ಸವದತ್ತಿ ಕೊಳ್ಳದಲ್ಲಿ ಜನಸಾಗರ

ದೇಶದ ನಾನಾ ಭಾಗಗಳಿಂದ ಬಂದ ಲಕ್ಷಾಂತರ ಭಕ್ತರು- ವ್ಯವಸ್ಥೆ ಸಾಲದಾಯ್ತು.. ಪರದಾಟ ತಪ್ಪದಾಯ್ತು..!

Team Udayavani, Feb 6, 2023, 11:02 AM IST

savadatti

ಸವದತ್ತಿ: ಯಲ್ಲಮ್ಮನಗುಡ್ಡಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುವ ಭಕ್ತರಿಗೆ ಉತ್ತಮ ರಸ್ತೆ, ಶುದ್ಧ ಕುಡಿಯುವ ನೀರು ಸೇರಿ ಮೂಲ ಸೌಲಭ್ಯಗಳ ಕೊರತೆ ಪ್ರತಿ ವರ್ಷ ಇದ್ದದ್ದೇ. ದೇವಸ್ಥಾನ ಆಡಳಿತ ಮಂಡಳಿಯವರು ಪ್ರತಿ ವರ್ಷ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಸಕಲ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸುತ್ತಾರಾದರೂ ಅಸಂಖ್ಯಾತ ಭಕ್ತರ ಮಧ್ಯೆ ಈ ವ್ಯವಸ್ಥೆಗಳು ಸಾಲದಾಗಿ ಭಕ್ತರ ಪರದಾಟ ಪ್ರತಿವರ್ಷ ತಪ್ಪಿದ್ದಲ್ಲ.

ನೀರಿನ ಗೋಳು: 20ಲಕ್ಷಕ್ಕೂ ಅ ಧಿಕ ಜನತೆ ಸೇರುವ ಜಾತ್ರೆಯಲ್ಲಿ ನೀರಿಗಾಗಿ ಪರದಾಟ ಸಾಮಾನ್ಯವಾಗಿದೆ. ಸರಕಾರದಿಂದ ಸಾಕಷ್ಟು ಅನುದಾನ ಹರಿದು ಬಂದರೂ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಗುಡ್ಡದಲ್ಲಿ 130ಕ್ಕೂ ಅಧಿ ಕ ನೀರಿನ ತೊಟ್ಟಿಗಳು, ನಲ್ಲಿಗಳನ್ನು ಅಳವಡಿಸಲಾಗಿದೆ. ಇವುಗಳ ಉಪಯೋಗ ಕೆಲ ಜನಕ್ಕೆ ಮಾತ್ರ ಆಗುತ್ತದೆ.

ಚಕ್ಕಡಿ ಜಾತ್ರೆ ಎಂದೇ ಪ್ರಸಿದ್ಧಿ ಪಡೆದ ಭರತ ಹುಣ್ಣಿಮೆ ಜಾತ್ರೆಗೆ ಅತ್ಯಧಿಕ ಪ್ರಮಾಣದಲ್ಲಿ ಚಕ್ಕಡಿಗಳು ಬರುತ್ತವೆ. ಎತ್ತುಗಳಿಗೂ ನೀರಿನ ಕೊರತೆಯಾಗಿ ಪಕ್ಕದ ಉಗರಗೋಳದ ಕೆರೆ, ಮಲಪ್ರಭಾ ನದಿಗೆ ಸುಮಾರು3-4 ಕಿ.ಮೀನಷ್ಟು ಸಾಗಿ ನೀರಿನ ಬವಣೆ ತಣಿಸುವಂತಾಗಿದೆ. ಭರತ ಹುಣ್ಣಿಮೆ ಜಾತ್ರೆಯಲ್ಲಿ ಬಿರು ಬಿಸಿಲು ಲೆಕ್ಕಿಸದೇ ಭಕ್ತರು ಸರದಿ ಸಾಲಲ್ಲಿ ನಿಂತು ದೇವಿ ದರ್ಶನ ಪಡೆದರು. ಭಕ್ತರ ಸಂಖ್ಯೆ ಹೆಚ್ಚಿದ್ದ ಕಾರಣ ರಸ್ತೆ ಮೇಲೂ ಜನ ಸಾಲುಗಟ್ಟಿ ನಿಲ್ಲುವಂತಾಯಿತು.

ವೃದ್ಧರು, ಮಹಿಳೆಯರು, ಕಿರಿಯರೆನ್ನದೇ ಬಿಸಿಲಿನಲ್ಲಿ ನಿಲ್ಲುವಂತಾಯಿತು. ನೀರು, ನೆರಳಿನ ವ್ಯವಸ್ಥೆ ಇಲ್ಲದೇ ಬಿಸಿಲಿನ ತಾಪಕ್ಕೆ ವೃದ್ಧ ಮಹಿಳೆ ತಲೆ ಸುತ್ತಿ ಬಿದ್ದ ಘಟನೆಯೂ ನಡೆಯಿತು.

ಟ್ರಾಫಿಕ್‌ ಸಮಸ್ಯೆ:

ಪ್ರತಿ ವರ್ಷ ರಸ್ತೆ ಬದಿ ವಾಹನ ನಿಲುಗಡೆ ಮಾಡುತ್ತಿದ್ದುದರಿಂದ ಜಾತ್ರೆ ದಿನ ಸವದತ್ತಿ, ಉಗರಗೋಳ, ನೂಲಿನ ಗಿರಣಿಗಳ ಮಾರ್ಗದಲ್ಲಿ ಟ್ರಾಫಿಕ್‌ ಸಮಸ್ಯೆ ಎದುರಾಗುತ್ತಿತ್ತು. ವಾಹನಗಳು ಸಾಲುಗಟ್ಟಿ ನಿಂತು ಸಂಕಷ್ಟ ಅನುಭವಿಸುತ್ತಿದ್ದರು. ಈ ಬಾರಿ ಪೊಲೀಸ್‌ ಹಾಗೂ ಗೃಹ ರಕ್ಷಕದಳದ ಕ್ರಮಬದ್ಧ ನಿರ್ವಹಣೆಯಿಂದ ಸಂಚಾರದಲ್ಲಿವ್ಯತ್ಯಯ ಉಂಟಾಗಲಿಲ್ಲ.

ಕಟ್ಟು ನಿಟ್ಟಿನ ಕ್ರಮ ವಹಿಸಿದ್ದರಿಂದ ಉಗರಗೋಳ ಮಾರ್ಗದ ಬನ್ನಿ ಮರಕ್ಕಷ್ಟೇ ಸಂಚಾರ ದಟ್ಟಣೆ ಸೀಮಿತವಾಗಿತ್ತು. ಉಗರಗೋಳ ಮಾರ್ಗದ ಇಕ್ಕಟ್ಟಾದ ರಸ್ತೆಯಿಂದ ಟ್ರಾಫಿಕ್‌ ಸಮಸ್ಯೆ ಎದುರಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಅಗಲಿಕರಣಗೊಳಸಬೇಕಂಬ ಕೂಗು ಕೇಳಿ ಬಂತು.

ಜೋಗುಳಭಾವಿ ಮತ್ತುಎಪಿಎಂಸಿ ಕ್ರಾಸ್‌ನಲ್ಲಿ ವಾಹನಗಳ ಓಡಾಟ ಸರಾಗವಾಗಿ ನಡೆಯಿತು. ಪೊಲೀಸ್‌ ಇಲಾಖೆ ಕಾರ್ಯ ವೈಖರಿಗೆ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

30 ವರ್ಷಗಳಿಂದ ಅಮ್ಮನ ಜಾತ್ರೆಗೆ ಬರುವ ನಾವು ಪ್ರತಿ ವರ್ಷ ಟ್ರಾಫಿಕ್‌ ಸಮಸ್ಯೆ ಅನುಭವಿಸುತ್ತಿದ್ದೆವು. ಇದೀಗ ಪೊಲೀಸರ ಸಹಕಾರದಿಂದ ಸಂಚಾರ ಸಮಸ್ಯೆ ಕೊಂಚ ತಪ್ಪಿದಂತಾಗಿದೆ. ಜಾನುವಾರುಗಳ ಕುಡಿವ ನೀರಿಗಾಗಿ ಪಕ್ಕದ ಉಗರಗೋಳ ಕೆರೆ ಆಸರೆಯಾಗಿದೆ. ಆಡಳಿತ ವರ್ಗದಿಂದ ಸಮರ್ಪಕ ನೀರು ಪೂರೈಸಬೇಕಿದೆ. -ಸಂಗಪ್ಪ ಅಂಕಲಿ, ಹದಲಿ ಗ್ರಾಮದ ದೇವಿ ಭಕ್ತ

ರಸ್ತೆ ಸೇತುವೆಗೆ ಒತ್ತಾಯ:

ಕಳೆದ 5 ವರ್ಷಗಳ ಹಿಂದೆ ಆರಂಭಗೊಂಡಿದ್ದ ಯಲ್ಲಮ್ಮನ ಗುಡ್ಡದ ಬೈಪಾಸ್‌ ರಸ್ತೆ ಸೇತುವೆ ಕಾಮಗಾರಿ ಅಪೂರ್ಣಗೊಂಡಿದೆ.  ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಈಗ ಕೆಲ ವಾಹನ ಸವಾರರು ಇದೇ
ಸೇತುವೆ ಮೇಲೆ ಸಂಚರಿಸುತ್ತಿದ್ದು, ಅವಘಡ ಸಂಭವಿಸುವ ಮೊದಲೇಕಾಮಗಾರಿ ಮುಕ್ತಾಯಗೊಳಿಸಲು ವಾಹನ ಸವಾರರು ಒತ್ತಾಯಿಸಿದ್ದಾರೆ.

-ಡಿ.ಎಸ್‌.ಕೊಪ್ಪದ

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b-bommai

ಬಿಜೆಪಿ ಶಾಸಕರಿಗೆ ಡಿಕೆ ಶಿವಕುಮಾರ್ ಟಿಕೆಟ್ ಆಮಿಷ: ಸಿಎಂ ಬೊಮ್ಮಾಯಿ

2025ರೊಳಗೆ ಕ್ಷಯರೋಗ ಮುಕ್ತ ಭಾರತಕ್ಕೆ ಶ್ರಮಿಸಿ: ಡಿಸಿ

2025ರೊಳಗೆ ಕ್ಷಯರೋಗ ಮುಕ್ತ ಭಾರತಕ್ಕೆ ಶ್ರಮಿಸಿ: ಡಿಸಿ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

1-qqewqewqe

ಮುಸ್ಲಿಂ ಬೃಹತ್ ಸಮಾವೇಶ ಮಾಡಿದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್