![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
BJP ಬೆಂಬಲ ಕಂಡು ಲಕ್ಷ್ಮೀ ಹೆಬ್ಬಾಳ್ಕರ್ ಎಕ್ಸಟ್ರಾ ಪೆಗ್ ಹಾಕಿ ಮಲಗಬೇಕು: ಸಂಜಯ ಪಾಟೀಲ
Team Udayavani, Apr 13, 2024, 6:31 PM IST
![ಬಿಜೆಪಿ ಬೆಂಬಲ ಕಂಡು ಲಕ್ಷ್ಮೀ ಹೆಬ್ಬಾಳ್ಕರ್ ಎಕ್ಸಟ್ರಾ ಪೆಗ್ ಹಾಕಿ ಮಲಗಬೇಕು: ಸಂಜಯ ಪಾಟೀಲ](https://www.udayavani.com/wp-content/uploads/2024/04/sanjay-1-620x342.jpg)
ಬೆಳಗಾವಿ: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಸಿಗುತ್ತಿರುವ ಅಭೂತಪೂರ್ವ ಬೆಂಬಲ ನೋಡಿ ಇಂದು ರಾತ್ರಿ ಲಕ್ಷ್ಮಿ ಹೆಬ್ಬಾಳಕರಗೆ ನಿದ್ದೆ ಬರುವುದಿಲ್ಲ. ಮಾತ್ರೆ ತೆಗೆದುಕೊಂಡು ಮಲಗಬೇಕು. ಸಾಧ್ಯವಾದರೆ ಎಕ್ಸಟ್ರಾ ಪೆಗ್ ತೆಗೆದುಕೊಂಡು ನಿದ್ದೆ ಮಾಡಬೇಕು ಎಂದು ಮಾಜಿ ಶಾಸಕ ಸಂಜಯ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಶನಿವಾರ ನಡೆದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಕಾಲಿಡುತ್ತಿದ್ದಂತೆ ಹೆಬ್ಬಾಳಕರ ಅವರ ನಿದ್ದೆ ಹಾರಿ ಹೋಗಿದೆ. ಹೀಗಾಗಿ ಎಕ್ಸಟ್ರಾ ಪೆಗ್ ತೆಗೆದುಕೊಂಡು ನಿದ್ದೆ ಮಾಡಬೇಕು ಎಂದರು.
ಬೆಳಗಾವಿ ಲೋಕಸಭೆ ಕ್ಷೇತ್ರದ ಎಲ್ಲಾ ಕಡೆಗೆ ನಾನು ಪ್ರಚಾರ ಭಾಷಣ ಮಾಡುತ್ತಿದ್ದೇನೆ. ಗೋಕಾಕ, ಅರಭಾವಿ ವಿಧಾನಸಭಾ ಕ್ಷೇತ್ರಕ್ಕಿಂತಲೂ ಬೆಳಗಾವಿ ಗ್ರಾಮೀಣದಲ್ಲಿ ಅತಿ ಹೆಚ್ಚು ಮಹಿಳೆಯರು ಸೇರಿರುವ ಮೊದಲನೇ ಸಭೆ ಇದಾಗಿದೆ. ಹೀಗಾಗಿ ಹೆಬ್ಬಾಳಕರರಿಗೆ ನಿದ್ದೆ ಬರುವುದಿಲ್ಲ ಎಂದರು.
ಬಿಜೆಪಿ ಸಭೆಗೆ ಮಹಿಳೆಯರು ಹೋದರೆ ನಿಮ್ಮ 2 ಸಾವಿರ ರೂ., ಉಚಿತ ಬಸ್ ಪ್ರಯಾಣ, ಉಚಿತ ಕರೆಂಟ್ ಸ್ಥಗಿತಗೊಳ್ಳಲಿದೆ ಎಂದು ಸಚಿವೆ ಹೆಬ್ಬಾಳಕರ ಬೆದರಿಕೆ ಹಾಕುತ್ತಿರುವ ಬಗ್ಗೆ ಕೆಲ ಕಾರ್ಯಕರ್ತರು ಮೆಸೇಜ್ ಮಾಡಿದ್ದಾರೆ. ಸರ್ಕಾರದ ಯೋಜನೆಗಳು ಬಂದ್ ಮಾಡಲು ಇವರಪ್ಪನ ಮನೆಯದ್ದಾ? ಯೋಜನೆಗಳನ್ನು ಯಾವ ಜನಪ್ರತಿನಿಧಿಗಳು ಎಂದು ಖಾರವಾಗಿ ಹೇಳಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.