ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ


Team Udayavani, Aug 28, 2020, 6:22 PM IST

ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ

ಚಿಕ್ಕೋಡಿ: ಗಡಿಭಾಗದ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸದಲಗಾ ಪಟ್ಟಣದಲ್ಲಿ ಕೇಂದ್ರೀಯ ಮಹಾವಿದ್ಯಾಲಯ ಆಡಳಿತಾತ್ಮಕ ಮಂಜೂರಾತಿ ಪಡೆದಿದ್ದು, ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಾಣ ಕೈಗೊಳ್ಳಲಾಗಿದೆ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.

ತಾಲೂಕಿನ ಸದಲಗಾ ಪಟ್ಟಣದ ವ್ಯಾಪ್ತಿಯ ಬೈನಾಕವಾಡಿ ಗ್ರಾಮದಿಂದ  ಕೇಂದ್ರೀಯ ಮಹಾವಿದ್ಯಾಲಯದ ಮಾರ್ಗವಾಗಿ ಸದಲಗಾ-ನಾಗರಾಳ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ರಸ್ತೆ ಕಾಮಗಾರಿಗೆ ಎಸ್‌ ಎಫ್‌ಸಿ ಅನುದಾನದ ಯೋಜನೆಯಡಿ 15.55 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಒಂದು ತಿಂಗಳಲ್ಲೇ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿ ದೃಷ್ಟಿಕೋನ ಇಟ್ಟುಕೊಂಡು ಶ್ರಮಿಸಲಾಗುತ್ತಿದೆ. ರೈತರ ಬಗ್ಗೆ ಕಾಳಜಿ ವಹಿಸಿ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವುದರ ಜೊತೆಗೆ ಆರೋಗ್ಯದ ಕುರಿತು ಕಾಳಜಿ ವಹಿಸಲಾಗುತ್ತಿದೆ ಎಂದರು.

ಅಭಿಜಿತ ಪಾಟೀಲ, ಸತೀಶ ಪಾಟೀಲ, ಬಸವರಾಜ ಹಣಬರ, ಉದಯ ಬದನಿಕಾರಿ, ರವಿ ಗೋಸಾವಿ, ಪ್ರಕಾಶ ಅನೂರೆ, ಸಂತೋಷ ನವಲೆ, ಸಮೀರ ಪಾಟೀಲ, ಪೀರಗೌಡ ಪಾಟೀಲ, ಅಪ್ಪಾಸಾಬ ಕುರಬೇಟ್ಟಿ, ದಿಲೀಪ ಹಂಚನಾಳೆ, ಋತುರಾಜ ಪಾಟೀಲ, ಸಚಿನ್‌ ಬಿಂದಗೆ ಇದ್ದರು.

……………………………………………………………………………………………………………………… 

ಕೋವಿಡ್ ವಾರಿಯರ್ಸ್‌ಗೆ ಚಿರಋಣಿ : ಹುಕ್ಕೇರಿ: ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಹೊರಡಿಸಿದ ಲಾಕ್‌ಡೌನ್‌ ಸಮಯದಲ್ಲಿ ತಾಲೂಕಾ ಆಡಳಿತದೊಡನೆ ಸಹಕರಿಸಿದ ಸಾರ್ವಜನಿಕರಿಗೆ ಹಾಗೂ ವಾರಿಯರ್ಸ್‌ಗಳಿಗೆ ಚಿರಋಣಿಯಾಗಿದ್ದೇನೆಂದು ತಹಶೀಲ್ದಾರ್‌ ಅಶೋಕ ಗುರಾಣಿ ಹೇಳಿದರು. ಪಟ್ಟಣದ ವಿಕರ್ತಮಠದಲ್ಲಿ ವೃತ್ತಿನಿರತ ಛಾಯಾಗ್ರಾಹಕರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದಿನದಿಂದ ದಿನಕ್ಕೆ ಕೋವಿಡ್ ರೋಗವು ವ್ಯಾಪಿಸುತ್ತಿದೆ. ಸರ್ಕಾರದ ನಿಯಮಾವಳಿಗಳನ್ನು ನಾವೆಲ್ಲರೂ ಪಾಲಿಸಿದಲ್ಲಿ ರೋಗ ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ. ಕೋವಿಡ್ ವಾರಿಯರ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಪರ್ತಕರ್ತರು, ಆರೋಗ್ಯ, ಕಂದಾಯ ಸಿಬ್ಬಂದಿ, ಛಾಯಾಗ್ರಾಹಕರು ಸೇರಿದಂತೆ ಇನ್ನಿತರ ಇಲಾಖೆ ಅಧಿಕಾರಿಗಳು ಕೂಡ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.

ಸಂಘದ ಅಧ್ಯಕ್ಷ ಸುರೇಶ ಜಿನರಾಳೆ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ, ಕಾರ್ಯದರ್ಶಿ ಮಂಜುನಾಥ ಕುಂದರಗಿ, ನಿರ್ದೇಶಕ ಬಸವರಾಜ ರಾಮಣ್ಣವರ, ಮಧು ಸೋನಗೋಜೆ, ಹಿರಿಯ ಛಾಯಾಗ್ರಾಹಕ ಶಶಿಕಾಂತ ಮಿಶ್ರಕೋಟಿ, ಬಾಬು ನಾಯಿಕ, ಅಪ್ಪು ಹುಕ್ಕೇರಿ ಉಪಸ್ಥಿತರಿದ್ದರು. ಶಿದ್ರಾಮ ಮೂತ್ತೂರ ಸ್ವಾಗತಿಸಿದರು. ಸಿ.ಎಂ. ದರಬಾರಿ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.