ಸವದತ್ತಿ:ಜಾಲತಾಣದಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ಫೋಟೋಗಳು; ಶಿಕ್ಷಕನ ಬಂಧನ
8 ನೇ ತರಗತಿಯಿಂದಲೇ ಲೈಂಗಿಕ ಕಿರುಕುಳ; ಮದುವೆ ಸಮಯದಲ್ಲಿ ಹರಿಬಿಟ್ಟ ಕಾಮುಕ
Team Udayavani, Jun 9, 2022, 6:21 PM IST
ಸವದತ್ತಿ : ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಾಲೇಜು ವಿದ್ಯಾರ್ಥಿನಿಯ ಅಸಹ್ಯಕರ, ಲೈಂಗಿಕತೆಯಲ್ಲಿ ಭಾಗಿಯಾದ ಆಶ್ಲೀಲ ಫೋಟೋಗಳು ಕಳೆದೆರದು ದಿನಗಳಿಂದ ಜಾಲತಾಣದಲ್ಲಿ ಭಾರಿ ಸದ್ದು ಮಾಡಿ ಕೊನೆಗೆ ಠಾಣೆ ಮೆಟ್ಟಿಲೇರಿ ಆರೋಪಿ ಶಿಕ್ಷೆಗೆ ಗುರಿಯಾದ ಘಟನೆ ನಡೆದಿದೆ.
ತಾಲೂಕಿನ ಯಕ್ಕುಂಡಿ ಗ್ರಾಮದ ಶಿಕ್ಷಕ ಮಹೇಶ ಬಿರಾದಾರ (45) ಪ್ರಕರಣದ ಆರೋಪಿ. ದೈಹಿಕ ಶಿಕ್ಷಕನಾದ ಮಹೇಶ ವಿದ್ಯಾರ್ಥಿನಿಗೆ ಮದುವೆ ಮಾಡಿಕೊಳ್ಳುವದಾಗಿ ಹೇಳಿ ಕೊಠಡಿಯಲ್ಲಿ ಲೈಂಗಿಕ ಕಿರುಕುಳ ನೀಡಿ ಫೋಟೋ ತೆಗೆದುಕೊಂಡಿದ್ದಾನೆ. ಅವಳ ಮದುವೆ ನಿಶ್ಚಯ ಸಮಯದಲ್ಲಿ ಮದುವೆ ನಿಲ್ಲಿಸಲೆಂದೇ ಜಾಲತಾಣದಲ್ಲಿ ಹರಿಬಿಟ್ಟು ಅವಮಾನಿಸಿದ್ದಾನೆ. 8 ನೇ ತರಗತಿಯಿಂದಲೇ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ ಎಂದು ಯುವತಿ ಆರೋಪಿಸಿದ್ದಾಳೆ.
ಸವದತ್ತಿ ಪಿಎಸ್ಐ ಶಿವಾನಂದ ಗುಡಗನಟ್ಟಿ ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ಶಿಕ್ಷಕನೂ ಪ್ರತಿದೂರು ದಾಖಲಿಸಿದ್ದಾನೆ.
ಇದನ್ನೂ ಓದಿ : ಚಿಕನ್ ಊಟದ ವಿಚಾರ ತಾರಕಕ್ಕೇರಿ ಪತ್ನಿಯನ್ನು ಇರಿದು ಕೊಂದ ಪತಿ
ಜೂನ್ 7 ಕ್ಕೆ ಘಟನೆ ಬೆಳಕಿಗೆ ಬಂದಿದ್ದು ಆರೋಪಿ ಮಹೇಶನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವಿಷಯದಲ್ಲಿ ಕೆಲ ಯುವಕರು ಹಾಗೂ ಸ್ಥಳಿಕರು ಆರೋಪಿಯನ್ನು ಶಾಲೆಯಲ್ಲಿಯೇ ಕೋಪದಿಂದ ಥಳಿಸಿದ್ದಾರೆ. ಶಾಲೆಯಲ್ಲಿ ಪಾಠಕ್ಕೆ ಅಡ್ಡಿ ಪಡಿಸಿದ ಕಾರಣ ಘಟನೆಯಲ್ಲಿ ಭಾಗಿಯಾದ ಯುವಕರ ಮೇಲೆ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪಿಎಸ್ಐ ಶಿವಾನಂದ ಗುಡಗನಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ