- Wednesday 11 Dec 2019
ತಗ್ಗು-ಗುಂಡಿಗಳಲ್ಲಿ ಜೋಕಾಲಿ ಪಯಣ
•ಮಳೆ ಅವಾಂತರಕ್ಕೆ ಕೆರೆಯಂತಾದ ರಸ್ತೆ ಗುಂಡಿಗಳು•ನಾಗರಿಕರಿಂದ ಇಂದು ಪ್ರತಿಭಟನೆ
Team Udayavani, Jul 8, 2019, 10:16 AM IST
ಬೈಲಹೊಂಗಲ: ಮುಂಗಾರು ಮಳೆಗೆ ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳ ಗುಂಡಿಗಳಿದ್ದ ಪರಿಣಾಮ ರಸ್ತೆಗಳೇ ಹೊಂಡಗಳಾಗಿ ಮಾರ್ಪಟ್ಟಿವೆ.
ಬಸ್ ನಿಲ್ದಾಣ ರಸ್ತೆಯಲ್ಲಿ ಬಾರಿ ಮಳೆಯಿಂದ ನೀರು ಹರಿಯುತ್ತಿದೆ. ವಾಹನ ಸವಾರರು, ಪಾದಚಾರಿಗಳು ಓಡಾಡುವುದು ಕಷ್ಟವಾಗುತ್ತಿದೆ. ಮಳೆ ನೀರು ತುಂಬಿಕೊಂಡಿರುವ ಗುಂಡಿಯನ್ನು ನೋಡದೆ ವಾಹನ ಸವಾರರು ವೇಗವಾಗಿ ಚಲಿಸುವುದರಿಂದ ಕೊಚ್ಚೆ ನೀರು ಪಾದಚಾರಿಗಳಿಗೆ, ಪಕ್ಕದಲ್ಲಿ ಚಲಿಸುವ ವಾಹನಗಳಿಗೆ ಸಿಡಿಯುತ್ತಿದೆ. ಮಳೆ ಬರುವಾಗ ಹೊಂಡದಲ್ಲಿ ನೀರು ತುಂಬಿದರೆ ಹೊಸದಾಗಿ ಬರುವವರು ಹೊಂಡಕ್ಕೆ ಬೀಳುವ ಸ್ಥಿತಿಯಿದೆ.
ಮಳೆ ಬಂದಾಗ ಮಧ್ಯಭಾಗದಲ್ಲಿ 1ರಿಂದ 2ಅಡಿಯಷ್ಟು ಮಳೆ ನೀರು ಶೇಖರಣೆಯಾಗುತ್ತದೆ. ರಸ್ತೆಯಲ್ಲಿ ಮಕ್ಕಳು ಸಂಚರಿಸಿದರೆ ಅನಾಹುತ ಕಟ್ಟಿಟ್ಟ ಬುತ್ತಿ. ಅಪಘಾತಗಳು ಸಂಭವಿಸುವ ಸಂದರ್ಭಗಳು ಇವೆ. ದ್ವಿಚಕ್ರ ವಾಹನಗಳು ಮುಳುಗೇಳುತ್ತಾ ಸಂಚರಿಸುವ ಸ್ಥಿತಿ ಉದ್ಬವವಾಗಿದೆ. ಕೆಸರುಮಯ ಇಂಥ ರಸ್ತೆಗಳಲ್ಲಿ ಸಂಚರಿಸುವ ಶಾಲಾ-ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ದಿನಂಪ್ರತಿ ಅಳುಕುತ್ತಲೆ ಚಲಿಸುತ್ತಾರೆ. ಬಹುತೇಕ ಪಟ್ಟಣದ ಭಾಗದಲ್ಲಿ ಇದೇ ಸ್ಥಿತಿ ಇದೆ.
ಪಟ್ಟಣದ ಕಿತ್ತೂರ ಚನ್ನಮ್ಮ ಸಮಾಧಿ ರಸ್ತೆ, ಬಜಾರ ರಸ್ತೆ, ಜವಳಿಕೂಟ, ಬಸವನಗರ, ವಿದ್ಯಾನಗರ ಇದೇ ಮೊದಲಾದ ಪ್ರಮುಖ ರಸ್ತೆಗಳಲ್ಲಿ ತಗ್ಗುಗುಂಡಿಗಳು ಬಿದ್ದು ಮಳೆ ನೀರು ನಿಂತರೂ ಅಧಿಕಾರಿಗಳು ಇದರತ್ತ ಗಮನ ಹರಿಸುತ್ತಿಲ್ಲ ಎಂದು ನಾಗರಿಕರು ದೂರಿದ್ದಾರೆ.
ಬಳಹಷ್ಟು ದಿನಗಳಿಂದ ಮಳೆ ನೀರು ಗುಂಡಿಗಳಲ್ಲಿ ನಿಲ್ಲುವುದರಿಂದ ಹೊಲಸು ಕೇಸರಿನಿಂದ ಆವೃತ್ತವಾದ ಪ್ರದೇಶದಲ್ಲಿ ಸೊಳ್ಳೆ, ಕ್ರಿಮಿಕೀಟಗಳಿಂದ ಸಾಂಕ್ರಾಮಿಕ ರೋಗಗಳ ತಾಣವಾಗಿ ಮಾರ್ಪಟ್ಟು, ನಾಗಕರಿಕರು ಆರೋಗ್ಯ ಸಮಸ್ಯೆ ತಲೆದೋರುವ ಸಮಸ್ಯೆ ಇದೆ.
ಒಮ್ಮೆ ರಸ್ತೆ ಗುತ್ತಿಗೆ ಪಡೆದವರು ಇಂತಿಷ್ಟು ವರ್ಷ ಅಥವಾ ಕನಿಷ್ಠ ಐದು ವರ್ಷ ನಿರ್ವಹಣೆ ಮಾಡಬೇಕೆಂಬ ನಿಯಮವಿದೆ. ಆದರೆ ಗುಂಡಿ ಬಿದ್ದು ಹಲವು ದಿನಗಳಾದರೂ ಇದರತ್ತ ಗಮನ ಹರಿಸದ ಕಾರಣ ಮಳೆ ನೀರು ಹರಿದು ರಸ್ತೆಗಳು ಮತ್ತಷ್ಟು ಹದಗೆಟ್ಟಿವೆ.
ಬಿದ್ದಿರುವ ತಗ್ಗು-ಗುಂಡಿಗಳನ್ನು ಮುಚ್ಚಿಸಿಬೇಕು. ವಾಹನ ಸವಾರರು ನಡೆದಾಡುವಂತೆ ಮತ್ತು ಚಾಲಕರು ಸರಾಗವಾಗಿ ವಾಹನ ಚಲಾಯಿಸಲು ಅಧಿಕಾರಿಗಳು ಅನುಕೂಲ ಮಾಡಿಕೊಡಬೇಕು ಪುರಸಭೆ, ವಿವಿಧ ಇಲಾಖೆ ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
•ಸಿ.ವೈ. ಮೆಣಶಿನಕಾಯಿ
ಈ ವಿಭಾಗದಿಂದ ಇನ್ನಷ್ಟು
-
ಬೆಳಗಾವಿ: ಉಪ ಚುನಾವಣೆ ಮುಗಿದು ಫಲಿತಾಂಶ ಬಂದ ಬೆನ್ನಲ್ಲೇ ಯಾರು ಉಪ ಮುಖ್ಯಮಂತ್ರಿ, ಯಾರಿಗೆ ಸಚಿವ ಸ್ಥಾನ, ಜಿಲ್ಲಾ ಉಸ್ತುವಾರಿ ಯಾರಿಗೆ ಎಂಬ ಚರ್ಚೆ ಜಿಲ್ಲೆಯಲ್ಲಿ...
-
ಮೂಡಲಗಿ: ಗೋಕಾಕ ಮತಕ್ಷೇತ್ರದ ಇತಿಹಾಸದಲ್ಲಿಯೇ ಪ್ರಥಮ ಭಾರೀಗೆ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರು ಆಯ್ಕೆಯಾಗಿದರಿಂದ ಮೂಡಲಗಿ ಪಟ್ಟಣ ಸೇರಿದಂತೆ ಅರಭಾವಿ ಕ್ಷೇತ್ರದಲ್ಲಿ...
-
ಹಾರೂಗೇರಿ: ಅಬಾಜಿಯವರು ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಬಡ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣವನ್ನು ನೀಡುವುದರ ಮೂಲಕ ಸಹಸ್ರಾರು...
-
ಚಿಕ್ಕೋಡಿ: ಕೃಷ್ಣಾ ನದಿಗೆ ಕಟ್ಟಿರುವ ಕಲ್ಲೋಳ-ಯಡೂರ ಸೇತುವೆ ಕಳೆದ ಹತ್ತು ವರ್ಷಗಳಿಂದ ಶಿಥಿಲಗೊಂಡು ಈಗಲೋ ಆಗಲೋ ಬೀಳುವ ಹಂತ ತಲುಪಿದೆ. ಸೇತುವೆ ಮೇಲೆ ಭಾರಿ ವಾಹನಗಳು...
-
ಚಿಕ್ಕೋಡಿ: ರಾಜ್ಯದ ಅಂಗನವಾಡಿ ಕಟ್ಟಡಗಳಿಗೆ ಪುನನಿರ್ಮಾಣ ಹಾಗೂ ನವೀಕರಣದ ಅವಶ್ಯಕವಿದ್ದು, ಕೂಡಲೇ ಕೇಂದ್ರ ಸಚಿವರು ಗಮನ ಹರಿಸಿ ಸೂಕ್ತ ಅನುದಾನ ಬಿಡುಗಡೆ ಮಾಡಬೇಕೆಂದು...
ಹೊಸ ಸೇರ್ಪಡೆ
-
ಮಡಿಕೇರಿ: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದು, ಕಾಡಾನೆ ಹಾವಳಿಯಿಂದಾಗಿ ಮಾನವ ಪ್ರಾಣ ಹಾನಿ, ಬೆಳೆ ಹಾನಿ ಉಂಟಾಗುತ್ತಿದ್ದು, ಜನರು ಭಯ ಭೀತಿಯಿಂದ...
-
ಹೊಸದಿಲ್ಲಿ: ಕಳೆದ ಕೆಲವು ತಿಂಗಳಿನಿಂದ ಆರ್ಥಿಕ ವಲಯದಲ್ಲಾಗುತ್ತಿರುವ ಏರಿಳಿತ ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ....
-
ಮಂಗಳೂರು: ದೇಶ, ಧರ್ಮ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಆಗುವುದಿಲ್ಲ, ಬಿಜೆಪಿಯ ಮುಂದಿನ ಚುನಾವಣಾ ವಿಷಯ ಇದು. ಎಲ್ಲರೂ ಒಂದಾಗಿ ಇದನ್ನು ವಿರೋಧಿಸಬೇಕು ಎಂದು...
-
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ಶಾಲೆ ಪ್ರಾರಂಭವಾದ ದಿನದಂದೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸುವಂತೆ ಕ್ರಮಕೈಗೊಳ್ಳಬೇಕು...
-
ನವದೆಹಲಿ: ಅಯೋಧ್ಯೆ ಭೂ ವಿವಾದದ ಕುರಿತು ನೀಡಿರುವ ತೀರ್ಪಿನ ಬಗ್ಗೆ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ತೆರೆದ ಕೋರ್ಟ್ (ಒಪನ್ ಕೋರ್ಟ್) ನಲ್ಲಿ...