ಬೆಳಗಾವಿಯಲ್ಲಿ ಶಿವಸೇನೆ ಪುಂಡಾಟ:Devendra fadnavis ಪ್ರಚಾರ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ
Team Udayavani, May 4, 2023, 1:20 PM IST
ಬೆಳಗಾವಿ: ಶಾಂತಿಯುತವಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಶಿವಸೇನೆ ಹುಳಿ ಹಿಂಡಲು ಪ್ರಯತ್ನಿಸುತ್ತಿದ್ದು, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.
ಮಹಾರಾಷ್ಟ್ರದ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಕಪ್ಪು ಬಾವುಟ ತೋರಿಸಲು ಶಿವಸೇನೆ ಮುಖಂಡ ಸಂಜಯ ರಾವತ್ ನಿನ್ನೆ ಬೆಳಗಾವಿಯಲ್ಲಿ ಕರೆ ನೀಡಿದ್ದರು. ಇಂದು ಬೆಳಗಾವಿ ಟಿಳಕ್ ಚೌಕ್ ಬಳಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರವಿ ಪಾಟೀಲ್ ಪರ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಪ್ರಚಾರಕ್ಕೆ ಬಂದಾಗ ಅವರಿಗೆ ಎಂಇಎಸ್ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಲು ಯತ್ನಿಸಿದರು.
ಎಂಇಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸ್ ಬಿಗಿ ಭದ್ರತೆಯಲ್ಲಿ ಬಿಜೆಪಿ ಸಮಾವೇಶ ನಡೆದಿದೆ.