Belgaum: ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ

ಪ್ರತಿಮೆ ಮತ್ತು ಪರಿಸರವನ್ನು ಸ್ವಚ್ಛ-ಸುಂದರವಾಗಿ ಇರಿಸಬೇಕು

Team Udayavani, Aug 28, 2023, 5:13 PM IST

Belgaum: ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ

ಮೂಡಲಗಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಮತ್ತು ಜಗಜ್ಯೋತಿ ಶ್ರೀ ಬಸವಣ್ಣನವರ ಜೀವನ ಮತ್ತು ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಗೋಕಾಕ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ತಾಲೂಕಿನ ಸುಣಧೋಳಿ ಗ್ರಾಮದ ಸಂಕೇಶ್ವರ-ಸಂಗಮ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ
ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಈ ರಸ್ತೆಯಲ್ಲಿ ಸಂಚರಿಸುವರಿಗೆ ಇಬ್ಬರು ಮಹಾನ್‌ ವ್ಯಕ್ತಿಗಳ ದರ್ಶನ ಮಾಡಿಸುವಂತಹ ಕಾರ್ಯ ಶ್ಲಾಘನೀಯ ಎಂದರು.

ಕರ್ನಾಟಕ ಪ್ರದೇಶ ಕುರುಬ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ| ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಪ್ರತಿಮೆ ಮತ್ತು ಪರಿಸರವನ್ನು ಸ್ವಚ್ಛ-ಸುಂದರವಾಗಿ ಇರಿಸಬೇಕು ಎಂದರು.

ಸುಣಧೋಳಿ ಜಡಿಸಿದ್ದೇಶ್ವರ ಮಠದ ಅಭಿನವ ಶ್ರೀ ಶಿವಾನಂದ ಶ್ರೀಗಳು ಮಾತನಾಡಿ, ಅನುಭಾವದ ಮೂಲಕ ಆಂತರಿಕ ಶಕ್ತಿ ತುಂಬುವ ಬಸವಣ್ಣನ ಮೂರ್ತಿ ಮತ್ತು ಬಾಹ್ಯ ಶಕ್ತಿ ಮತ್ತು ಶೌರ್ಯ ತುಂಬುವ ರಾಯಣ್ಣನ ಮೂರ್ತಿಗಳೆರಡೂ ಸುಣಧೋಳಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿವೆ, ಈ ಮಹಾನ ವ್ಯಕ್ತಿಗಳು ಗ್ರಾಮದ ಜನತೆಯ ಬುದುಕಿಗೆ ಪ್ರೇರಕ ಶಕ್ತಿಗಳಾಗಲಿ ಎಂದು ಹಾರೈಸಿದರು.

ಸಾನ್ನಿಧ್ಯ ವಹಿಸಿದ್ದ ಸುಣಧೋಳಿ ಚಿದಾನಂದ ಶ್ರೀಗಳು, ಹುಲಜಯಂತಿಯ ಶ್ರೀ ಮಹಾಳಿಂಗರಾಯ ಮಹಾರಜರು, ಹಡಗಿನಾಳದ ಶ್ರೀ ತಪೋನಿರತ ಮುತ್ತೇಶ್ವರ ಶ್ರೀಗಳು ಆಶೀರ್ವಚನ ನೀಡಿದರು. ಇದಕ್ಕೂ ಮುಂಚೆ ರಾಯಣ್ಣನ ಪ್ರತಿಮೆಯನ್ನು ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ಮಠದ ಹತ್ತಿರದಿಂದ ಮೆರವಣಿಗೆಯಲ್ಲಿ ತರಲಾಯಿತು.ನಾಡಿನ ವಿವಿಧ ಪೂಜ್ಯರು ಮೂರ್ತಿ ಲೋಕಾರ್ಪಣೆಗೊಳಿಸಿದರು.

ವೇದಿಕೆಯಲ್ಲಿ ಸುಣಧೋಳಿ ಸಂಗೊಳ್ಳಿ ರಾಯಣ್ಣ ಯುವಕ ಸಂಘದ ಅಧ್ಯಕ್ಷ ಸಿದ್ಧಲಿಂಗ ಅಜ್ಜಪ್ಪನ್ನವರ, ಗಣ್ಯರಾದ ಮಡೇಪ್ಪ ತೋಳಿನವರ, ಭೀಮಶಿ ಮಗದುಮ್‌, ಹನಮಂತ ಗುಡ್ಲಮನಿ, ಡಾ.ಮಹಾದೇವ ಜಿಡ್ಡಿಮನಿ, ಡಾ.ಎಸ್‌.ಎಸ್‌ .ಪಾಟೀಲ, ಬಸವರಾಜ ಭೂತ್ತಾಳಿ, ರಾಯಪ್ಪ ಬಾನಸಿ, ಭೀಮಶಿ ಕಾರದಗಿ, ವಿನಾಯಕ ಕಂಠಿಕಾರ, ವಿಜಯ ಜಂಬಗಿ, ಅಡಿವೆಪ್ಪ ಅಳಗೋಡಿ, ಗಿರೀಶ ಹಳ್ಳೂರ, ಶ್ರೀಕಾಂತ ದೇವರಮನಿ, ಭೀಮಶಿ ಉವನ್ನವರ, ಗದಿಗೇಪ್ಪ ಅಮ್ಮಣಿ, ಸಿದ್ಧಾರೂಢ ಪಾಶಿ, ಸದಾಶಿವ ದೇವನಗೋಳ, ಬಸು ಹಟ್ಟಿಹೊಳಿ, ಮಹಾಂತೇಶ ಪಾಟೀಲ, ಶಂಕರ ಕುರಿಬಾಗಿ, ರಾಜು ವಾಲಿ, ಅವೀನಾಶ ಹಿರೇಮಠ, ಮಹಾದೇವ ಹಾರುಗೇರಿ, ಅನೀಲ ಕಣಕಿಕೋಡಿ ಮತ್ತಿತರರು ಉಪಸ್ಥಿತರಿದ್ದರು. ಬಿವಿಎನ್‌ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುತ್ತು ಜಿಡಿಮನ್ನಿ ಸ್ವಾಗತಿಸಿದರು, ಮಹಾಂತೇಶ ಅಂದಾನಿ ನಿರೂಪಿಸಿದರು.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.