ಲಿ ಮಕ್ಕಳು ಸಂಚರಿಸಿದರೆ ಅನಾಹುತ ಕಟ್ಟಿಟ್ಟ ಬುತ್ತಿ. ಅಪಘಾತಗಳು ಸಂಭವಿಸುವ ಸಂದರ್ಭಗಳು ಇವೆ. ದ್ವಿಚಕ್ರ ವಾಹನಗಳು ಮುಳುಗೇಳುತ್ತಾ ಸಂಚರಿಸುವ ಸ್ಥಿತಿ ಉದ್ಬವವಾಗಿದೆ. ಕೆಸರುಮಯ ಇಂಥ ರಸ್ತೆಗಳಲ್ಲಿ ಸಂಚರಿಸುವ ಶಾಲಾ-ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ದಿನಂಪ್ರತಿ ಅಳುಕುತ್ತಲೆ ಚಲಿಸುತ್ತಾರೆ. ಬಹುತೇಕ ಪಟ್ಟಣದ ಭಾಗದಲ್ಲಿ ಇದೇ ಸ್ಥಿತಿ ಇದೆ.
ಪಟ್ಟಣದ ಕಿತ್ತೂರ ಚನ್ನಮ್ಮ ಸಮಾಧಿ ರಸ್ತೆ, ಬಜಾರ ರಸ್ತೆ, ಜವಳಿಕೂಟ, ಬಸವನಗರ, ವಿದ್ಯಾನಗರ ಇದೇ ಮೊದಲಾದ ಪ್ರಮುಖ ರಸ್ತೆಗಳಲ್ಲಿ ತಗ್ಗುಗುಂಡಿಗಳು ಬಿದ್ದು ಮಳೆ ನೀರು ನಿಂತರೂ ಅಧಿಕಾರಿಗಳು ಇದರತ್ತ ಗಮನ ಹರಿಸುತ್ತಿಲ್ಲ ಎಂದು ನಾಗರಿಕರು ದೂರಿದ್ದಾರೆ.
ಬಳಹಷ್ಟು ದಿನಗಳಿಂದ ಮಳೆ ನೀರು ಗುಂಡಿಗಳಲ್ಲಿ ನಿಲ್ಲುವುದರಿಂದ ಹೊಲಸು ಕೇಸರಿನಿಂದ ಆವೃತ್ತವಾದ ಪ್ರದೇಶದಲ್ಲಿ ಸೊಳ್ಳೆ, ಕ್ರಿಮಿಕೀಟಗಳಿಂದ ಸಾಂಕ್ರಾಮಿಕ ರೋಗಗಳ ತಾಣವಾಗಿ ಮಾರ್ಪಟ್ಟು, ನಾಗಕರಿಕರು ಆರೋಗ್ಯ ಸಮಸ್ಯೆ ತಲೆದೋರುವ ಸಮಸ್ಯೆ ಇದೆ.
ಒಮ್ಮೆ ರಸ್ತೆ ಗುತ್ತಿಗೆ ಪಡೆದವರು ಇಂತಿಷ್ಟು ವರ್ಷ ಅಥವಾ ಕನಿಷ್ಠ ಐದು ವರ್ಷ ನಿರ್ವಹಣೆ ಮಾಡಬೇಕೆಂಬ ನಿಯಮವಿದೆ. ಆದರೆ ಗುಂಡಿ ಬಿದ್ದು ಹಲವು ದಿನಗಳಾದರೂ ಇದರತ್ತ ಗಮನ ಹರಿಸದ ಕಾರಣ ಮಳೆ ನೀರು ಹರಿದು ರಸ್ತೆಗಳು ಮತ್ತಷ್ಟು ಹದಗೆಟ್ಟಿವೆ.
ಬಿದ್ದಿರುವ ತಗ್ಗು-ಗುಂಡಿಗಳನ್ನು ಮುಚ್ಚಿಸಿಬೇಕು. ವಾಹನ ಸವಾರರು ನಡೆದಾಡುವಂತೆ ಮತ್ತು ಚಾಲಕರು ಸರಾಗವಾಗಿ ವಾಹನ ಚಲಾಯಿಸಲು ಅಧಿಕಾರಿಗಳು ಅನುಕೂಲ ಮಾಡಿಕೊಡಬೇಕು ಪುರಸಭೆ, ವಿವಿಧ ಇಲಾಖೆ ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
•ಸಿ.ವೈ. ಮೆಣಶಿನಕಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ