ಶರಣ ಸಂಸ್ಕೃತಿ ಉತ್ಸವ; ಪತ್ರಕರ್ತರು ಸತ್ಯ ಹೇಳುವ ಕೆಲಸ ಮಾಡಲಿ

ನಮ್ಮ ಸಂಸದ ನಿಧಿಯಲ್ಲಿ ಪತ್ರಕರ್ತರಿಗೆ ಸಹಾಯ ಮಾಡಲು ನಾನು ಸದಾ ಸಿದ್ಧ

Team Udayavani, Mar 4, 2024, 6:12 PM IST

ಶರಣ ಸಂಸ್ಕೃತಿ ಉತ್ಸವ; ಪತ್ರಕರ್ತರು ಸತ್ಯ ಹೇಳುವ ಕೆಲಸ ಮಾಡಲಿ

ಉದಯವಾಣಿ ಸಮಾಚಾರ
ಗೋಕಾಕ: ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಪತ್ರಕರ್ತರು ಮಾಡುವ ಕಾರ್ಯ ನಿಜವಾಗಿಯೂ ಪ್ರಶಂಸನೀಯ. ಆದರೆ
ಅವರಿಗೆ ಸಿಗಬೇಕಾದ ಸ್ಥಾನ ಮಾನ ಸಿಗುತ್ತಿಲ್ಲ ಎಂದು ಹಿರಿಯ ಪತ್ರಕರ್ತ, ಸುವರ್ಣ ನ್ಯೂಸ್‌ ಸಂಪಾದಕ ಅಜಿತ್‌ ಹನಮಕ್ಕನವರ ಹೇಳಿದರು.

ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ 19 ನೇ ಶರಣ ಸಂಸ್ಕೃತಿ ಉತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಸಾಧ್ಯವಾದಷ್ಟು ಸತ್ಯವನ್ನು ಹೇಳುವ ಕಾರ್ಯ ಒಬ್ಬ ಪತ್ರಕರ್ತ ಮಾಡಬೇಕು. ಜನಸಾಮಾನ್ಯರ ತೊಂದರೆಗಳನ್ನು ಸರಕಾರಕ್ಕೆ ಮುಟ್ಟವ ರೀತಿಯಲ್ಲಿ ಪತ್ರಕರ್ತರು ಕಾರ್ಯಮಾಡಬೇಕು. ಹಿಂದಿನ ಕಾಲಘಟ್ಟದಲ್ಲಿ ಇದನ್ನು ಮಠಮಾನ್ಯಗಳು ಸಮರ್ಥವಾಗಿ ಮಾಡುತ್ತಿದ್ದವು. ಅಂತಹ ಕಾರ್ಯವನ್ನು ಇಂಧು ಶ್ರೀ ಶೂನ್ಯ ಸಂಪಾದನ ಮಠ ಮಾಡುತ್ತಿದೆ ಎಂದರು.

ಇಂದಿನ ಕಾಲದಲ್ಲಿ ಹವ್ಯಾಸಕ್ಕಾಗಿ ಪತ್ರಕರ್ತರಾಗುತ್ತಿದ್ದಾರೆ. ಇದು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇಂದು
ಎಲ್ಲಾ ರಂಗದಲ್ಲಿ ನಿಜವಾದವರು ಯಾರು ಎಂಬ ಪ್ರಶ್ನೆ ಕಾಡುತ್ತಿದೆ. ಪತ್ರಕರ್ತರ ವೇಷದಲ್ಲಿ ದೊಡ್ಡ  ದೊಡzವರು ಸಮಾಜಕ್ಕೆ ಮೋಸ ಮಾಡುತ್ತಿದ್ದಾರೆ.

ಪತ್ರಿಕೋದ್ಯಮ ಆತ್ಮಸಾಕ್ಷಿಗೆ ಸಂಬಂಧಿಸಿದ ವಿಷಯವಾಗಿದೆ ಎಂದರು. ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, ಸಮಾಜದಲ್ಲಿ ನಡೆಯುವ ಮೌಡ್ಯವನ್ನು ತಡೆಯುವ ನಿಟ್ಟಿನಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯವಾಗಿದೆ. ಸೋಷಿಯಲ್‌  ಮೀಡಿಯಾ ಅಬ್ಬರದಲ್ಲಿ ನಿಜವಾದ ಮೀಡಿಯಾ ಮಾಯವಾಗುತ್ತಿದೆ. ಪತ್ರಕರ್ತ ವೃತ್ತಿ ಇರುವುದು ಸಮಾಜವನ್ನು ಒಡೆಯಲು ಅಲ್ಲ, ಸಮಾಜವನ್ನು ಕಟ್ಟಲಿಕ್ಕೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳ್ಳದ ಈ ಶರಣ ಸಂಸ್ಕೃತಿ ಉತ್ಸವ ಭಿನ್ನವಾಗಿ ಕಾರ್ಯಮಾಡುತ್ತಿದೆ. ಪತ್ರಕರ್ತರ ಸಮಸ್ಯೆಗಳನ್ನು ಸಮಾಜ ಸಹ ಗೌರವಿಸಿ, ಹಕ್ಕೊತ್ತಾಯವನ್ನು ಮಾಡಬೇಕು. ನಮ್ಮ ಸಂಸದ ನಿಧಿಯಲ್ಲಿ ಪತ್ರಕರ್ತರಿಗೆ ಸಹಾಯ ಮಾಡಲು ನಾನು ಸದಾ ಸಿದ್ಧ ಎಂದು ಭರವಸೆ ನೀಡಿದರು.

ತಾಲೂಕು ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಮಾತನಾಡಿದರು. ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ
ಸ್ವಾಮಿಗಳು ನೇತೃತ್ವ ವಹಿಸಿದ್ದರು. ಬಟಕುರ್ಕಿ ಚೌಕಿ ಮಠದ ಬಸವಲಿಂಗ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಸಾಧಕ ಪತ್ರಕರ್ತರನ್ನು ಗಣ್ಯರು ಸತ್ಕರಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದಿಲೀಪ್‌ ಕುರಂದವಾಡೆ, ತಾಲೂಕು ಅಧ್ಯಕ್ಷ ಗುರುಸಿದ್ದಪ್ಪ ಪೂಜೇರಿ, ಮೂಡಲಗಿ
ತಾಲೂಕು ಅಧ್ಯಕ್ಷ ಕೃಷ್ಣ ಗಿರೇನ್ನವರ, ಬಿ.ಯು ಚನ್ನಬಸಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ಸಾದಿಕ ಹಲ್ಯಾಳ, ಶರಣ ಸಂಸ್ಕೃತಿ ಉತ್ಸವ ಅಧ್ಯಕ್ಷ ಸಂತೋಷ ಸೋನವಾಲಕರ, ಕೋಶಾಧ್ಯಕ್ಷ ಬಸವರಾಜ ಮುರಗೋಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.