ಹುಕ್ಕೇರಿ ಪ್ರಕಾಶಿಸಲು ಕೈ ಜೋಡಿಸಿದ ಸತೀಶ


Team Udayavani, May 12, 2019, 3:37 PM IST

Udayavani Kannada Newspaper

ಬೆಳಗಾವಿ: ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಬಲದ ಪೈಪೋಟಿ ಕಾಣುತ್ತಿರುವ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ಮುನ್ನಡೆಯ ವಿಚಾರವಾಗಿ ಬಹಳ ಕುತೂಹಲದ ಚರ್ಚೆ ನಡೆದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ತಮ್ಮ ಪ್ರಚಾರ ಹಾಗೂ ಜನ ಬೆಂಬಲದ ಆಧಾರದ ಮೇಲೆ ಎಷ್ಟು ಮುನ್ನಡೆ ಬರುತ್ತದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ

ಎಲ್ಲಕ್ಕಿಂತ ಮುಖ್ಯವಾಗಿ ಇದು ಸಚಿವ ಸತೀಶ ಜಾರಕಿಹೊಳಿ ಅವರ ಸ್ವಕ್ಷೇತ್ರ. ಸಹಜವಾಗಿಯೇ ಎಲ್ಲರ ಗಮನ ಇದರ ಮೇಲಿರುತ್ತದೆ. ಇದಲ್ಲದೇ ಪಕ್ಕದ ಹುಕ್ಕೇರಿಯ ಬಿಜೆಪಿ ಶಾಸಕ ಉಮೇಶ ಕತ್ತಿ ಹಾಗೂ ಅವರ ಸಹೋದರ ರಮೇಶ ಕತ್ತಿ ಅವರ ನಡೆ ಕೂಡ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಅಷ್ಟೇ ಅಲ್ಲದೇ ಇದು ಚುನಾವಣೆ ಲೆಕ್ಕಾಚಾರದ ಮೇಲೆ ಕೂಡ ಪರಿಣಾಮ ಬೀರಿದೆ.

ವಿಧಾನಸಭೆ ಚುನಾವಣೆಯಲ್ಲಿ ಬಹಳ ಕಡಿಮೆ ಮತಗಳ ಅಂತರದಿಂದ ಈ ಕ್ಷೇತ್ರವನ್ನು ಕಳೆದುಕೊಂಡಿದ್ದ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಅಂತಹ ತಪ್ಪುಗಳಿಗೆ ಅವಕಾಶ ನೀಡದಂತೆ ಪ್ರಚಾರ ಮಾಡಿದೆ. ಕಾಂಗ್ರೆಸ್‌ ಅಭ್ಯರ್ಥಿಯ ಜೊತೆಗೆ ಸ್ಥಳೀಯ ಶಾಸಕರ ಜೊತೆ ಬಿಜೆಪಿ ಕಾರ್ಯಕರ್ತರು ಪೈಪೋಟಿ ನಡೆಸಿರುವುದರಿಂದ ಮತಗಳ ಮುನ್ನಡೆ ಲೆಕ್ಕಾಚಾರ ಬಹಳ ಕುತೂಹಲ ಮೂಡಿಸಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಲ್ಲಿ ಒಂದೇ ಒಂದು ದಿನ ಪ್ರಚಾರ ಮಾಡದೇ ಬಹಳ ಪ್ರಯಾಸದಿಂದ ಜಯಗಳಿಸಿದ್ದ ಕಾಂಗ್ರೆಸ್‌ ಪ್ರಭಾವಿ ನಾಯಕ ಸತೀಶ ಜಾರಕಿಹೊಳಿಗೆ ಲೋಕಸಭೆ ಚುನಾವಣೆ ಅತ್ಯಂತ ಪ್ರತಿಷ್ಠೆಯ ಪ್ರಶ್ನೆ. ಸತೀಶ ಅವರ ಮೇಲೆ ಬಹಳ ನಂಬಿಕೆ ಇಟ್ಟುಕೊಂಡಿರುವ ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಯಮಕನಮರಡಿ ಕ್ಷೇತ್ರದಿಂದ ಹೆಚ್ಚಿನ ಮುನ್ನಡೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಬಿಜೆಪಿಯಲ್ಲಿನ ಅಸಮಾಧಾನ ಹಾಗೂ ನಾಯಕರ ನಿರಾಸಕ್ತಿ ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ, ವಿಧಾನಸಭೆ ಚುನಾವಣೆ ಪೆಟ್ಟಿನಿಂದ ಎಚ್ಚೆತ್ತುಕೊಂಡಿದ್ದ ಸತೀಶ ಜಾರಕಿಹೊಳಿ ಲೋಕಸಭೆ ಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದರು. ಕ್ಷೇತ್ರದ ಮೇಲಿನ ತಮ್ಮ ಹಿಡಿತ ಕಳೆದುಕೊಳ್ಳಬಾರದು ಎಂಬ ಉದ್ದೇಶದಿಂದ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಿದರು. ಇದು ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿಗೆ ನೆರವಾಗಲಿದೆ ಎಂಬುದು ಕ್ಷೇತ್ರದಲ್ಲಿ ಕೇಳಿಬರುತ್ತಿರುವ ಮಾತು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆ ಹಾಗೂ ರಾಜ್ಯ ನಾಯಕರ ಬೆಂಬಲ ಇಲ್ಲದೇ ಇದ್ದರೂ ಬಿಜೆಪಿ ಅಲ್ಪಮತಗಳ ಅಂತರದಿಂದ ಸೋಲು ಕಾಣಬೇಕಾಯಿತು. ಆಗ ಚುನಾವಣೆಯಲ್ಲಿ ಯಾವ ನಾಯಕರೂ ಪ್ರಚಾರಕ್ಕೆ ಬರಲಿಲ್ಲ. ಜೊತೆಗೆ ನಾಯಕರ ಮಧ್ಯೆ ಹೊಂದಾಣಿಕೆ ರಾಜಕಾರಣ ನಡೆಯಿತು. ಅದೇ ರೀತಿ ಲೋಕಸಭೆ ಚುನಾವಣೆ ಸಮಯದಲ್ಲೂ ರಾಜ್ಯ ಹಾಗೂ ಜಿಲ್ಲಾ ನಾಯಕರು ಕ್ಷೇತ್ರಕ್ಕೆ ಬರಲೇ ಇಲ್ಲ ಎಂಬ ಅಸಮಾಧಾನ ಕಾರ್ಯಕರ್ತರಲ್ಲಿದೆ. ಒಂದು ವೇಳೆ ಬಿಜೆಪಿ ಇಲ್ಲಿ ಹಿನ್ನಡೆ ಕಂಡರೆ ಅದಕ್ಕೆ ನಾಯಕರೇ ಕಾರಣ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳುತ್ತಿದೆ.

ಕೇಶವ ಆದಿ

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.