Belagavi; ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಮರು ತನಿಖೆ: ಸಿಎಂ ಸಿದ್ದರಾಮಯ್ಯ
Team Udayavani, Aug 11, 2023, 2:26 PM IST
ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಅವರ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಇಲಾಖೆಯ ಜೊತೆಗೆ ಚರ್ಚಿಸಿ ಮರು ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಈ ಹಿಂದಿನ ಸರಕಾರ ಮಾಡಿರುವ ತನಿಖೆಯ ಬಗ್ಗೆ ಕುಟುಂಬದ ಸದಸ್ಯರಿಗೆ ತೃಪ್ತಿ ತಂದಿಲ್ಲ. ಈ ಕುರಿತು ಪರಿಶೀಲನೆ ನಡೆಸಲಾಗುವುದು ಎಂದರು.
ರಾಜ್ಯದ ಗುತ್ತಿಗೆದಾರರ ಬಿಲ್ ಬಾಕಿ ಮತ್ತು ಕಾಂಗ್ರೆಸ್ ಸರಕಾರದ ಮೇಲೆ ಕೇಳಿಬಂದಿರುವ ಕಮಿಷನ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಬಿಜೆಪಿಯವರು ಹಸಿ ಸುಳ್ಳು ಹೇಳುತ್ತಿದ್ದಾರೆ. ಹತಾಶರಾಗಿರುವ ಅವರಿಗೆ ಬೇರೆ ದಾರಿ ಕಾಣಿಸುತ್ತಿಲ್ಲ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ:Missing Case: ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಮನೆಯ ಬಳಿಯೇ ಪತ್ತೆ… ಕೊಲೆ ಶಂಕೆ
ಹಿಂದಿನ ಸರಕಾರದಲ್ಲಿ ಕೇಳಿಬಂದಿದ್ದ 40 ಪರ್ಸಂಟ್ ಕಮಿಷನ್ ಬಗ್ಗೆ ತನಿಖೆ ನಡೆಸುತ್ತೇವೆ. ಗುಣಮಟ್ಟದ ಕಾಮಗಾರಿಗಳು ಆಗಿದ್ದರೆ ಹಣ ಬಿಡುಗಡೆ ಮಾಡುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್