ಸ್ಲಂ-ಗುಡಿಸಲು ಮುಕ್ತ ರಾಜ್ಯದ ಗುರಿ: ಅಭಯ

ವಾಜಪೇಯಿ ನಗರ ವಸತಿ ಆವಾಸ್‌ ಯೋಜನೆಯಡಿ 250 ಮನೆ

Team Udayavani, Jun 28, 2022, 5:58 PM IST

19

ಬೆಳಗಾವಿ: ಸ್ಲಂ ಮತ್ತು ಗುಡಿಸಲು ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ನಮ್ಮ ಸರ್ಕಾರದ ಮೂಲ ಗುರಿಯಾಗಿದೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು.

ನಗರದ ಉದ್ಯಮಬಾಗದಲ್ಲಿ ಸೋಮವಾರ ವಾಜಪೇಯಿ ನಗರ ವಸತಿ ಆವಾಸ್‌ ಯೋಜನೆಯಡಿ ಮನೆಗಳ ನಿರ್ಮಾಣದ ಅಡಿಗಲ್ಲು ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೊಳಗೇರಿ ಮತ್ತು ಗುಡಿಸಲುಗಳಲ್ಲಿ ವಾಸಿಸುವ ಬಡಜನರ ಜೀವನ ಮತ್ತು ಆರೋಗ್ಯ ಸ್ಥಿತಿ ಹದಗೆಟ್ಟದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಪ್ರಧಾನಮಂತ್ರಿ ವಾಜಪೇಯಿ ಆವಾಸ್‌ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.

ಕೊರೊನಾ ಸಮಯದಲ್ಲಿ ಕೊಳಚೆ ಪ್ರದೇಶದ ಜನರ ಪರಿಸ್ಥಿತಿಯನ್ನು ನೋಡಲಾರದೆ ಅವರಿಗೆ ಗುಣಮಟ್ಟದ ಬದುಕನ್ನು ಕಟ್ಟಿಕೊಡುವ ಉದ್ದೇಶದಿಂದ ಮೂರು ಮಜಲುಗಳಲ್ಲಿ ಒಟ್ಟು 250 ಮನೆಗಳನ್ನು ಆವಾಸ್‌ ಯೋಜನೆಯಡಿ ನಿರ್ಮಿಸಲಾಗುತ್ತಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ವಸತಿ ಯೋಜನೆ ಕಾರ್ಯ ಕಾರ್ಯರೂಪಕ್ಕೆ ಬಂದಿದೆ. ರಾಜ್ಯ ಸರಕಾರದ ವಸತಿ ಸಚಿವರಾದ ವಿ.ಸೋಮಣ್ಣ ಅವರು ನಾನು ಮಾಡಿದ ಮನವಿಗೆ ಸ್ಪಂದಿಸಿ ಆವಾಸ್‌ ಯೋಜನೆಗೆ ಸಹಕರಿಸಿದ್ದಾರೆ ಎಂದು ಹೇಳಿದರು.

ಉದ್ಯಮಬಾಗದಲ್ಲಿ ನಿರ್ಮಾಣವಾಗುತ್ತಿರುವ ಮನೆಗಳು ಪಿ.ಕೆ ಕ್ವಾರ್ಟರ್ಸ್‌ ನಲ್ಲಿ ಇರುವ ಮನೆಗಳ ಸ್ವರೂಪವನ್ನು ಹೊಂದಿರುತ್ತವೆ. ಅಪಾರ್ಟಮೆಟ್‌ ದಲ್ಲಿ ನಾವೆಲ್ಲ ಒಂದೇ ಕುಟುಂಬದ ಸದಸ್ಯರು ಎಂದು ಬಾಳಿದರೆ ಸಾಕು, ಆವಾಸ್‌ ಯೋಜನೆ ಸಾರ್ಥಕವಾಗುತ್ತದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ಆವಾಸ್‌ ಯೋಜನೆಯಲ್ಲಿ ಯಾವುದೇ ಅದಿಕಾರಿ ಹಾಗೂ ಫಲಾನುಭವಿಯು ಆಮಿಷಕ್ಕೆ ಒಳಗಾಗಬಾರದು. ಆಮಿಷವನ್ನು ಒಡ್ಡಬಾರದು. ಅಂಥವರು ಕಂಡಬಂದರೆ ಅವರ ವಿರುದ್ದ ನಾನೇ ದೂರು ನೀಡುತ್ತೇನೆ ಎಂದರು.

ಆವಾಸ್‌ ಯೋಜನೆಯಲ್ಲಿ ಸ್ವಂತ ಮನೆಗಳನ್ನು ಹೊಂದುವುದು ಬಡಜನರ ಕನಸು. ಈ ಕನಸನ್ನು ಪ್ರಾಮಾಣಿಕತೆಯಿಂದ ನನಸು ಮಾಡುವುದು ಜನ ಪ್ರತಿನಿಧಿಗಳ ಮತ್ತು ಸಾರ್ವಜನಿಕ ಅಧಿಕಾರಿಗಳ ಕರ್ತವ್ಯ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ನಗರದಲ್ಲಿ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ಕಾಮಗಾರಿಗಳು ಮುಕ್ತಾಯದ ಹಂತವನ್ನು ತಲುಪಿದ್ದು ಸಾರ್ವಜನಿಕರು ಇನ್ನೂ ಸ್ವಲ್ಪ ದಿನ ಸಹಕರಿಸಬೇಕು. ಉದ್ಯಮಬಾಗದಲ್ಲಿ ಎರಡು ಮೂರು ವರ್ಷಗಳಿಂದ ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಮುಂದಿನ ವಾರದಲ್ಲಿ ಎಲ್ಲ ಕಾಮಗಾರಿಗಳು ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಗಾಳಿ ಪ್ರಾಸ್ತಾವಿಕ ಭಾಷಣ ಮಾಡಿದರು. ಪಾಲಿಕೆಯ ಉಪ ಆಯುಕ್ತೆ(ಆಡಳಿತ) ಭಾಗ್ಯಶ್ರೀ ಹುಗ್ಗಿ ಸ್ವಾಗತಿಸಿದರು. ದಕ್ಷಿಣ ಕ್ಷೇತ್ರದ ಎಲ್ಲ ನಗರಸೇವಕರು, ಆವಾಸ್‌ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

belagavBelagavi: ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ಎರಡು ಲಕ್ಷ ರೂ ವಶಕ್ಕೆ

Belagavi: ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ಎರಡು ಲಕ್ಷ ರೂ ವಶಕ್ಕೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.