ಸಂಸ್ಕೃತಿ ಉಳಿಸುವಲ್ಲಿ ಮಹಿಳೆ ಪಾತ್ರ ಮುಖ್ಯ

ಚೆನ್ನಮ್ಮ-ಓಬವ್ವ ಮಹಿಳೆಯರಿಗೆ ಆದರ್ಶವಾಗಲಿ

Team Udayavani, Mar 25, 2022, 3:16 PM IST

14

ಗೋಕಾಕ: ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಮಹಿಳೆಯರ ಪಾತ್ರ ಪ್ರಮುಖ ಎಂದು ಘಟಪ್ರಭಾ ಕೆಂಪಯ್ಯಸ್ವಾಮಿ ಮಠದ ಶ್ರೀ ಡಾ| ಅಲ್ಲಮಪ್ರಭು ಸ್ವಾಮಿಗಳು ಹೇಳಿದರು.

ತಾಲೂಕಿನ ಕುಂದರಗಿಯ ಅಡವಿಸಿದ್ದೇಶ್ವರ ಮಠದ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಕುಂದರನಾಡೋತ್ಸವ-2022ರ ಮಹಿಳಾ ಸಮಾವೇಶ ಹಾಗೂ ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಕ್ಕಮಹಾದೇವಿಯವರು ಬಸವಣ್ಣನ ಕಾಲದಲ್ಲಿ ಮಹಿಳಾ ಕ್ರಾಂತಿ ಮಾಡಿದ್ದರು. ಸಮಾಜದಲ್ಲಿ ಪ್ರತಿ ಮನೆ ಉದ್ಧಾರವಾಗಬೇಕೆಂದರೆ ಮಹಿಳೆಯ ಪಾತ್ರ ಪ್ರಮುಖವಾದದ್ದು. ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರಂತಹ ಮಹನೀಯರು ನಮ್ಮ ದೇಶ, ಮಹಿಳೆಯರಿಗೆ ಆದರ್ಶವಾಗಬೇಕು. ನಾಡಿನಲ್ಲಿ ಅಕ್ಕನ ಬಳಗವನ್ನು ಸಂಸ್ಥಾಪಿಸಿ ಮಹಿಳೆಯರಿಗೆ ಸ್ವಾತಂತ್ರ್ಯ ನೀಡಿದವರು ಹಾನಗಲ್‌ ಶ್ರೀಗಳು. ಪ್ರತಿಯೊಬ್ಬ ಮಹಿಳೆಯು ಶಿಕ್ಷಣ ಪಡೆದು ಉನ್ನತ ಹಂತಕ್ಕೆ ತಲುಪಬೇಕು ಎಂದು ಆಶೀರ್ವದಿಸಿದರು.

ಬೆಳಗಾವಿ ನಾಗನೂರು ರುದ್ರಕ್ಷಿಮಠದ ಶ್ರೀ ಡಾ|ಅಲ್ಲಮಪ್ರಭು ಸ್ವಾಮಿಗಳು ಮಾತನಾಡಿ, ಪ್ರತಿಯೊಂದು ವಿಷಯದಲ್ಲಿ ತಾಯಿಯನ್ನು ಕಾಣುವ ದೇಶ ಭಾರತ. ಮಹಿಳೆಯರಿಗೆ ಇರುವ ಕರುಣೆ ಬೇರೆ ಯಾವುದೇ ವಸ್ತುವಿನಲ್ಲಿ ಕಾಣಲು ಅಸಾಧ್ಯ. ಅಮರಸಿದ್ದೇಶ್ವರ ಸ್ವಾಮಿಗಳು ಶ್ರೀ ಮಠವನ್ನು ನಾಡಿನ ಶ್ರೇಷ್ಠ ಮಠವಾಗಿಸಲು ಶ್ರಮಿಸುತ್ತಿದ್ದು, ಅವರಿಗೆ ಪ್ರತಿಯೊಬ್ಬರು ಬೆನ್ನೆಲುಬಾಗಿ ನಿಲ್ಲಬೇಕು ಎಂದರು.

ಮಹಿಳಾ ಸಮಾವೇಶ ಅಂಗವಾಗಿ ಶ್ರೀಮಠದ ಭಕ್ತರಾದ ಪಿಎಸ್‌ಐ ಗೀತಾರೆಡ್ಡಿ ಅವರನ್ನು ಸನ್ಮಾನಿಸಲಾಯಿತು. ಶ್ರೀ ಮಠದಿಂದ ಮುತ್ತೈದೆಯರಿಗೆ ಉಡಿ ತುಂಬಲಾಯಿತು.

ಮೂಲಗದ್ದೆಯ ಚನ್ನಬಸವ ಸ್ವಾಮಿಗಳು, ವಿಶ್ವನಾಥ ದೇವರು, ಅರಳಿಕಟ್ಟಿಯ ಚನ್ನಬಸವ ದೇವರು, ಘಟಪ್ರಭಾದ ಅನ್ನದಾನಿ ದೇವರು, ಯುವ ಧುರೀಣರಾದ ಪ್ರಕಾಶಗೌಡ್ರು ಪೋಲಿಸ್‌ಗೌಡ್ರು, ಬೆಳಗಾವಿ ಸಮಾಜ ಸೇವಕರಾದ ಮಹಾಂತೇಶ ವಕ್ಕುಂದ, ಇತರರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.