ಸಿಎಂ ಮುಂದುವರಿಯುವುದು ಬಿಡುವುದು ಆ ಕುಸ್ತಿಯ ಮೇಲೆ ಅವಲಂಬಿತ: ಸತೀಶ್ ಜಾರಕಿಹೊಳಿ


Team Udayavani, Jun 15, 2021, 4:58 PM IST

ಸಿಎಂ ಮುಂದುವರಿಯುವುದು ಬಿಡುವುದು ಆ ಕುಸ್ತಿಯ ಮೇಲೆ ಅವಲಂಬಿತ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಕುಸ್ತಿ ಪ್ರಾರಂಭವಾಗಿದೆ. ಬಿಜೆಪಿ ಶಾಸಕರು ಪರ -ವಿರೋಧವಾಗಿ ಸಹಿ ಸಂಗ್ರಹ ಮಾಡುತ್ತಿದ್ದಾರೆ. ಆದರೆ ಸಿಎಂ ಮುಂದುವರಿಯುವುದು ಬಿಡುವುದು ಕುಸ್ತಿಯ ಮೇಲೆ ಅವಲಂಬಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಅವರ ಪಕ್ಷದ ವರಿಷ್ಠರು ಏನು ವರದಿ ಕೊಡುತ್ತಾರೊ ನಂತರ ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೊ ಅವರಿಗೆ ಬಿಟ್ಟಿದ್ದು ಎಂದರು.

“ಕಾಂಗ್ರೆಸ್ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದೇವೆ. ಆಸ್ಪತ್ರೆಗಳಲ್ಲಿನ ಸಮಸ್ಯೆಗಳು ಹಾಗೂ ಅಗತ್ಯತೆಗಳ ಬಗ್ಗೆ ಪಕ್ಷದಿಂದ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು. ಕೋವಿಡ್ ಮೂರನೇ ಅಲೆಗೆ ಸರ್ಕಾರ ಈಗಿನಿಂದಲೇ ಸಜ್ಜಾಗಬೇಕು. ಎಲ್ಲ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ:17 ಜನ ಹೊರಗಿನಿಂದ ಬಂದಿದ್ದರಿಂದ ಸಮಸ್ಯೆಯಾಗಿದೆ ಎಂಬ ಈಶ್ವರಪ್ಪ ಮಾತು ಸರಿಯಲ್ಲ : ಪಾಟೀಲ್

ಲೋಕಸಭಾ ಉಪಚುನಾವಣೆಯ ಸೋಲು ನಮಗೆ ಪಾಠವಾಗಿದೆ. ಸೋಲಿನಿಂದ ನಾವು ಪಾಠ ಕಲಿತಿದ್ದು, ಪಕ್ಷವನ್ನು ಇನ್ನೂ ಯಾವ ರೀತಿ ಸಂಘಟನೆ ಮಾಡಬೇಕು ಎಂಬ ಕುರಿತು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಸೇರಿದಂತೆ ಹಲವು ಮುಖಂಡರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಲಾಕ್ ಡೌನ್ ಮುಗಿದ ನಂತರ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.

ಕಾಂಗ್ರೆಸ್ ನಿಂದ ಜನಪರ ಕೆಲಸ: ಕೋವಿಡ್ ಸಂಕಷ್ಟದಲ್ಲಿ ಮೊದಲಿನಿಂದಲೂ ಕಾಂಗ್ರೆಸ್ ಜನಪರವಾದ ಕೆಲಸ ಮಾಡುತ್ತಿದೆ. ಲಾಕ್ ಡೌನ್ ವೇಳೆ ಬಡವರು, ಕಾರ್ಮಿಕರು, ರೈತರ‌ ಪರವಾಗಿ ನಿಂತು ಕೆಲಸ ಮಾಡಿದೆ. ಅಲ್ಲದೆ, ಎರಡನೇ ಅಲೆಯಲ್ಲಿ ನಿರಂತರವಾಗಿ ಸರ್ಕಾರವನ್ನು ಎಚ್ಚರಿಸಿ ವ್ಯಾಕ್ಸಿನ್, ಬೆಡ್, ಆಕ್ಸಿಜನ್ ವ್ಯವಸ್ಥೆ ಮಾಡಿರುವ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದರು.

ಎಲ್ಲರಿಗೂ ಉಚಿತ ವಾಕ್ಸಿನ್ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಲೇ ಬಂದಿತ್ತು. ಇದರ ಪರಿಣಾಮವಾಗಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವ ನಿರ್ಧಾರವನ್ನು ಸರ್ಕಾರ ಮಾಡಿದೆ ಎಂದರು.

ಕೋವಿಡ್ ನಿಂದ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಭೂತರಾಮನಹಟ್ಟಿ ಕಿರು ಪ್ರಾಣಿ ಸಂಗ್ರಹಾಲಯದಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿ ಇನ್ನಿತರರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಮತ್ತಷ್ಟು ಜನ ಪ್ರಾಣಿಗಳನ್ನು ದತ್ತು ಪಡೆದರ ಅನುಕೂಲವಾಗುತ್ತದೆ ಎಂದರು.

ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಕಿಸಾನ್ ಕಾಂಗ್ರೆಸ್ ರಾಜ್ಯ ಘಟಕದ ಸಂಚಾಲಕ ರಾಜೇಂದ್ರ ಪಾಟೀಲ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮನ್ನವರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.