ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿ
Team Udayavani, Jan 23, 2022, 10:00 PM IST
ಗೋಕಾಕ: ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು. ಪಾದಯಾತ್ರೆ ಯಶಸ್ವಿ ಆಗಬಾರದು, ಬೆಂಗಳೂರು ತಲುಪಬಾರದೆಂಬ ಉದ್ದೇಶ ಸರ್ಕಾರದಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಅದನ್ನು ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ.
ಬಿಜೆಪಿ ಸರ್ಕಾರ ಪಾದಯಾತ್ರೆ ಹತ್ತಿಕ್ಕಲು ಪ್ರಯತ್ನಿಸಿದರೂ ಜನರ ಮನಸ್ಸಿನಲ್ಲಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಶಾಶ್ವತವಾಗಿ ಉಳಿದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೋವಿಡ್ ಕಡಿಮೆಯಾದ ನಂತರ ಪಾದಯಾತ್ರೆ ಎಲ್ಲಿಂದ ಮೊಟಕುಗೊಂಡಿತ್ತೋ ಮತ್ತೆ ಅಲ್ಲಿಂದ ಆರಂಭಿಸೋಣ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಮನೆಗೆ ಕನ್ನ ಹಾಕಿದ ಕಳ್ಳರು, ಅಪಾರ ಪ್ರಮಾಣದ ಸೊತ್ತು ಕಳವು : ಪೊಲೀಸರಿಂದ ಶೋಧ ಕಾರ್ಯ
ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷದ ಭಯ ಹುಟ್ಟಿದ್ದು, ಆದ ಕಾರಣ ಇಂತಹ ಹೋರಾಟಗಳನ್ನು ತಡೆಗಟ್ಟಲು ಕುತಂತ್ರ ರೂಪಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ