ಬನದ ಜಾತ್ರೆಗೆ ಯಲ್ಲಮ್ಮಗುಡ್ಡ ಸಜ್ಜು


Team Udayavani, Jan 21, 2019, 11:25 AM IST

21-january-19.jpg

ಸವದತ್ತಿ: ಬನದ ಹುಣ್ಣಿಮೆ ಜಾತ್ರೆಗೆ ಏಳುಕೊಳ್ಳದ ನಾಡು ಸಜ್ಜುಗೊಳ್ಳುತ್ತಿದೆ. ಸುಕ್ಷೇತ್ರ ಯಲ್ಲಮ್ಮನ ಸನ್ನಿಧಾನಕ್ಕೆ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರಿಗೆ ಸಂಚಾರದಲ್ಲಿ ತೊಂದರೆಯಾಗಬಾರದೆಂಬ ಉದ್ದೇಶದಿಂದ ಪ್ರಸಕ್ತ ವರ್ಷ ಆಡಳಿತ ಮಂಡಳಿಯ ಸಹಕಾರದೊಂದಿಗೆ ಪೊಲೀಸ್‌ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ಪ್ರತಿವರ್ಷ ಬನದ ಹಾಗೂ ಭಾರತ ಹುಣ್ಣಿಮೆ ಜಾತ್ರೆಯಲ್ಲಿ ಟ್ರಾಫಿಕ್‌ ಸಮಸ್ಯೆಯಿಂದ ಸ್ಥಳೀಯರಿಗೆ, ಭಕ್ತರಿಗೆ ಹಾಗೂ ವಾಹನ ಸವಾರರಿಗೆ ಬಹಳ ತೊಂದರೆಯಾಗುತ್ತಿತ್ತು. ಆದರೆ ಈ ಬಾರಿ ಸಂಚಾರದಲ್ಲಿ ಸಮಸ್ಯೆಯಾಗಬಾರದೆಂದು ಪೊಲೀಸ್‌ ಇಲಾಖೆ ಕೆಲ ಕ್ರಮಗಳನ್ನು ಕೈಗೊಂಡಿದೆ.

ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನದಲ್ಲಿ ಸೋಮವಾರ (ಜ. 21) ಜರುಗಲಿರುವ ಬನದ ಹುಣ್ಣಿಮೆ ಜಾತ್ರೆ ವೇಳೆ ಭದ್ರತೆಗೆ ಸವದತ್ತಿ, ಮುನವಳ್ಳಿ, ಮುರಗೋಡ, ಕಟಕೋಳ ಮತ್ತು ರಾಮದುರ್ಗ ಠಾಣೆಗಳಿಂದ 5 ಸಿಪಿಐ, 12 ಪಿಎಸೈ, 45 ಎಎಸೈ, 2 ಕೆಎಸ್‌ಆರ್‌ಪಿ, 2 ಡಿಎಆರ್‌, 40 ಮಹಿಳಾ ಸಿಬ್ಬಂದಿ ಸೇರಿದಂತೆ 200 ಪೇದೆಗಳು ಮತ್ತು 200 ಹೊಮ್‌ ಗಾರ್ಡ್ಸ್‌ಗಳನ್ನು ನಿಯೋಜನೆ ಮಾಡಲಾಗಿದೆ. ಸಂಚಾರದಲ್ಲಿ ನಿಯಂತ್ರಣದೊಂದಿಗೆ ಭಕ್ತರ ಸುರಕ್ಷತೆಗೆ ಪ್ರತಿ ಅರ್ಧ ಕಿಮೀಗೆ ಒಂದು ಪೊಲೀಸ್‌ ಟೆಂಟ್‌ ಹಾಕಲಾಗಿದೆ. ಇದರಿಂದ ಭಕ್ತರಿಗೆ ಮತ್ತು ವಾಹನ ಸವಾರರಿಗೆ ಅನುಕೂಲವಾಗಲಿದೆ.  

ಏಕಮುಖಿ  ಸಂಚಾರ: ಕಳೆದ ವರ್ಷದ ಜಾತ್ರೆಯಲ್ಲಿ ಜಾರಿಗೆ ಬಂದ ಏಕಮುಖೀ ಸಂಚಾರ ವ್ಯವಸ್ಥೆ ಮುಂದುವರಿಸಲಾಗಿದೆ. ಹೊರ ಹೋಗುವ  ವಾಹನಗಳಿಗೆ ಯಲ್ಲಮ್ಮ ದೇವಸ್ಥಾನದಿಂದ ಜೋಗಳಬಾವಿ ಕ್ರಾಸ್‌ ನವರೆಗೆ ಮತ್ತು ಒಳ ಬರುವ ವಾಹನಗಳಿಗೆ ಸವದತ್ತಿ ಎಪಿಎಂಸಿ ಕ್ರಾಸ್‌ದಿಂದ ದೇವಸ್ಥಾನಕ್ಕೆ ಏಕಮುಖಿ  ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಅದರೊಂದಿಗೆ ರಸ್ತೆ ವಿಭಜಕಗಳು ಹಾಗೂ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.

ತಪ್ಪದ ನೀರಿನ ಅಭಾವ
ಪ್ರತಿ ವರ್ಷದಂತೆ ಈ ವರ್ಷವು ಕುಡಿಯುವ ನೀರಿಗಾಗಿ ಭಕ್ತರು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಮುನ್ನಚ್ಚರಿಕೆ ಕ್ರಮವಾಗಿ ಟ್ಯಾಂಕರ್‌ ಮೂಲಕ ನೀರು ಒದಗಿಸುವ ಕಾರ್ಯ ನಡೆದಿದೆ. ಆದರೆ ಲಕ್ಷಾಂತರ ಸಂಖ್ಯೆಯಲ್ಲಿ ಸೇರುವ ಭಕ್ತರಿಗೆ ಟ್ಯಾಂಕರ್‌ ನೀರು ಪೂರೈಕೆ ಸಾಲುವುದಿಲ್ಲ. ಉಗರಗೋಳ, ಜೊಗಳಬಾವಿ, ಮಲಪ್ರಭಾ ನದಿಗೆ ಬಂದು ಟ್ಯಾಂಕರ್‌ಗಳ ಮೂಲಕ ನೀರು ತರುತ್ತಿರುವ ದೃಶ್ಯ ಕಂಡು ಬರುತ್ತಿದೆ. ಪ್ರತಿವರ್ಷ ಯಲ್ಲಮ್ಮ ದೇವಸ್ಥಾನಕ್ಕೆ ಬರುವ ಸಂಖ್ಯೆ ಹೆಚ್ಚುತ್ತಿದ್ದು, ಅದರನುಗುಣವಾಗಿ ಆಡಳಿತ ಮಂಡಳಿ ಎಲ್ಲ ರೀತಿಯಲ್ಲಿ ಕ್ರಮ ಕೈಗೊಂಡ್ಡಿದ್ದಾರೆ. ಆದರೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ನೀಗಿಸಲು ಇನ್ನು ಹೆಚ್ಚಿನ ಕ್ರಮ ಕೈಗೊಳ್ಳಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.

ಸಣ್ಣ ವ್ಯಾಪಾರಸ್ಥರ ಗೋಳು
ದೇವಸ್ಥಾನ ಆಡಳಿತ ಮಂಡಳಿಯೂ ದೇವಸ್ಥಾನ ಅಭಿವೃದ್ಧಿ ಹೆಸರಲ್ಲಿ ಸಣ್ಣ-ಪುಟ್ಟ ವ್ಯಾಪಾರಿಗಳನ್ನು ಕಡೆಗಣಿಸುತ್ತಿದ್ದಾರೆಂದು 4-5 ತಿಂಗಳಿನಿಂದ ವ್ಯಾಪಾರಿಗಳು ಹೋರಾಟ ಮಾಡಿದ್ದರು. ಈ ಕುರಿತು ಉನ್ನತಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಏನೂ ಪ್ರಯೋಜನವಾಗಿಲ್ಲ. ಮೂಲ ಸೌಕರ್ಯಗಳಿಲ್ಲದ ಹಾಗೂ ಸ್ವಚ್ಛತೆಯಿಲ್ಲದ ಸ್ಥಳಗಳಲ್ಲಿ ಅಂಗಡಿಗಳನ್ನು ಸ್ಥಳಾಂತರದಿಂದ ವ್ಯಾಪಾರ ವಹಿವಾಟಿಗೆ ತೊಂದರೆಯಾಗಬಹುದು. ದೇವಸ್ಥಾನಕ್ಕೆ ಬರುವ ಭಕ್ತರನ್ನೇ ನೆಚ್ಚಿ ಬದುಕು ನಡೆಸುವ ಸಣ್ಣ ವ್ಯಾಪಾರಿಗಳಿಗೆ ಕಷ್ಟವಾಗುತ್ತದೆ. ಬಂಡವಾಳ ಹೂಡಿದ ವ್ಯಾಪಾರಸ್ಥರಿಗೆ ಆಡಳಿತ ಮಂಡಳಿಯ ಈ ಆದೇಶದಿಂದ ಹಾಕಿದ ಹಣವೂ ಸಹ ವಾಪಸ್‌ ಬರುವುದಿಲ್ಲ ಎಂದು ಸಣ್ಣ ವ್ಯಾಪಾರಸ್ಥರು ಆರೋಪಿಸಿದ್ದಾರೆ.

ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸುರಕ್ಷತೆ ದೃಷ್ಟಿಯಿಂದ 500ಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ಹಾಗೂ ಗೃಹ ರಕ್ಷಕ ದಳ ನಿಯೋಜನೆ ಮಾಡಲಾಗಿದೆ. ಅಲ್ಲಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ವಾಹನಗಳನ್ನು ರಸ್ತೆ ಮಧ್ಯೆ ಅಡ್ಡಾದಿಡ್ಡಿ ನಿಲ್ಲಿಸುವುದೇ ಟ್ರಾಪಿಕ್‌ ಸಮಸ್ಯೆಗೆ ಪ್ರಮುಖ ಕಾರಣ. ಅದಕ್ಕಾಗಿ ಪ್ರತ್ಯೇಕ ನಿಲುಗಡೆ ಸ್ಥಳಗಳನ್ನು ನಿಗದಿ ಮಾಡಲಾಗಿದೆ. ವಾಹನ ದಟ್ಟಣೆ ತಡೆಗಟ್ಟಲು ಏಕಮುಖೀ ಸಂಚಾರಕ್ಕೆ ಆದ್ಯತೆ ನೀಡಲಾಗಿದೆ.
ಪರಶುರಾಮ ಪೂಜೇರ,
ಪಿಎಸೈ ಸವದತ್ತಿ

ಲಕ್ಷಾಂತರ ಸಂಖ್ಯೆಯಲ್ಲಿ ಸೇರುವ ಭಕ್ತರ ಅನುಕೂಲಕ್ಕಾಗಿ ಆಡಳಿತ ಮಂಡಳಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಇತರೆ ಮೂಲ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ. ಜಾತ್ರೆ ನಿಮಿತ್ತ ಹಲವಾರು ಧಾರ್ಮಿಕ ಕಾರ್ಯಕ್ರಮ ಜರುಗಲಿವೆ. ಎಲ್ಲ ಇಲಾಖೆಗಳ ಸಕಾರಾತ್ಮಕವಾಗಿ ಸ್ಪಂದನೆ ನೀಡುತ್ತಿವೆ.
ಎಸ್‌.ಪಿ. ಜಿರಗಾಳ,
ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ,
ಯಲ್ಲಮ್ಮ ದೇವಸ್ಥಾನ

„ಡಿ.ಎಸ್‌. ಕೊಪ್ಪದ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.