ಅಂಗನವಾಡಿ ಕಾರ್ಯಕರ್ತೆಯರಿಗೂ 30 ಲಕ್ಷ ರೂ. ಜೀವವಿಮೆ
Team Udayavani, May 2, 2020, 5:49 PM IST
ಚಿಕ್ಕೋಡಿ: ಅಂಗನವಾಡಿ ಕೋವಿಡ್ 19 ವಾರಿಯರ್ಸ್ ಜೀವಹಾನಿಯಾದರೇ 30 ಲಕ್ಷ ರೂ. ಪರಿಹಾರ ನೀಡುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ಕೋವಿಡ್ 19 ವೈರಸ್ ಬಗ್ಗೆ ಮನೆ ಮನೆಗೆ ಹೋಗಿ ಜಾಗೃತಿ ಮೂಡಿಸುತ್ತಿರುವ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಕೋವಿಡ್ 19 ಸೋಂಕು ತಗಲು ಜೀವಹಾನಿಯಾದರೆ ಅಂಥವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ತಿಳಿಸಿದರು. ದೇಶದ ಆಶಾ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ಘೋಷಿಸಿದ್ದರು. ಆಶಾ ಕಾರ್ಯಕರ್ತರ ಸರಿಸಮನಾಗಿ ಅಂಗನವಾಡಿ ಕಾರ್ಯಕರ್ತರು ಕೋವಿಡ್ 19 ನಿಯಂತ್ರಿಸಲು ಕೆಲಸ ಮಾಡುತ್ತಿದ್ದು, ನಮಗೂ ಪರಿಹಾರ ಘೋಷಿಸಬೇಕೆಂದು ಅಂಗನವಾಡಿ ಕಾರ್ಯಕರ್ತರು ನನ್ನ ಬಳಿ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿ ನಾನು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದಾಗ ತಕ್ಷಣ ಸಿಎಂ 30 ಲಕ್ಷ ರೂ. ಪರಿಹಾರ ನೀಡುವುದಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು