ಶಾಲೆಗಳಿಗೆ ಸಿಂಗಾರ; ಭವಿಷ್ಯವಾಗಲಿ ಬಂಗಾರ
|ತಳಿರು-ತೋರಣದ ಅಲಂಕಾರ; ಸಿಹಿಯ ಸ್ವಾಗತ |ಮೊದಲ ದಿನವೇ ಮಕ್ಕಳಿಗೆ ಸಿಗಲಿವೆ ಹೊಸ ಪುಸ್ತಕ; ಸಮವಸ್ತ್ರ
Team Udayavani, May 29, 2019, 10:18 AM IST
ಬೆಳಗಾವಿ: ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಮಕ್ಕಳ ಬ್ಯಾಗ್ಗಳ ಮಾರಾಟ ಜೋರಾಗಿ ನಡೆದಿದೆ.
ಬೆಳಗಾವಿ: ಬೇಸಿಗೆ ರಜೆ ಮುಗಿದು ಇನ್ನು ಶಾಲೆಗಳತ್ತ ಹೆಜ್ಜೆ ಹಾಕುವ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳು ಮಕ್ಕಳನ್ನು ಕೈ ಬೀಸಿ ಕರೆಯುತ್ತಿವೆ. ಶಾಲಾ ಪ್ರಾರಂಭೋತ್ಸವ ವಿನೂತನವಾಗಿ ಆಚರಿಸಲು ಶಿಕ್ಷಕರು ವಿಶೇಷವಾಗಿ ತಯಾರಿ ಮಾಡಿಕೊಂಡಿದ್ದಾರೆ.
ಮೇ 29ರಿಂದ ಆರಂಭವಾಗುವ ಶಾಲೆಗಳು ಮಕ್ಕಳನ್ನು ಕೈ ಬೀಸಿ ಕರೆಯುತ್ತಿವೆ. ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಂಡು ಆಕರ್ಷಣೀಯವಾಗಿ ಶಾಲೆಗಳನ್ನು ಅಲಂಕರಿಸಲಾಗಿದೆ. ಮಕ್ಕಳಿಗೆ ಸಂತಸದ ಅನುಭವ ನೀಡಲು ಎಲ್ಲ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ಮಕ್ಕಳಿಗೆ ಸಿಹಿ ಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಅಜ್ಜಿ, ಅಜ್ಜನ ಊರಿಗೆ ತೆರಳಿ ಭಾರದ ಹೃದಯದಿಂದ ಮನೆಗಳಿಗೆ ವಾಪಸ್ಸಾಗಿರುವ ಮಕ್ಕಳಿಗೆ ಮತ್ತೆ ಶಾಲೆಯ ಸಮಯಕ್ಕೆ ಹೊಂದಿಕೊಳ್ಳುವುದು ಪ್ರಾರಂಭದಲ್ಲಿ ಬೇಜಾರಾಗದಿರಲಿ ಎಂದು ಶಾಲೆಗಳನ್ನು ವಿನೂತನ ಹಾಗೂ ಆಕರ್ಷಕವಾಗಿ ಸಿಂಗಾರಗೊಳಿಸಲಾಗಿದೆ. ಮಕ್ಕಳು ಖುಷಿಯಿಂದ ಶಾಲೆಗಳತ್ತ ಹೆಜ್ಜೆ ಹಾಕಲು ಬೇಕಾಗುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಮೇ 29ರಂದು ಶಾಲೆಗೆ ಬರುವ ಮಕ್ಕಳಿಗೆ ಪುಸ್ತಕ, ಬಟ್ಟೆ ಹಂಚಿಕೆ ಕಾರ್ಯವೂ ನಡೆಯಲಿದೆ.
ಶಾಲಾ ಪ್ರಾರಂಭೋತ್ಸವಕ್ಕೆ ಶಾಲಾ ಆವರಣ, ಕೊಠಡಿಗಳ ಸ್ವಚ್ಛತೆ, ಶೌಚಾಲಯಗಳ ಸ್ವಚ್ಛತೆ, ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಶಾಲಾ ಆವರಣದ ಗಿಡ-ಮರಗಳಿಗೆ ನೀರುಣಿಸುವುದು, ಉದ್ಯಾನವನದಲ್ಲಿಯ ಕಸ ಕಡ್ಡಿಗಳನ್ನು ತೆಗೆಯುವುದು ಹೀಗೆ ಅನೇಕ ಸಿದ್ಧತೆಗಳು ಪೂರ್ಣಗೊಂಡಿವೆ. ಶಾಲೆ ಆರಂಭವಾಗುತ್ತಿದ್ದಂತೆ ಮಳೆಗಾಲವೂ ಶುರು ಆಗುತ್ತದೆ. ಹೀಗಾಗಿ ಹಂಚಿನ ಶಾಲೆಗಳಲ್ಲಿ ಮುಂಜಾಗ್ರತ ಕ್ರಮ ಕೈಗೊಂಡು ಸೂರುವ ಶಾಲೆಗಳ ಬಗ್ಗೆ ನಿಗಾ ವಹಿಸಲಾಗಿದೆ.
ಎಸ್ಡಿಎಂಸಿ ಹಾಗೂ ಪೋಷಕರನ್ನು ಕರೆಯಿಸಿ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲಾಗುತ್ತದೆ. ಕೆಲ ಶಾಲೆಗಳಲ್ಲಿ ಬೆಳಗ್ಗೆ ಮೆರವಣಿಗೆ ನಡೆಸಿ ಮಕ್ಕಳನ್ನು ಕರೆ ತರುವ ಕಾರ್ಯಕ್ರಮಗಳನ್ನೂ ಹಾಕಿಕೊಳ್ಳಲಾಗಿದೆ. ಚಕ್ಕಡಿ, ಟ್ರ್ಯಾಕ್ಟರ್ಗಳಲ್ಲಿ ಮೆರವಣಿಗೆ ಮಾಡಿಸಿ ಕರೆ ತಂದು ಮಕ್ಕಳಲ್ಲಿ ಉತ್ಸಾಹ ಮೂಡಿಸಲಾಗುವುದು. 29ರಂದು ಮೊದಲನೇ ದಿನ ತರಗತಿ ನಡೆಯದಿದ್ದರೂ ಶಾಲಾ ಪ್ರಾರಂಭೊತ್ಸವದ ಕಾರ್ಯಕ್ರಮದಲ್ಲಿಯೇ ಇಡೀ ದಿನ ಶಿಕ್ಷಕರು ಹಾಗೂ ಮಕ್ಕಳು ಕಳೆಯುತ್ತಾರೆ.
ಮಕ್ಕಳಿಗೆ 34 ಅಂಶಗಳ ಕಲಿಕಾ ಕ್ರಮಗಳಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಮಕ್ಕಳಿಗೆ ಮೊದಲು ಪೂರ್ವಭಾವಿಯಾಗಿ ಪರೀಕ್ಷೆ ನಡೆಸಿ ಮಕ್ಕಳಲ್ಲಿನ ಕಲಿಕಾ ನ್ಯೂನತೆಗಳನ್ನು ಗುರುತಿಸಿ ಶಿಕ್ಷಣ ನೀಡುವ ಹಂತದಲ್ಲೂ ವಿಶೇಷವಾಗಿ ಶಿಕ್ಷಕರನ್ನು ಸಜ್ಜುಗೊಳಿಸಲಾಗುತ್ತಿದೆ. ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ಆಯಾ ಶಾಲೆಗಳಲ್ಲಿ ಪೋಷಕರ ಸಭೆ ಕರೆದು ಮಕ್ಕಳ ಶೈಕ್ಷಣಿಕ ಗುಣಮಟ್ಟದ ಕುರಿತು ತಿಳಿಸುವುದು, ಪೋಷಕರ ಸಹಾಯ ಪಡೆಯುವುದು, ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರ ಪ್ರೀತಿ ಬೆಳೆಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ