ಪುಣ್ಯಕ್ಷೇತ್ರಗಳಲ್ಲಿ ಸಾಮೂಹಿಕ ವಿವಾಹ ಆಚರಣೆ


Team Udayavani, Mar 9, 2020, 2:41 PM IST

ಪುಣ್ಯಕ್ಷೇತ್ರಗಳಲ್ಲಿ  ಸಾಮೂಹಿಕ ವಿವಾಹ ಆಚರಣೆ

ಸವದತ್ತಿ: ಪ್ರತಿ ಕುಟುಂಬಗಳಲ್ಲಿ ಮದುವೆ ಹೇಗೆ ಜರುಗುತ್ತವೆಯೋ ಅದೇ ರೀತಿ ಮುಜರಾಯಿ ದೇವಸ್ಥಾನಗಳಲ್ಲಿಯೂ ಸಹ ಸಪ್ತಪದಿ ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಕುರಿತು ಮುತುವರ್ಜಿ ವಹಿಸಲಾಗುವುದು ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಸ್ಥಳೀಯ ಮಾಮನಿ ಕಲ್ಯಾಣ ಮಂಟಪದಲ್ಲಿ ರವಿವಾರ ಹಿಂದೂ ಧಾರ್ಮಿಕ ಸಂಸ್ಥೆ, ಧಾರ್ಮಿಕ ದತ್ತಿ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಸಪ್ತಪದಿ ಸರಳ ಸಾಮೂಹಿಕ ವಿವಾಹದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿ, ಆಯ್ದ ದೇವಸ್ಥಾನಗಳಲ್ಲಿ ಸರ್ಕಾರದಿಂದಲೇ ಉಚಿತ ಸಾಮೂಹಿಕ ವಿವಾಹ ಆಚರಣೆ ತರಲಾಗುತ್ತಿದೆ ಎಂದರು.

ಇನ್ನು ಇನ್ಫೋಸಿಸ್‌ ಮುಖ್ಯಸ್ಥೆ ಸುಧಾಮೂರ್ತಿ ಇದಕ್ಕೆ ರಾಯಭಾರಿ ಆಗುತ್ತೇನೆಂದು ತಿಳಿಸಿರುವುದು, ದೇವೆಗೌಡರು ಹರ್ಷ ವ್ಯಕ್ತಪಡಿಸಿದ್ದು ಸಂತಸ ತಂದಿದೆ. ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವುದು ಹೇಗೆ ಎಂದು ಸರಕಾರದ ಚಿಂತೆಯಾಗಿತ್ತು. ಸರ್ವ ಸ್ಪರ್ಶಿಯಾಗಿ ಜನಮನ ತಲುಪಲು ಸರ್ಕಾರ ಎರಡು ಹಂತದಲ್ಲಿ ವಿವಾಹ ನಡೆಸಲು ಸನ್ನದ್ಧವಿದೆ ಎಂದರು. ಶಾಸಕ ಆನಂದ ಮಾಮನಿ ಮಾತನಾಡಿ, ಯಲ್ಲಮ್ಮ ದೇವಸ್ಥಾನದಲ್ಲಿ ಜರುಗುವ ಸಪ್ತಪದಿಯಲ್ಲಿ ಸರ್ಕಾರ ಒಪ್ಪಲಿ, ಒಪ್ಪದೇ ಇರಲಿ ವೈಯಕ್ತಿಕವಾಗಿ ಪ್ರತಿ ನವಜೋಡಿಗೆ 5 ರಿಂದ 6 ಸಾವಿರ ರೂ.ಗಳ ಗೃಹ ಬಳಕೆ ಸಾಮಗ್ರಿಗಳನ್ನು ನೀಡಲಾಗುವುದು. ಸುಧಾಮೂರ್ತಿ ಅವರನ್ನು ಸಪ್ತಪದಿ ಉದ್ಘಾಟನೆಗೆ ಅಹ್ವಾನಿಸಲಾಗುವುದು ಎಂದರು.

ಸರ್ಕಾರ ಈ ಧಾರ್ಮಿಕ ಸಂಸ್ಥೆಗಳಲ್ಲಿ ಭಕ್ತರ ಹಣದಿಂದ ಭಕ್ತರಿಗೋಸ್ಕರ ಯೋಜನೆ ರೂಪಿಸಿ, ಕೆಳಹಂತದ ಜನರಿಗೆ ಅನುಕೂಲ ಕಲ್ಪಿಸಿದೆ. ಉಚಿತ ಸಾಮೂಹಿಕ ವಿವಾಹ ಪುಣ್ಯಕ್ಷೇತ್ರಗಳಲ್ಲಿ ಆಗಬೇಕೆನ್ನುವುದು ಸರಕಾರದ ಉದ್ದೇಶವಾಗಿದ್ದು, ಈ ಕುರಿತು ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಬೇಕು ಎಂದರು.

ಕುಡಚಿ ಶಾಸಕ ಪಿ. ರಾಜೀವ್‌ ಮಾತನಾಡಿ, ಅದ್ಧೂರಿ ಆಡಂಬರದ ಕುದುರೆ ಏರಿ ಮದುವೆ ಮಾಡಿ, ಅದೆಷ್ಟೋ ಕುಟುಂಬಗಳು ಬೀದಿಗೆ ಬಂದು ಆತ್ಮಹತ್ಯೆಗೂ ಶರಣಾಗಿವೆ. ಅನಗತ್ಯ ಖರ್ಚುಗಳ ಬದಲಾಗಿ ಈ ಯೋಜನೆ ಭಾರತಕ್ಕೆ ಮಾದರಿಯಾಗಲಿದೆ ಎಂದರು.

ಈ ವೇಳೆ ರವಿ ಕೋಟರಗಸ್ತಿ, ಶಿವಾನಂದ ಭಜಂತ್ರಿ, ಹಾಸನ ಸಕಲೇಶಪುರದ ಶ್ರೀ, ರಾಮನಗೌಡ ತಿಪರಾಶಿ, ಜೀರಗಾಳ, ಜಗದೀಶ ಶಿಂತ್ರಿ, ಜಿ.ಎಸ್‌. ಗಂಗಲ, ಎಂ.ಎಸ್‌. ಹಿರೇಕುಂಬಿ, ಜಗದೀಶ ಹನಸಿ, ಪ್ರಶಾಂತ ಪಾಟೀಲ ಇದ್ದರು.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.