ಸವದತ್ತಿ ಕೊಳ್ಳದಲ್ಲಿ ಜನಸಾಗರ

ದೇಶದ ನಾನಾ ಭಾಗಗಳಿಂದ ಬಂದ ಲಕ್ಷಾಂತರ ಭಕ್ತರು- ವ್ಯವಸ್ಥೆ ಸಾಲದಾಯ್ತು.. ಪರದಾಟ ತಪ್ಪದಾಯ್ತು..!

Team Udayavani, Feb 6, 2023, 11:02 AM IST

savadatti

ಸವದತ್ತಿ: ಯಲ್ಲಮ್ಮನಗುಡ್ಡಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುವ ಭಕ್ತರಿಗೆ ಉತ್ತಮ ರಸ್ತೆ, ಶುದ್ಧ ಕುಡಿಯುವ ನೀರು ಸೇರಿ ಮೂಲ ಸೌಲಭ್ಯಗಳ ಕೊರತೆ ಪ್ರತಿ ವರ್ಷ ಇದ್ದದ್ದೇ. ದೇವಸ್ಥಾನ ಆಡಳಿತ ಮಂಡಳಿಯವರು ಪ್ರತಿ ವರ್ಷ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಸಕಲ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸುತ್ತಾರಾದರೂ ಅಸಂಖ್ಯಾತ ಭಕ್ತರ ಮಧ್ಯೆ ಈ ವ್ಯವಸ್ಥೆಗಳು ಸಾಲದಾಗಿ ಭಕ್ತರ ಪರದಾಟ ಪ್ರತಿವರ್ಷ ತಪ್ಪಿದ್ದಲ್ಲ.

ನೀರಿನ ಗೋಳು: 20ಲಕ್ಷಕ್ಕೂ ಅ ಧಿಕ ಜನತೆ ಸೇರುವ ಜಾತ್ರೆಯಲ್ಲಿ ನೀರಿಗಾಗಿ ಪರದಾಟ ಸಾಮಾನ್ಯವಾಗಿದೆ. ಸರಕಾರದಿಂದ ಸಾಕಷ್ಟು ಅನುದಾನ ಹರಿದು ಬಂದರೂ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಗುಡ್ಡದಲ್ಲಿ 130ಕ್ಕೂ ಅಧಿ ಕ ನೀರಿನ ತೊಟ್ಟಿಗಳು, ನಲ್ಲಿಗಳನ್ನು ಅಳವಡಿಸಲಾಗಿದೆ. ಇವುಗಳ ಉಪಯೋಗ ಕೆಲ ಜನಕ್ಕೆ ಮಾತ್ರ ಆಗುತ್ತದೆ.

ಚಕ್ಕಡಿ ಜಾತ್ರೆ ಎಂದೇ ಪ್ರಸಿದ್ಧಿ ಪಡೆದ ಭರತ ಹುಣ್ಣಿಮೆ ಜಾತ್ರೆಗೆ ಅತ್ಯಧಿಕ ಪ್ರಮಾಣದಲ್ಲಿ ಚಕ್ಕಡಿಗಳು ಬರುತ್ತವೆ. ಎತ್ತುಗಳಿಗೂ ನೀರಿನ ಕೊರತೆಯಾಗಿ ಪಕ್ಕದ ಉಗರಗೋಳದ ಕೆರೆ, ಮಲಪ್ರಭಾ ನದಿಗೆ ಸುಮಾರು3-4 ಕಿ.ಮೀನಷ್ಟು ಸಾಗಿ ನೀರಿನ ಬವಣೆ ತಣಿಸುವಂತಾಗಿದೆ. ಭರತ ಹುಣ್ಣಿಮೆ ಜಾತ್ರೆಯಲ್ಲಿ ಬಿರು ಬಿಸಿಲು ಲೆಕ್ಕಿಸದೇ ಭಕ್ತರು ಸರದಿ ಸಾಲಲ್ಲಿ ನಿಂತು ದೇವಿ ದರ್ಶನ ಪಡೆದರು. ಭಕ್ತರ ಸಂಖ್ಯೆ ಹೆಚ್ಚಿದ್ದ ಕಾರಣ ರಸ್ತೆ ಮೇಲೂ ಜನ ಸಾಲುಗಟ್ಟಿ ನಿಲ್ಲುವಂತಾಯಿತು.

ವೃದ್ಧರು, ಮಹಿಳೆಯರು, ಕಿರಿಯರೆನ್ನದೇ ಬಿಸಿಲಿನಲ್ಲಿ ನಿಲ್ಲುವಂತಾಯಿತು. ನೀರು, ನೆರಳಿನ ವ್ಯವಸ್ಥೆ ಇಲ್ಲದೇ ಬಿಸಿಲಿನ ತಾಪಕ್ಕೆ ವೃದ್ಧ ಮಹಿಳೆ ತಲೆ ಸುತ್ತಿ ಬಿದ್ದ ಘಟನೆಯೂ ನಡೆಯಿತು.

ಟ್ರಾಫಿಕ್‌ ಸಮಸ್ಯೆ:

ಪ್ರತಿ ವರ್ಷ ರಸ್ತೆ ಬದಿ ವಾಹನ ನಿಲುಗಡೆ ಮಾಡುತ್ತಿದ್ದುದರಿಂದ ಜಾತ್ರೆ ದಿನ ಸವದತ್ತಿ, ಉಗರಗೋಳ, ನೂಲಿನ ಗಿರಣಿಗಳ ಮಾರ್ಗದಲ್ಲಿ ಟ್ರಾಫಿಕ್‌ ಸಮಸ್ಯೆ ಎದುರಾಗುತ್ತಿತ್ತು. ವಾಹನಗಳು ಸಾಲುಗಟ್ಟಿ ನಿಂತು ಸಂಕಷ್ಟ ಅನುಭವಿಸುತ್ತಿದ್ದರು. ಈ ಬಾರಿ ಪೊಲೀಸ್‌ ಹಾಗೂ ಗೃಹ ರಕ್ಷಕದಳದ ಕ್ರಮಬದ್ಧ ನಿರ್ವಹಣೆಯಿಂದ ಸಂಚಾರದಲ್ಲಿವ್ಯತ್ಯಯ ಉಂಟಾಗಲಿಲ್ಲ.

ಕಟ್ಟು ನಿಟ್ಟಿನ ಕ್ರಮ ವಹಿಸಿದ್ದರಿಂದ ಉಗರಗೋಳ ಮಾರ್ಗದ ಬನ್ನಿ ಮರಕ್ಕಷ್ಟೇ ಸಂಚಾರ ದಟ್ಟಣೆ ಸೀಮಿತವಾಗಿತ್ತು. ಉಗರಗೋಳ ಮಾರ್ಗದ ಇಕ್ಕಟ್ಟಾದ ರಸ್ತೆಯಿಂದ ಟ್ರಾಫಿಕ್‌ ಸಮಸ್ಯೆ ಎದುರಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಅಗಲಿಕರಣಗೊಳಸಬೇಕಂಬ ಕೂಗು ಕೇಳಿ ಬಂತು.

ಜೋಗುಳಭಾವಿ ಮತ್ತುಎಪಿಎಂಸಿ ಕ್ರಾಸ್‌ನಲ್ಲಿ ವಾಹನಗಳ ಓಡಾಟ ಸರಾಗವಾಗಿ ನಡೆಯಿತು. ಪೊಲೀಸ್‌ ಇಲಾಖೆ ಕಾರ್ಯ ವೈಖರಿಗೆ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

30 ವರ್ಷಗಳಿಂದ ಅಮ್ಮನ ಜಾತ್ರೆಗೆ ಬರುವ ನಾವು ಪ್ರತಿ ವರ್ಷ ಟ್ರಾಫಿಕ್‌ ಸಮಸ್ಯೆ ಅನುಭವಿಸುತ್ತಿದ್ದೆವು. ಇದೀಗ ಪೊಲೀಸರ ಸಹಕಾರದಿಂದ ಸಂಚಾರ ಸಮಸ್ಯೆ ಕೊಂಚ ತಪ್ಪಿದಂತಾಗಿದೆ. ಜಾನುವಾರುಗಳ ಕುಡಿವ ನೀರಿಗಾಗಿ ಪಕ್ಕದ ಉಗರಗೋಳ ಕೆರೆ ಆಸರೆಯಾಗಿದೆ. ಆಡಳಿತ ವರ್ಗದಿಂದ ಸಮರ್ಪಕ ನೀರು ಪೂರೈಸಬೇಕಿದೆ. -ಸಂಗಪ್ಪ ಅಂಕಲಿ, ಹದಲಿ ಗ್ರಾಮದ ದೇವಿ ಭಕ್ತ

ರಸ್ತೆ ಸೇತುವೆಗೆ ಒತ್ತಾಯ:

ಕಳೆದ 5 ವರ್ಷಗಳ ಹಿಂದೆ ಆರಂಭಗೊಂಡಿದ್ದ ಯಲ್ಲಮ್ಮನ ಗುಡ್ಡದ ಬೈಪಾಸ್‌ ರಸ್ತೆ ಸೇತುವೆ ಕಾಮಗಾರಿ ಅಪೂರ್ಣಗೊಂಡಿದೆ.  ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಈಗ ಕೆಲ ವಾಹನ ಸವಾರರು ಇದೇ
ಸೇತುವೆ ಮೇಲೆ ಸಂಚರಿಸುತ್ತಿದ್ದು, ಅವಘಡ ಸಂಭವಿಸುವ ಮೊದಲೇಕಾಮಗಾರಿ ಮುಕ್ತಾಯಗೊಳಿಸಲು ವಾಹನ ಸವಾರರು ಒತ್ತಾಯಿಸಿದ್ದಾರೆ.

-ಡಿ.ಎಸ್‌.ಕೊಪ್ಪದ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.