ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ
Team Udayavani, Dec 3, 2021, 2:53 PM IST
ಬೆಳಗಾವಿ: ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿಯೇ ಬಂಡಾಯವಾಗಿ ಸ್ಪರ್ಧೆ ಮಾಡಿದ್ದಾರೆ. ಮೊದಲು ತಮ್ಮ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವಂತಹ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲಿಕ್ಕೆ ಸಾಧ್ಯವಿಲ್ಲ. ಅವರ ಪಕ್ಷದಲ್ಲಿಯೇ ಗೊಂದಲವಿದೆ. ರಮೇಶ್ ಜಾರಕಿಹೊಳಿ ಒಂದು ಲಖನ್ ಜಾರಕಿಹೊಳಿ ಅಥವಾ ಮಹಾಂತೇಶ ಕವಟಗಿಮಠ ಇಬ್ಬರಲ್ಲಿ ಒಬ್ಬರನ್ನು ಗೆಲ್ಲಿಸಬೇಕು. ಇಬ್ಬರನ್ನೂ ಗೆಲ್ಲಿಸುವ ಶಕ್ತಿ ಅವರಲ್ಲಿ ಇಲ್ಲ ಎಂದರು.
ಲಖನ್ ಬಗ್ಗೆ ಬಹಳಷ್ಟು ಟೀಕೆ ಮಾಡಿದ್ದೇವೆ. ಅವರಿಗೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇಲ್ಲಿ ನಮ್ಮ ಪಕ್ಷ ಗೆಲ್ಲಬೇಕು. ಅದರಿಂದಲೇ ನಮಗೆ ಗೌರವ ಬರಲಿದೆ. ಲಖನ್ ಮತ್ತು ಬಿಜೆಪಿ ನಮ್ಮ ಪಕ್ಷದ ಎದುರಾಳಿಗಳೇ ಅವರ ವಿರುದ್ಧವೇ ಚುನಾವಣೆ ಮಾಡುತ್ತಿದ್ದೇವೆ. ಸದ್ಯಕ್ಕೆ ಅವರು ಈ ಚುನಾವಣೆ ಮಾಡುವುದರಿಂದ ಸಂಬಂಧ ಜೋಡಿಸುವುದು ಸರಿಯಲ್ಲ ಎಂದರು.
ಇದನ್ನೂ ಓದಿ:ಪಾಕಿಸ್ತಾನಕ್ಕೂ, ದೆಹಲಿ ವಾಯುಗುಣಮಟ್ಟ ಕಲುಷಿತಗೊಳ್ಳಲು ಏನು ಸಂಬಂಧ: ಸುಪ್ರೀಂಕೋರ್ಟ್
ಬಿಜೆಪಿಯಲ್ಲಿಯೇ ಗೊಂದಲವಿದೆ. ಬಿಜೆಪಿ ಪಕ್ಷದ ಬ್ಯಾನರ್ ದಲ್ಲಿ ರಮೇಶ್ ಜಾರಕಿಹೊಳಿ ಕಾರ್ಯಕ್ರಮ ಮಾಡುತ್ತಾರೆ. ಅದೇ ವೇದಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ವೋಟ್ ಹಾಕಿ ಎನ್ನುತ್ತಾರೆ. ಮೊದಲು ಅದನ್ನು ಸರಿ ಮಾಡಿಕೊಳ್ಳಲು ಹೇಳಿ ಎನ್ನುವ ಮೂಲಕ ಎದುರಾಳಿಗಳಿಗೆ ತಿವಿದರು.
ಸಾಮಾನ್ಯವಾಗಿ ಗ್ರಾಮ ಪಂಚಾಯತಿ ಸದಸ್ಯರು ಶಾಸಕರ ಕಂಟ್ರೋಲ್ ದಲ್ಲಿ ಇರಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಬಿಜೆಪಿ ಶಾಸಕರಿರುವುದರಿಂದ ನಿಮ್ಮ ಅಭ್ಯರ್ಥಿಯೇ ಗೆಲುವು ಪಡೆಯಲಿದ್ದಾರೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬೆಳಗಾವಿಯಲ್ಲಿ ಬಿಜೆಪಿ ಶಾಸಕರು ಹೆಚ್ಚಿಗೆ ಇದ್ದರೂ ಸಹ, ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಸದಸ್ಯರು ಹೆಚ್ಚಿದ್ದಾರೆ ಇದರಿಂದ ನಮಗೆ ಅನುಕೂಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನರನ್ನು ಒಂದಲ್ಲಾ ಒಂದು ರೀತಿ ಸುಲಿಗೆ ಮಾಡುತ್ತಿದೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ ಮಾಡಿ ಇಂಟರ್ನೆಟ್ ಬೆಲೆ ಜಾಸ್ತಿ ಮಾಡಿದೆ ಎಂದು ವಾಗ್ದಾಳಿ ಮಾಡಿದರು.
ಕಾಂಗ್ರೆಸ್ ಪಕ್ಷ ವಿವೇಕರಾವ್ ಪಾಟೀಲ ಬಿಟ್ಟು, ಚನ್ನರಾಜ್ ಹಟ್ಟಿಹೊಳಿ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಪಕ್ಷೇತರವಾಗಿ ಲಖನ್ ಸ್ಪರ್ಧೆ ಮಾಡಿಸಿದ್ದೇನೆ ಎಂಬ ರಮೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ವಿವೇಕರಾವ್ ಪಾಟೀಲ್ ಅವರ ಮೇಲೆ ಅಷ್ಟೊಂದು ಪ್ರೀತಿ ಇದ್ದಿದ್ದರೆ ಲಖನ್ ಜಾಗದಲ್ಲಿ ವಿವೇಕರಾವ್ ಪಾಟೀಲ ನಿಲ್ಲಿಸಬೇಕಿತ್ತು. ಯಾಕೆ ಹಾಗೇ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ
Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್