ತೊಗರಿ ಬೆಳೆಗಾರರ ಸಹಾಯಕ್ಕೆ ಧಾವಿಸಿ
Team Udayavani, Nov 28, 2021, 2:29 PM IST
ಐಗಳಿ: ಅಥಣಿ ತಾಲೂಕಿನಲ್ಲಿ ತೊಗರಿ ಬೆಳೆಗಾರರು ಅಪಾರ ಹಾನಿಗೊಳಗಾಗಿದ್ದು, ಸರಕಾರ ಸಮಗ್ರ ಸಮೀಕ್ಷೆ ಮಾಡಿ ಯೋಗ್ಯ ಪರಿಹಾರ ನೀಡಬೇಕು ಹಾಗೂ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಕರಿ ಮಸೂತಿ ನೀರಾವರಿಯಿಂದ ಹೊರಗುಳಿದ ತಾಲೂಕಿನ ಒಣ ಬೇಸಾಯದ ಜಮೀನುಗಳಲ್ಲಿ ತೊಗರಿ ಬಿತ್ತನೆಗೆ ವೇಳೆಯಲ್ಲಿ ಮಳೆ ಕೊರತೆಯಿಂದ ಕೆಲಭಾಗ ಸರಿಯಾಗಿ ನಾಟಿ ಆಗಿಲ್ಲ. ಬಹುತೇಕ ಜಮೀನುಗಳಿಗೆ ನೀರಿನ ಕೊರತೆಯಾಗಿ ಹಾನಿಗೊಳಪಟ್ಟಿತು. ಇನ್ನೂಳಿದ ಕೆಲ ತೊಗರಿ ಬೆಳೆ ಕಾಳು ತುಂಬುವ ಸಮಯದಲ್ಲಿಯೇ ಅಕಾಲಿಕ ತುಂತುರು ಮಳೆ ಆಪತ್ತು ತಂದು ಕೋಟ್ಯಾಂತರ ಫಸಲು ಹಾಳು ಮಾಡಿತು. ಕಾರಣ ಒಣ ಬೇಸಾಯಗಾರರ ಬದುಕು ದುಸ್ತರವಾಗಿದೆ.
ಬಿಜೆಪಿ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿದರು.
ಕಾಯಿ ಕಟ್ಟುವ ಹಂತದಲ್ಲಿಯೇ ಒಣಗಿದ ತೊಗರಿ ಬೆಳೆ. ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ನೀಡಿ ತೊಂದರೆಯಲ್ಲಿರುವ ತೊಗರಿ ಬೆಳೆಗಾರರ ಸಹಾಯಕ್ಕೆ ಬರಬೇಕು ಎಂದು ಕೇದಾರಿಗೌಡ ಬಿರಾದಾರ ಒತ್ತಾಯಿಸಿದ್ದಾರೆ.
ಅಥಣಿ ಪೂರ್ವ ಭಾಗದ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಮಳೆಯಾಗಿಲ್ಲ. ಹೀಗಾಗಿ ತೊಗರಿ ಬೆಳೆ ಒಣಗುತ್ತಿವೆ. ಇಲಾಖೆ ಸಮಗ್ರ ಸರ್ವೇ ಮಾಡಿ ರೈತರಿಗೆ ಪರಿಹಾರ ಮತ್ತು ಅಥಣಿ ತಾಲೂಕನ್ನು ಬರ ಪ್ರದೇಶ ಎಂದು ಘೋಷಿಸಬೇಕು ಎಂದು ತಾಪಂ ಸದಸ್ಯ ಯಲ್ಲಪ್ಪ ಮಿರ್ಜಿ ಆಗ್ರಹಿಸಿದ್ದಾರೆ.
ಅಲ್ಪಸ್ವಲ್ಪ ಜಮೀನಿರುವ ರೈತರು ಬೆಳೆ ತೊಗರಿಯನ್ನೇ ಅವಲಂಬಿಸಿದ್ದು, ಬೆಳೆ ಹಾಳಾಗಿ ಅವರ ಬದುಕು ಕಷ್ಟಕರವಾಗಿದೆ. ಕಾರಣ ಸರಕಾರ ಯೋಗ್ಯ ಪರಿಹಾರ ಕೊಡಬೇಕು ಎಂದು ಐಗಳಿ ಪ್ರಗತಿಪರ ರೈತ ಶಂಕರಗೌಡ ಪಾಟೀಲ ಒತ್ತಾಯಿಸಿದ್ದಾರೆ.
ತೆಲಸಂಗ ಹೊಬಳಿಯಲ್ಲಿ 8000 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆಯಿದ್ದು, ಶೇ.80ರಷ್ಟು ನೀರಿನ ಕೊರತೆಯಿಂದ ಹಾಳಾಗಿದೆ. ಇದರ ಸಮಗ್ರ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ತೆಲಸಂಗ ಹೋಬಳಿ ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ