ರಸ್ತೆ ಕೆಸರು ಗದ್ದೆ; ಕಂಡಲ್ಲಿ ಕಸದ ರಾಶಿ
Team Udayavani, Sep 11, 2019, 10:37 AM IST
ಬೈಲಹೊಂಗಲ: ಬಸವೇಶ್ವರ ಆಶ್ರಯ ಕಾಲೋನಿಯ ಕೆಸರಿನ ರಸ್ತೆ.
ಬೈಲಹೊಂಗಲ: ಪಟ್ಟಣದ ಬಸವೇಶ್ವರ ಆಶ್ರಯ ಕಾಲೋನಿಯಲ್ಲಿ ನೈರ್ಮಲ್ಯ ಕೊರತೆ ರಾರಾಜಿಸುತ್ತಿದ್ದು, ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡುವಂತೆ ಇಲ್ಲಿನ ರಸ್ತೆಗಳು ಕೆಸರುಗದ್ದೆಯಾಗಿ ಸಾರ್ವಜನಿಕರಿಗೆ ನೆಮ್ಮದಿ ಕೆಡಸಿವೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹೊಂದಿಕೊಂಡಂತೆ ಇರುವ ಬಹುತೇಕ ಬಡಾವಣೆಗಳ ಒಳರಸ್ತೆಗಳ ಬದಿ ಸಮರ್ಪಕದ ಕಸದ ತೊಟ್ಟಿ ಇರದ ಪರಿಣಾಮ ಎಲ್ಲೆಂದರಲ್ಲಿ ಕಸದ ರಾಶಿ, ತ್ಯಾಜ್ಯಗಳು ಬಿದ್ದಿವೆ. ಅಲ್ಲಲ್ಲಿ ಹಂದಿ, ಬೀದಿ-ನಾಯಿ ಹಾಗೂ ಬಿಡಾಡಿ ಜಾನುವಾರುಗಳ ತಾಣವಾಗಿ ಮಾರ್ಪಟ್ಟಿದೆ.
ಎಲ್ಲೆಂದರಲ್ಲಿ ಕಸದ ರಾಶಿ: ಸರಕಾರಿ ಗೋಮಾಳ ಜಾಗೆ ಬಳಿ ಹಂದಿಗಳ ತಾಣವಾಗಿದೆ. ಎಲ್ಲ ಸಮುದಾಯ ಜನ ವಾಸಿಸುವ ಬಡಾವಣೆ ಜನತೆಗೆ ಎಲ್ಲ ಓಣಿಯಲ್ಲಿ ನೆರ್ಮಲ್ಯ ಕೊರತೆಯಿಂದ ನಾನಾ ಸಾಂಕ್ರಮಿಕ ರೋಗಗಳ ಭೀತಿ ಎದುರಿಸುವಂತಾಗಿದೆ. ರಸ್ತೆ ಮೇಲೆ ಕೆಲ ದಿನಗಳಿಂದ ಬಿದ್ದಿರುವ ಮಳೆಯಿಂದ ರಸ್ತೆಗಳು ಕೆಸರುಮಯವಾಗಿ ಪರಿಣಮಿಸಿದೆ. ಪೌರ ಕಾರ್ಮಿಕರು ಸ್ಚಚ್ಛತೆ ಕಾಪಾಡಲು ಮುಂದಾಗದಿರುವುದು ಜನರ ಆಕ್ರೋಶಕ್ಕೆ ಕಾರಣವಾದರೆ, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ರೋಗ ತಡೆಗೆ ಕ್ರಮ ಕೈಗೊಳ್ಳಿ: ಇದೇ ಕಾಲೋನಿ ಸಮುದಾಯ ಭವನದ ಬಳಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಮಳೆಯಿಂದ ಹಲವು ಕುಟುಂಬಗಳು ಮನೆ ಕಳೆದುಕೊಂಡು ಆಶ್ರಯವಿಲ್ಲದೆ ಸಮುದಾಯ ಭವನದಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಅಂಥವರನ್ನು ಕಂಡು ಸೂಕ್ತ ಮನೆ ಒದಗಿಸಲು ಪ್ರಯತ್ನಿಸುತ್ತಿಲ್ಲ. ಸರಕಾರಿ ಸಾರ್ವಜನಿಕ ಆಸ್ಪತ್ರೆ ಬಳಿ ಈ ಕಾಲೋನಿ ಇದ್ದರೂ ಕಾಲೋನಿಯ ಸಾಂಕ್ರಾಮಿಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ ಎಂದು ನಾಗರಿಕರು ದೂರಿದ್ದಾರೆ.
ರಸ್ತೆ ಸ್ವಚ್ಛತೆಗೆ ಒತ್ತಾಯ: ಬಸವೇಶ್ವರ ಆಶ್ರಯ ನಗರ ಸರಕಾರಿ ಪ್ರಾಥಮಿಕ ಶಾಲೆ ನಂ.8 ಇಲ್ಲಿ ಕಸ ಬೆಳೆದು ನಿಂತಿದೆ. ಶಾಲೆಯ ಮುಂದೆಯ ರಾಡಿ ಇದ್ದರೂ ಅದನ್ನು ಸ್ವಚ್ಛಗೊಳಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ. ವಿದ್ಯಾರ್ಥಿಗಳು ಇಂಥ ಕೆಸರು ರಸ್ತೆಯಲ್ಲಿ ನಡೆದು ಶಾಲೆಗೆ ಬರಬೇಕಿದೆ. ಹೀಗಾಗಿ ಹಲವು ಬಾರಿ ಮಕ್ಕಳು ಜಾರಿ ರಸ್ತೆಯಲ್ಲಿ ಬಿದ್ದು ಪೆಟ್ಟು ತಗುಲಿದ ಉದಾಹರಣೆ ಸಾಕಷ್ಟಿವೆ ಎಂದು ನಾಗರಿಕರು ದೂರಿದ್ದಾರೆ.
•ಸಿ.ವೈ.ಮೆಣಶಿನಕಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ