ಸಹಕಾರಿಗಳನ್ನು ಉಳಿಸಿ-ಬೆಳೆಸಿ: ಸವದಿ

ರಾಜ್ಯದ 22 ಲಕ್ಷ ಕುಟುಂಬಗಳಿಗೆ ಪತ್ತಿನ ಸಾಲದ ಲಾಭ

Team Udayavani, Apr 26, 2022, 2:19 PM IST

16

ಅಥಣಿ: ರಾಷ್ಟ್ರದಲ್ಲಿ ರೈತರಿಗೆ ಬಡ್ಡಿ ರಹಿತ ಸಾಲ ನೀಡಿದ್ದು ಕರ್ನಾಟಕ ರಾಜ್ಯ. ಅದರಲ್ಲಿ ಅತಿ ಹೆಚ್ಚು ರೈತರಿಗೆ ಸಾಲ ನೀಡುತ್ತಿರುವುದು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ ಆಗಿದ್ದು, ಸಹಕಾರ ರಂಗದಲ್ಲಿ ಅತಿ ಹೆಚ್ಚು ಸಾಲಮನ್ನಾ ಮಾಡಿಕೊಂಡ ತಾಲೂಕು ಅಥಣಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಹೇಳಿದರು.

ಅವರು ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ಶ್ರೀ ಅರವಟ್ಟಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉದ್ಘಾಟನಾ ಸಮಾರಂಭ ಹಾಗೂ ಸಾಲ ಪತ್ರ, ಮುದ್ದತ ಠೇವು ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಗ್ರಾಮದಲ್ಲಿ ಮೂರು ಸಹಕಾರ ಪತ್ತಿನ ಬ್ಯಾಂಕ್‌ಗಳನ್ನು ಅತ್ಯಂತ ಉತ್ತಮ ರೀತಿಯಿಂದ ಬೆಳೆಸಿದ್ದಾರೆ. ಇದನ್ನು ಉಳಿಸಿಕೊಂಡು ಹೋಗುವುದು ನಿಮ್ಮೆಲ್ಲರ ಹೆಗಲ ಮೇಲಿದೆ ಎಂದು ತಿಳಿಸಿದರು.

ಈಗಾಗಾಲೇ 22 ಲಕ್ಷ ಕುಟುಂಬಗಳು ನಮ್ಮ ರಾಜ್ಯದಲ್ಲಿ ಪತ್ತಿನಿಂದ ಸಾಲವನ್ನು ಪಡೆದಿವೆ. ಪತ್ತಿನಿಂದ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಎಲ್ಲರೂ ಬೆಳೆಯಬೇಕು ಎನ್ನುವ ಉದ್ದೇಶ ನಮ್ಮದಾಗಿದೆ. ಅರ್ಧನಾರೇಶ್ವರ ಹಾಗೂ ವೈದ್ಯನಾಥನ್‌ ವರದಿಗಳು ಸಹಕಾರಿ ರಂಗಕ್ಕೆ ಬಹುಪಯೋಗಿಯಾಗಿವೆ ಎಂದರು.

ಬಿಡಿಸಿಸಿ ಅಧ್ಯಕ್ಷರಾದ ರಮೇಶ ಕತ್ತಿ ಅವರು ರೈತರಿಗೆ ಸಾಲಪತ್ರ ವಿತರಿಸಿ ಮಾತನಾಡಿ, ಸುಮಾರು 8 ಕೋಟಿ 30 ಲಕ್ಷ ರೂ. ಪತ್ತನ್ನು ಶೂನ್ಯ ಬಡ್ಡಿದರದಲ್ಲಿ ಪಡೆದುಕೊಂಡು ಅಭಿವೃದ್ಧಿ ನಾಮವನ್ನು ಜಪಿಸುತ್ತಿರುವ ದರೂರ ಗ್ರಾಮಸ್ಥರ ನಡೆ ಶ್ಲಾಘನೀಯ.

ಅದೇ ರೀತಿ ಶೂನ್ಯ ಬಡ್ಡಿದರ ಸಾಲ ಯೋಜನೆಯಿಂದ ಅಥಣಿ ತಾಲೂಕಿನ ರೈತರಿಗೆ ಹೆಚ್ಚು ಅನುಕೂಲವಾಗಿದೆ. ಮೂರು ಬಾರಿ ಸಾಲಮನ್ನಾ ಆದಾಗ ಅಥಣಿ ತಾಲೂಕಿನ ರೈತರಿಗೆ ಸುಮಾರು 300 ಕೋಟಿ ರೂ. ಅನುಕೂಲವಾಗಿದೆ. ಒಂದೇ ಗ್ರಾಮದಲ್ಲಿ ಮೂರು ಸಹಕಾರಿ ಸಂಘಗಳನ್ನು ಸ್ಥಾಪನೆ ಮಾಡುವ ಮೂಲಕ ರೈತರ ಮತ್ತು ಕಬ್ಬು ಬೆಳೆಗಾರರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಹಾಗೂ ಶ್ರೀ ಅರವಟ್ಟಿಗೆ ಪಿಕೆಪಿಎಸ್‌ ಅಧ್ಯಕ್ಷ ಸುರೇಶ ಮಾಯನ್ನವರ ಮಾತನಾಡಿ, ಸಹಕಾರಿ ಸಂಘವನ್ನು ಕಟ್ಟಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಮಹಿಳೆಯರು ಸ್ವಾವಲಂಬಿ ಜೀವನ ಮಾಡಲು ಪತ್ತಿನ ಸಾಲವನ್ನು ಹೆಚ್ಚಿಸಬೇಕು ಎಂದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀಕಾಂತ್‌ ಅಸ್ಕಿ, ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸಂಜೀವಕುಮಾರ ಅವಕ್ಕನ್ನವರ, ಅರಿಹಂತ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜೈಪಾಲ್‌ ಚೌಗಲಾ, ಸಹಕಾರ ಇಲಾಖೆ ಉಪನಿಬಂಧಕ ಕೆ.ಎಲ್‌ ಶ್ರೀನಿವಾಸ್‌, ಚಿಕ್ಕೋಡಿ ಉಪನಿಬಂಧಕ ಗೌಡಪ್ಪನವರ, ಅಥಣಿ ನಿಯಂತ್ರಣ ಅಧಿಕಾರಿ ಎಸ್‌ ಎಸ್‌ ನಂದೇಶ್ವರ, ಬಾಯಪ್ಪಾ ಹೊಳೆಪ್ಪಗೋಳ, ಆನಂದ ಚೌಗಲಾ, ಆರ್‌ ಎನ್‌ ನೂಲಿ, ಶಬ್ಬೀರ ಮುಜಾವರ, ಸಾಗರ ಖಂಡಾಲ್ಕರ, ಎಮ್‌ ಎ ಮಾಳಿ, ಆರ್‌ ಬಿ ಗಲಗಲಿ, ಫರೀಧ ಅವಟಿ, ಮಹದೇವ ಬಸಗೌಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಶ್ರೀಕಾಂತ್‌ ಅಸ್ಕಿ ಸ್ವಾಗತಿಸಿದರು. ಸಂಗಮೇಶ ಹಚ್ಚಡದ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.