ಶಾಲೆಗೆ ಬಸ್‌ ಸೌಲಭ್ಯ ನೀಡಿಕೆ: ಪ್ರತಿಭಟನೆ ಹಿಂದಕ್ಕೆ


Team Udayavani, Jul 14, 2019, 10:06 AM IST

bg-tdy-3.

ರಾಮದುರ್ಗ: ಕಟಕೋಳ ಆದರ್ಶ ವಿದ್ಯಾಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಿರುವ ಕುರಿತು ಸ್ಥಳೀಯ ಸಾರಿಗೆ ಘಟಕ ವ್ಯವಸ್ಥಾಪಕ ಎಚ್.ಆರ್‌. ಪಾಟೀಲ ಪಾಲಕರಿಗೆ ಲಿಖೀತ ಪತ್ರ ನೀಡಿದರು.

ರಾಮದುರ್ಗ: ಕಟಕೋಳ ಆದರ್ಶ ವಿದ್ಯಾಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಪಾಲಕರು ಪ್ರತಿಭಟನೆ ನಡೆಸುವ ಮುನ್ನವೇ ಸಾರಿಗೆ ಇಲಾಖೆ ಅಧಿಕಾರಿಗಳು ಸೌಲಭ್ಯ ಕಲ್ಪಿಸಿದ್ದಾರೆ.

ಪಟ್ಟಣದಲ್ಲಿದ್ದ ಆದರ್ಶ ವಿದ್ಯಾಲಯವನ್ನು ಕಟಕೋಳಕ್ಕೆ ಸ್ಥಳಾಂತರಿಸಿದ್ದರಿಂದ ರಾಮದುರ್ಗ ಪಟ್ಟಣ, ಸುರೇಬಾನ, ಸಂಗಳ, ಕಲಹಾಳ, ಮುದೇನೂರ, ಬಟಕುರ್ಕಿ, ಮುದಕವಿ ಸೇರಿದಂತೆ ಇತರ ಭಾಗಗಳ ಸುಮಾರು 180 ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯ ಇಲ್ಲದೆ ತೊಂದರೆ ಅನುಭವಿಸುವಂತಾಗಿತ್ತು. ವಿದ್ಯಾರ್ಥಿಗಳಿಗೆ ಕಟಕೋಳಕ್ಕೆ ಹೋಗಲು ಸರಿಯಾಗಿ ಬಸ್ಸಿನ ವ್ಯವಸ್ಥೆ ಇಲ್ಲ. ಬೆಳಿಗ್ಗೆ 8.30 ಹಾಗೂ 9 ಗಂಟೆ ಸಮಯಕ್ಕೆ ಹಾಗೂ ಮರಳಿ ಶಾಲೆ ಬಿಡುವ ಸಮಯ 5 ಹಾಗೂ 5.30ಕ್ಕೆ ಬಸ್ಸಿನ ವ್ಯವಸ್ಥೆ ಮಾಡಬೇಕು. ಒಂದು ವೇಳೆ ಜು.13ರೊಳಗಾಗಿ ಈ ವ್ಯವಸ್ಥೆ ಕಲ್ಪಿಸದೆ ಹೋದಲ್ಲಿ ಅಲ್ಲಿನ ಶಾಲೆಯ ಮಕ್ಕಳ ಜೊತೆಗೆ ಪಾಲಕರು ಸೇರಿಕೊಂಡು ರಾಮದುರ್ಗ ಸಾರಿಗೆ ಘಟಕದ ಮುಖ್ಯ ಗೇಟ್ ಬಂದ್‌ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಚ್ಚರಿಕೆ ನೀಡಿದ್ದರು.

ಇದನ್ನು ಅರಿತ ಸಾರಿಗೆ ಇಲಾಖೆ ಅಧಿಕಾರಿಗಳು ಶನಿವಾರ ಬಸ್‌ ಸೌಲಭ್ಯ ಕಲ್ಪಿಸಿರುವ ಕುರಿತು ಪಾಲಕರಿಗೆ ತಿಳಿಸಿದ್ದಾರೆ. ಬೆಳಿಗ್ಗೆ 8.45 ಕ್ಕೆ ಹಾಗೂ 9 ಗಂಟೆಗೆ ಮತ್ತು ಸಂಜೆ 4.45ಕ್ಕೆ ಹಾಗೂ 5 ಗಂಟೆಗೆ ಸಮಯಕ್ಕೆ ಕಟಕೋಳ ಹಾಗೂ ಗೊಡಚಿ ಮೂಲಕ ಆದರ್ಶ ವಿದ್ಯಾಲಯ ಮಾರ್ಗವಾಗಿ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸ್ಥಳೀಯ ಸಾರಿಗೆ ಘಟಕದ ವ್ಯವಸ್ಥಾಪಕ ಎಚ್.ಆರ್‌. ಪಾಟೀಲ ಪಾಲಕರಿಗೆ ಲಿಖೀತ ಪತ್ರ ನೀಡಿದರು.

ಈ ಕುರಿತು ವಿದ್ಯಾರ್ಥಿ ಪಾಲಕ ಸಹದೇವ ಪವಾರ ಮಾತನಾಡಿ, ನಮ್ಮ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಬಸ್‌ ಸೌಲಭ್ಯ ಕಲ್ಪಿಸಿದ ಕಾರಣ ಜು.13ರಂದು ನಡೆಸಬೇಕಾಗಿದ್ದ ಪ್ರತಿಭಟನೆ ಹಿಂಪಡೆದುಕೊಂಡಿದ್ದೇವೆ ಎಂದರು. ಮಲಿಕಾಜಗೌಡ ಪಾಟೀಲ, ಆರ್‌.ಬಿ. ಸವಟಗಿ, ಎಸ್‌.ಬಿ. ಹೊಸಮನಿ, ಯಶೋಧಾ ಅರಮನಿ, ಜಗದೀಶ ಆರಿಬೆಂಚಿ, ಎಸ್‌.ಬಿ. ಬೈರಕಧಾರ, ಚಂದ್ರಕಾಂತ ಹೊಸಮನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.