ಧಾರಾಕಾರ ಮಳೆ : ಸವದತ್ತಿ ಯಲ್ಲಮ್ಮ ದೇವಸ್ಥಾನದ ಆವರಣದೊಳಗೆ ನುಗ್ಗಿದ ನೀರು, ಭಕ್ತರ ಪರದಾಟ
ಯಲ್ಲಮ್ಮನ ಗುಡ್ಡದಲ್ಲಿ ನೀರೋ ನೀರು...
Team Udayavani, Jun 16, 2022, 9:37 PM IST
ಬೆಳಗಾವಿ : ಏಳುಕೊಳ್ಳದ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಗುರುವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಯಿಂದ ದೇವಸ್ಥಾನ ಪೌಳಿ(ಆವರಣ)ಗೆ ನುಗ್ಗಿದ ನೀರಿನಿಂದ ಭಕ್ತರು ಹಾಗೂ ಸಿಬ್ಬಂದಿ ಪರದಾಡುವಂತಾಯಿತು.
ರಭಸದ ಮಳೆಗೆ ಸವದತ್ತಿ ಯಲ್ಲಮ್ಮನ ದೇವಸ್ಥಾನದಲ್ಲಿ ನೀರು ಧಾರಾಕಾರವಾಗಿ ಹರಿದು ಬಂದಿತು. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಮಳೆ ಬಂದಿದ್ದರಿಂದ ಎಣ್ಣೆ ಹೊಂಡದಲ್ಲಿ ನೀರು ಮೊಣಕಾಲು ವರೆಗೂ ಹರಿದು ಬಂದು ಭಕ್ತರು ಆತಂಕಕ್ಕೀಡಾದರು.
ಗುಡ್ಡದಿಂದ ಏಕಾಏಕಿ ನೀರು ಬಂದಿದ್ದರಿಂದ ದೇವಸ್ಥಾನ ಮೆಟ್ಟಿಲುಗಳ ಮೇಲೆ ಜಲಪಾತದಂತೆ ನೀರು ಹರಿದು ಬಂದು ಭಕ್ತರು ಚೆಲ್ಲಾಪಿಲ್ಲಿಯಾದರು. ದರ್ಶನ ಪಡೆಯಲು ಭಕ್ತರು ಪರದಾಡಬೇಕಾಯಿತು. ಗುರುವಾರ ಭಕ್ತರ ಸಂಖ್ಯೆ ಕಡಿಮೆ ಇದ್ದಿದ್ದರಿಂದ ಜನದಟ್ಟಣೆ ಇರಲಿಲ್ಲ.
ದೇವಸ್ಥಾನದ ಒಳಗೆ ಹೋಗುವ ಪ್ರವೇಶ ದ್ವಾರದ ಹೊರ ಭಾಗದಲ್ಲಿ ಇತ್ತೀಚೆಗೆ ನಿರ್ಮಿಸಿರುವ ಸರದಿ ಸಾಲಿನ ಬ್ಯಾರಿಕೇಡ್ ಬಳಿಯೂ ನೀರು ಹೆಚ್ಚಾಗಿ ಬಂದಿತ್ತು. ಎಣ್ಣೆ ಹೊಂಡದ ಸುತ್ತ ನೀರು ಹರಿದು ಬರುತ್ತಿರುವ ದೃಶ್ಯ ನೋಡಿದರೆ ಮೈ ಜುಮ್ಮೆನ್ನುವಂತಿತ್ತು.
ಇದನ್ನೂ ಓದಿ : ದೇವನಹಳ್ಳಿ ಸಾವಿರಾರು ರೈತ ನಿಯೋಗದಿಂದ ಸಚಿವ ಮುರುಗೇಶ್ ನಿರಾಣಿ ಭೇಟಿ
ದೇವಸ್ಥಾನ ಆವರಣದಲ್ಲಿರುವ ಕೆಲವು ಡ್ರೈನೆಜ್ಗಳು ಬ್ಲಾಕ್ ಆಗಿದ್ದರಿಂದ ಮಳೆ ನೀರು ಹರಿಯಲು ಜಾಗ ಇರಲಿಲ್ಲ. ಪ್ಲಾಸ್ಟಿಕ್ ಸೇರಿದಂತೆ ಇತರೆ ತ್ಯಾಜ್ಯ ವಸ್ತುಗಳಿಂದ ಬ್ಲಾಕ್ ಆಗಿತ್ತು. ಹೀಗಾಗಿ ನೀರು ದೇವಸ್ಥಾನ ಪೌಳಿಯೊಳಗೆ ಹರಿದು ಬಂತು, ಕೂಡಲೇ ಸಿಬ್ಬಂದಿ ಆ ನೀರನ್ನು ಒಳಗಿನ ಡ್ರೈನೇಜ್ಗಳ ಮೂಲಕ ಹರಿದು ಹೋಗುವಂತೆ ವ್ಯವಸ್ಥೆ ಮಾಡಿದ್ದರಿಂದ ಯಾವುದೇ ಸಮಸ್ಯೆ ಆಗಲಿಲ್ಲ. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಮಳೆ ಆಯಿತು. ಮಳೆ ಕಡಿಮೆ ಆಗುತ್ತಿದ್ದಂತೆ ನೀರಿನ ರಭಸ ತುಸು ಇಳಿಕೆ ಆಯಿತು ಎಂದು ಸವದತ್ತಿ ಯಲ್ಲಮ್ಮ ದೇವಸ್ಥಾನ ಅಧೀಕ್ಷಕ ಅರವಿಂದ ಮಾಳಗೆ ಉದಯವಾಣಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ