ಸ್ವಂತ ಕಟ್ಟಡವಿಲ್ಲದೆ ಸೊರಗುತ್ತಿದೆ ಶಾಲೆ


Team Udayavani, Jan 1, 2020, 1:31 PM IST

bg-tdy-1

ಚಿಕ್ಕೋಡಿ: ನಗರದ ಹೃದಯ ಭಾಗದಲ್ಲಿ ಇರುವ ವೆಂಕಟೇಶ ಗಲ್ಲಿಯ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯು ಅನೇಕ ದಶಕಗಳಿಂದ ಸ್ವಂತ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ನಿತ್ಯ ಸಮಸ್ಯೆಯಾಗಿ ಪರಿಣಮಿಸುತ್ತಿದೆ.

ಸ್ಥಳೀಯ ವೆಂಕಟೇಶ ಮಂದಿರ ವ್ಯವಸ್ಥಾಪಕ ಕಮಿಟಿಗೆ ಸೇರಿದ ಕಟ್ಟಡ ಮೂರು ಕೋಣೆಯಲ್ಲಿ ಬಾಡಿಗೆ ಆಧಾರದ ಮೇಲೆ ಶಾಲೆ ನಡೆಯುತ್ತಿದೆ. ಈ ಶಾಲೆಯಲ್ಲಿ ಒಂದರಿಂದ ಐದನೆ ತರಗತಿ ನಡೆಯುತ್ತಿದ್ದು, ಶಾಲೆಯಲ್ಲಿ 32 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯಲ್ಲಿ ಮೂರು ಕೊಠಡಿಯಿದ್ದು, ಒಂದರಲ್ಲಿ ಮಧ್ಯಾಹ್ನ ಬಿಸಿಯೂಟ ತಯಾರು ಮಾಡಲು ಬಳಕೆ ಮಾಡಲಾಗುತ್ತದೆ. ಇದರಿಂದ ಕೇವಲ ಎರಡು ಕೊಠಡಿಗಳಲ್ಲಿ ತರಗತಿ ನಡೆಯುತ್ತಿವೆ.

ಶಾಲೆಯಲ್ಲಿ ಶೌಚಾಲಯವೆ ಇಲ್ಲ: ದೇಶದಲ್ಲಿ ಎಲ್ಲ ಕಡೆ ಶೌಚಾಲಯ ನಿರ್ಮಾನ ಹಾಗೂ ಸ್ವಚ್ಛತೆ ಬಗ್ಗೆ ಅಭಿಯಾನ ಭರದಿಂದ ನಡೆದಾಗ ಈ ಶಾಲೆಯಲ್ಲಿ ಶೌಚಾಲಯವೇ ಇಲ್ಲದೇ ಇರುವುದು ದುರ್ದೈವದ ಸಂಗತಿ. ಇದರಿಂದ ಇಡೀ ದಿನ ವಿದ್ಯಾರ್ಥಿಗಳ ಜೊತೆ ಶಿಕ್ಷಕಿಯರು ಶೌಚಾಲಯಕ್ಕೆ ಅಲೆದಾಡಬೇಕಾದ ಅನುವಾರ್ಯತೆ ಇದೆ. ಅನೇಕ ಪಾಲಕರು ತನ್ನ ಹೆಣ್ಣು ಮಕ್ಕಳಿಗೆ ಈ ಶಾಲೆಗೆ ಕಳಿಸಲು ಹಿಂದೆಟ್ಟು ಹಾಕುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ರಸ್ತೆಯೇ ಶಾಲಾ ಮೈದಾನ: ಒಂದು ಶಾಲೆ ಎಂದರೇ ಅಲ್ಲಿ ಮೂಲಭೂತ ಸೌಲಭ್ಯ ಇರಬೇಕೆನ್ನುವುದು ಸಹಜ, ಆದರೆ ಈ ಶಾಲೆಯ ಮಕ್ಕಳು ಆಟವಾಡಲು ಮೈದಾನ ಇಲ್ಲದಂತಾಗಿದೆ. ಶಾಲೆಯ ಮುಂಭಾಗದಲ್ಲಿ ಇರುವ ರಸ್ತೆಯ ಮೇಲೆ ಆಟ ಆಡುತ್ತಾರೆ. ಹೀಗಾಗಿ ರಸ್ತೆಯ ಮೇಲೆ ಹೋಗಿ ಬರುವ ವಾಹನಗಳಿಂದ ಆಗುವ ಅಪಘಾತದ ಬೀತಿ ಮಕ್ಕಳನ್ನು ಕಾಡುತ್ತಿದೆ. ವೆಂಕಟೇಶ ಮಂದಿರದ ಕಟ್ಟಡದಲ್ಲಿ ಇರುವ ಶಾಲೆಯ ಅನಾನುಕೂಲತೆ ಗುರ್ತಿಸಿ 2015ರಲ್ಲಿ ಗಾಲೆಗಲ್ಲಿಯ ಹಳೆ ಮರಾಠಿ ಶಾಲೆಯ ಹತ್ತಿರ 480 ಅಳತೆಯ ಜಾಗ ಮೀಸಲಿಡಲಾಗಿದೆ.

ಈಗ ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹೆಸರಿನಲ್ಲಿದೆ. ಆದರೆ ಕಳೆದ ನಾಲ್ಕೈದು ವರ್ಷಗಳಿಂದ ಕಟ್ಟಡಕ್ಕಾಗಿ ಶಿಕ್ಷಣ ಇಲಾಖೆ ಯಾವುದೇ ಹೆಜ್ಜೆ ಇಟ್ಟಿಲ್ಲ, ಇದಕ್ಕಾಗಿ ಯಾವುದೇ ಅನುದಾನ ಮಂಜೂರಾಗಿಲ್ಲ, ಇದರಿಂದ ಇನ್ನು ಎಷ್ಟು ವರ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬಾಡಿಗೆ ಕೊಠಡಿಯಲ್ಲಿ ಶಿಕ್ಷಣ ಪಡೆಯಬೇಕು ಎನ್ನುವ ಗೊಂದಲದಲ್ಲಿ ಮಕ್ಕಳ ಪಾಲಕರು ಇದ್ದಾರೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿ ಧಿಗಳು ಈ ಶಾಲೆಯ ಕಟ್ಟಡ ನಿರ್ಮಾಣ ಮಾಡಿ ಅನುಕೂಲ ಕಲ್ಪಿಸಬೇಕು ಎನ್ನುವುದು ಮಕ್ಕಳ ಪಾಲಕರ ಒತ್ತಾಯವಾಗಿದೆ.

ಶಾಲಾ ಕಟ್ಟಡ ಕಟ್ಟಲು ಇಲ್ಲಿವರೆಗೆ ಜಾಗದ ಸಮಸ್ಯೆ ಇತ್ತು. ಇತ್ತಿಚೀಗೆ ಪುರಸಭೆಯವರು ಜಾಗವನ್ನು ಶಿಕ್ಷಣ ಇಲಾಖೆಗೆ ನೀಡಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಅನುದಾನ ಕೇಳಲಾಗಿದೆ.. ದೇವಸ್ಥಾನ ಹತ್ತಿರ ಇರುವದರಿಂದ ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಅನುದಾನ ಬಂದ ತಕ್ಷಣವೇ ಕಟ್ಟಡ ನಿರ್ಮಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡಲಾಗುವುದು. ಬಿ.ಎ. ಮೇಕನಮರಡಿ, ಕ್ಷೇತ್ರ ಶಿಕ್ಷಣಾಧಿಕಾರಿ, ಚಿಕ್ಕೋಡಿ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.