ರಾಜಹಂಸಗಡ ಅಭಿವೃದ್ಧಿಗೆ 15 ಕೋಟಿ ಪ್ರಸ್ತಾವನೆ
Team Udayavani, Nov 8, 2019, 12:26 PM IST
ಬೆಳಗಾವಿ: ನಗರದ ಹೊರವಲಯದಲ್ಲಿರುವ ಐತಿಹಾಸಿಕ ಸುಂದರ ತಾಣ ರಾಜಹಂಸಗಡ ಕೋಟೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ತಿಳಿಸಿದ್ದಾರೆ.
ಈ ಕುರಿತು ಪ್ರತಿಕಾ ಪ್ರಕಟಣೆ ನೀಡಿರುವ ಅವರು, ಕೋಟೆ ಅಭಿವೃದ್ಧಿಗಾಗಿ ಮೊದಲ ಹಂತದಲ್ಲಿ 3.50 ಕೋಟಿ ರೂ. ಬಿಡುಗಡೆಯಾಗಿದೆ. ರಾಜಹಂಸಗಡ ಅತ್ಯಂತ ಸುಂದರ ಪ್ರದೇಶವಾಗಿದ್ದರೂ ಈವರೆಗೂ ನಿರ್ಲಕ್ಷಿಸಲ್ಪಟ್ಟಿತ್ತು. ಪ್ರವಾಸಿ ತಾಣವಾಗಿ ದೇಶ, ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ಎಲ್ಲ ಅವಕಾಶಗಳಿದ್ದರೂ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ಇಂಥ ಐತಿಹಾಸಿಕ ಸ್ಥಳವನ್ನು ಪ್ರವಾಸಿ ತಾಣವಾಗಿ ಮಾಡುವಲ್ಲಿ ಈ ಹಿಂದಿನ ಜನಪ್ರತಿನಿಧಿಗಳು ಆಸಕ್ತಿ ತೋರಿರಲಿಲ್ಲ ಎಂದು ಆರೋಪಿಸಿದ್ದಾರೆ. ಈ ಹಿಂದಿನ ಸಮ್ಮಿಶ್ರ ಸರಕಾರವಿದ್ದಾಗ 15 ಕೋಟಿ ರೂ. ಅಂದಾಜು ವೆಚ್ಚದ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲಾಗಿತ್ತು. ಪ್ರವಾಸೋದ್ಯಮ ಇಲಾಖೆಯಿಂದ ಮೊದಲ ಹಂತದಲ್ಲಿ 5ಕೋಟಿ ರೂ. ಮಂಜೂರಾಗಿದ್ದು, 3 ಕೋಟಿ ರೂ. ಬಿಡುಗಡೆಯಾಗಿದೆ. ಸದ್ಯದಲ್ಲೇ ಕೆಲಸ ಆರಂಭಿಸಲಾಗುತ್ತಿದೆ ಎಂದು ಹೆಬ್ಟಾಳಕರ ತಿಳಿಸಿದ್ದಾರೆ.
ರಾಜಹಂಸಗಡದಲ್ಲಿ ಶಿವಾಜಿಯ ಮೂರ್ತಿ ಸ್ಥಾಪಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದಕ್ಕಾಗಿ 50 ಲಕ್ಷ ರೂ. ಬಿಡುಗಡೆಯಾಗಿದೆ. ಈ ಕಾರ್ಯವೂ ಆರಂಭವಾಗಿದೆ. ಶಿವಸ್ಮಾರಕ ನಿರ್ಮಾಣ, ಹೆರಿಟೆಜ್ ಪಾರ್ಕ್ ಸ್ಥಾಪನೆ ಮಾಡಲಾಗುವುದು. ಪ್ರವಾಸಿಗರಿಗೆ ಬಂದು ಹೋಗಿ ಮಾಡಲು ಅನುಕೂಲವಾಗುವಂತೆ ರಸ್ತೆಯನ್ನೂ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಯೋಜನೆ ಮೂಲಕ ಸುತ್ತಮುತ್ತಲೂ ಇರುವ ಸುಳಗಾ, ಯಳ್ಳೂರು, ದೇಸೂರು,ನಂದಿಹಳ್ಳಿ ಭಾಗದ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ ಎನ್ನುವುದು ಕೂಡ ನನ್ನ ಆಶಯ ಎಂದು ತಿಳಿಸಿದ್ದಾರೆ.
ಬೆಳಗಾವಿ ನಗರದಿಂದ ಕೇವಲ 7 ಕಿಮೀ ಅಂತರದಲ್ಲಿರುವ ಶಿವಾಜಿ ಕಟ್ಟಿದ ಕೋಟೆ ರಾಜಹಂಸಗಡ. ಅತ್ಯಂತ ಎತ್ತರ ಪ್ರದೇಶದಲ್ಲಿರುವ ಕೋಟೆ ಪ್ರದೇಶ ಮನಮೋಹಕವಾಗಿದೆ. ಯಾವುದೇ ಸೌಲಭ್ಯವಿಲ್ಲದಿದ್ದರೂ ನಿತ್ಯ ಪ್ರವಾಸಿಗರು ಆಗಮಿಸುತ್ತಾರೆ. ಸರಿಯಾದ ಯೋಜನೆ ಜಾರಿಯಾದರೆ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರನ್ನು ಸೆಳೆಯಬಹುದು. ಇದೀಗ ರೂಪಿಸಲಾಗಿರುವ ಯೋಜನೆ ಜಾರಿಯಾದಲ್ಲಿ ಬೆಳಗಾವಿಯಲ್ಲಿ ಸುಂದರ ಪ್ರವಾಸಿ ತಾಣ ಸಿದ್ಧವಾಗಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ