ಎಲ್ಲೆಡೆ ಶಿವಭಜನೆ ಶಿವಾರಾಧನೆ
Team Udayavani, Feb 22, 2020, 12:15 PM IST
ರಾಮದುರ್ಗ: ರಾಮದುರ್ಗ ಪಟ್ಟಣದ (ಮುಳ್ಳೂರ ಗುಡ್ಡದ) ಅಶೋಕ ವನದಲ್ಲಿ ನಿರ್ಮಾಣಗೊಂಡಿರುವ ರಾಜ್ಯದ ಎರಡನೇಯ ಎತ್ತರದ ಶಿವನ ಮೂರ್ತಿಗೆ ಶಿವರಾತ್ರಿಯ ದಿನವಾದ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ಶಿವರಾತ್ರಿಯ ಅಂಗವಾಗಿ ಬೆಳಗ್ಗೆಯೇ ಶಿವನಮೂರ್ತಿಯ ರಾಮೇಶ್ವರ ಮಂದಿರದಲ್ಲಿರುವ ಇಷ್ಟಲಿಂಗಕ್ಕೆ ಶಿವ ಪ್ರತಿಷ್ಠಾಪನಾ ಸೇವಾ ಸಮಿತಿಯಿಂದ ಮಾಜಿ ಶಾಸಕ ಹಾಗೂ ಸಮಿತಿ ಅಧ್ಯಕ್ಷ ಅಶೋಕ ಪಟ್ಟಣ ಅವರ ನೇತೃತ್ವದಲ್ಲಿ ವಟುಗಳು ರುದ್ರಾಭಿಷೇಕ, ಬಿಲ್ವಾರ್ಚನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಪಟ್ಟಣಕ್ಕೆ ಹೊಂದಿಕೊಂಡಿರುವ ಮುಳ್ಳೂರು ಗುಡ್ಡಕ್ಕೆ ವಾಹನಗಳಲ್ಲಿ ಹಾಗೂ ಪಾದಯಾತ್ರೆ ಮೂಲಕ ಆಗಮಿಸಿದ ಭಕ್ತರು ಸುಡು ಬಿಸಿಲಿನಲ್ಲಿಯೇ ಶಿವನ ದರ್ಶನ ಪಡೆದರು. ಶಿವರಾತ್ರಿಯ ಪೂಜೆಗೆ ಸಾವಿರಾರು ಜನ ಭಕ್ತರು ದಂಡೋಪತಂಡವಾಗಿ ಆಗಮಿಸಿ ದರ್ಶನ ಪಡೆದರು. ಎಲ್ಲ ಭಕ್ತರಿಗೂ ಬೇಯಿಸಿದ ಶೇಂಗಾ ಮತ್ತು ಸಾಬುದಾನಿ, ಬಾಳೆಹಣ್ಣು ಸೇರಿದಂತೆ ಒಣ ಹಣ್ಣುಗಳನ್ನು ವಿತರಣೆ ಮಾಡಲಾಯಿತು. ಶಿವನ ಮೂರ್ತಿ ಸುತ್ತಲೂ ಹಸಿರು ಹಾಸು ಬೆಳೆಸಲಾಗಿದೆ. ಶಿವನ ಮೂರ್ತಿ ವೀಕ್ಷಣೆಗೆ ಮೇಲ್ಭಾಗಕ್ಕೆ ಹತ್ತುವಾಗ ಆಯ ತಪ್ಪದ ರೀತಿಯಲ್ಲಿ ಕಬ್ಬಿಣದ ಸಲಾಕೆಗಳನ್ನು ಅಳವಡಿಸಲಾಗಿದೆ. ಆಕರ್ಷಕ ಬಣ್ಣದ ರಂಗೋಲಿ ರಚಿಸಲಾಗಿತ್ತು. ತಡರಾತ್ರಿಯವರೆಗೆ ಸುಗಮ ಸಂಗೀತ, ಭಜನೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ
MUST WATCH
ಹೊಸ ಸೇರ್ಪಡೆ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್
Rank: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ
Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ