ಬಿಮ್ಸ್ ಅವ್ಯವಸ್ಥೆ; ನಾಲ್ವರು ಮಂತ್ರಿಗಳು ಏಕೆ ಬೇಕು?
Team Udayavani, May 31, 2021, 7:16 PM IST
ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್ )ದಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುತ್ತೇನೆ ಎಂದಿದ್ದಾರೆ. ಮುಖ್ಯಮಂತ್ರಿಗಳೇ ಎಲ್ಲವನ್ನೂ ಮಾಡುವುದಾದರೇ ಜಿಲ್ಲೆಯ ನಾಲ್ವರು ಮಂತ್ರಿಗಳು ಏಕೆ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರಶ್ನಿಸಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಿಲ್ಲೆಯ ಮಂತ್ರಿಗಳು ಬಿಮ್ಸ್ಗೆ ತೆರಳಿ ಸಭೆ ನಡೆಸಿ, ಸಮಸ್ಯೆ ಬಗೆಹರಿಸಬೇಕಿತ್ತು. ಕೆಲವು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕಿತ್ತು. ಎಲ್ಲವನ್ನೂ ಮುಖ್ಯಮಂತ್ರಿಗಳೇ ಮಾಡಲು ಆಗುವುದಿಲ್ಲ ಎಂದರು.
ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಿಯರೇ ಆಗಿರಬೇಕು. ಇದನ್ನು ನಾನು ಮೊದಲಿಂದಲೂ ಹೇಳಿದ್ದೇನೆ. ಸ್ಥಳೀಯರಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರುತ್ತದೆ. ಅನುಭವವೂ ಇರುತ್ತದೆ. ಇದೇ ಕಾರಣದಿಂದ ಜಿಲ್ಲೆಯ ನಾಲ್ವರು ಸಚಿವರಲ್ಲಿ ಒಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾಗಬೇಕಿತ್ತು. ಆದರೆ ಈ ಸರಕಾರಕ್ಕೆ ಜಿಲ್ಲೆಯ ಬಗ್ಗ ಕಾಳಜಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಮ್ಸ್ ಆಸ್ಪತ್ರೆ ಬಗ್ಗೆ ಸಾಕಷ್ಟು ದೂರು ಕೇಳಿಬರುತ್ತಿವೆ. ಅಲ್ಲಿನ ಅವ್ಯವಸ್ಥೆ ಬಗ್ಗೆ ಸುದ್ದಿಯಾಗಿದೆ. ಇಷ್ಟೆಲ್ಲ ಗೊತ್ತಿದ್ದರೂ ಜಿಲ್ಲೆಯ ಸಚಿವರು ಇದನ್ನು ಬಗೆಹರಿಸುವ ಪ್ರಯತ್ನ ಮಾಡಿಲ್ಲ. ಈಗ ಮುಖ್ಯಮಂತ್ರಿಗಳು ನಾನೇ ಬಂದು ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದ್ದಾರೆ. ಹಾಗಾದರೆ ನಾಲ್ವರು ಸಚಿವರಿದ್ದು ಏನು ಪ್ರಯೋಜನ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ
Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ
ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್ ಹೆಗ್ಡೆ
ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ
ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ
MUST WATCH
ಹೊಸ ಸೇರ್ಪಡೆ
Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು
ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ
Bigg Boss OTT ಸೀಸನ್ -3 ಅನೌನ್ಸ್: ಈ ಬಾರಿ ಮತ್ತೆ ಸಲ್ಮಾನ್ ಖಾನ್ ನಿರೂಪಣೆ
Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ
ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್ ಹೆಗ್ಡೆ