‘ಅಮ್ಮಾ…ನನಗೆ ನೀನು ಬೇಕಮ್ಮಾ!’; ಈ ಕಂದನ ಕಣ್ಣೀರು ಕಂಡಾದರೂ ನಾವೆಲ್ಲಾ ಮನೆಯಲ್ಲೇ ಇರೋಣ

ಈ ಲಾಕ್ ಡೌನ್ ನಮ್ಮದೇ ಒಳಿತಿಗಾಗಿ ಮತ್ತು ನಮ್ಮೆಲ್ಲರ ಆರೋಗ್ಯದ ಸುರಕ್ಷತೆಗಾಗಿ

Team Udayavani, Apr 8, 2020, 6:52 PM IST

‘ಅಮ್ಮಾ…ನನಗೆ ನೀನು ಬೆಕಮ್ಮಾ!’; ಈ ಕಂದನ ಕಣ್ಣೀರು ಕಂಡಾದರೂ ನಾವೆಲ್ಲಾ ಮನೆಯಲ್ಲೇ ಇರೋಣ

ಬೆಳಗಾವಿ: ಈ ಕೋವಿಡ್ 19 ಮಹಾಮಾರಿ ವಿಶ್ವಾದ್ಯಂತ ಮನುಷ್ಯರನ್ನು ಮನುಷ್ಯರಿಂದ ದೂರಗೊಳಿಸುವ ಕೆಲಸ ಮಾಡುತ್ತಿದೆ. ಸೋಂಕಿಗೆ ಒಳಗಾದವರು ಅಥವಾ ಶಂಕಿತ ವೈರಸ್ ಸೋಂಕಿತರು ಹಲವು ದಿನಗಳ ಕಾಲ ತಮ್ಮವರನ್ನೆಲ್ಲಾ ಬಿಟ್ಟು ಪ್ರತ್ಯೇಕವಾಗಿ ಇರಬೇಕಾದ ಸ್ಥಿತಿಯನ್ನು ಈ ಮಾರಕ ವೈರಸ್ ನಿರ್ಮಾಣ ಮಾಡಿದೆ.

ಇದೇ ರೀತಿಯಲ್ಲಿ ಕೋವಿಡ್ ವೈರಸ್ ಸೋಂಕಿತರ ಆರೈಕೆ ಮಾಡುವ ಆರೋಗ್ಯ ಸಿಬ್ಬಂದಿಗಳೂ ಸಹ ತಮ್ಮ ಮನೆಗೆ ಹೋಗಲಾಗದೆ ಹೋದರೂ ಮನೆ ಸದಸ್ಯರ ಜೊತೆ ಬೆರೆಯಲಾಗದ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಇಂತಹ ಅದೆಷ್ಟೋ ವಿಡಿಯೋಗಳನ್ನು ನಾವು ಪ್ರತೀ ನಿತ್ಯ ನೋಡುತ್ತಲೇ ಇರುತ್ತೇವೆ ಮತ್ತು ಅವೆಲ್ಲಾ ವಿಶ್ವದ ನಾನಾ ದೇಶಗಳಲ್ಲಿ ನಡೆದಿರುವ ಘಟನೆಗಳಾಗಿರಬಹುದು. ಆದರೆ ಇದೀಗ ನಮ್ಮ ರಾಜ್ಯದಲ್ಲೇ ಇಂತಹದ್ದೊಂದು ಮನಮಿಡಿಯುವ ಘಟನೆ ನಡೆದಿರುವುದು ವರದಿಯಾಗಿದೆ.

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಿರ್ಮಿಸಲಾಗಿರುವ ಕೋವಿಡ್ ಸ್ಪೆಷಲ್ ವಾರ್ಡ್ ನಲ್ಲಿ ಆರೋಗ್ಯ ಶುಶ್ರೂಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಗಂಧ ಅವರು ಕಳೆದ 15 ದಿನಗಳಿಂದ ಮನೆಗೇ ಹೋಗದೆ ಆಸ್ಪತ್ರೆಯಲ್ಲೇ ಇದ್ದಾರೆ. ಆದರೆ, ಅಮ್ಮನ ನೆನಪು ತಡೆಯಲಾರದೇ ಅವರ ಪುಟ್ಟ ಮಗಳು ಐಶ್ವರ್ಯಾ ನಿನ್ನೆ ಅಮ್ಮನನ್ನು ಹುಡುಕಿಕೊಂಡು ಅವರಿದ್ದಲ್ಲಿಗೇಬಂದಿದ್ದಳು.

ಬಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸಂಬಂಧಿತ ವಿಶೇಷ ಕರ್ತವ್ಯದಲ್ಲಿರುವ ಆರೋಗ್ಯ ಸಿಬ್ಬಂದಿಗಳಿಗೆ ಹೊಟೇಲ್ ನಲ್ಲಿ ಕ್ವಾರೆಂಟೈನ್ ಗೆ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಗೆ ಅಮ್ಮನನ್ನು ನೋಡಲು ಬಂದ ಐಶ್ವರ್ಯಾ, ತಾಯಿಯನ್ನು ಕಂಡೊಡನೆ ಅವರ ಬಳಿ ಹೋಗಲು ಚಡಪಡಿಸುತ್ತಿದ್ದ ದೃಶ್ಯ ಮನಕಲುಕುವಂತಿತ್ತು.

ಹೊಟೇಲ್ ಆವರಣದ ಹೊರಗೆ ಮಗಳು ಬೈಕ್ ನಲ್ಲೇ ಕುಳಿತು ದೂರದಲ್ಲಿ ನಿಂತಿದ್ದ ಅಮ್ಮನ್ನನು ಕಂಡು ‘ಮಮ್ಮೀ ಬಾ..’ ಎಂದು ಅಳುತ್ತಾ ಕೈ ಚಾಚುತ್ತಿದ್ದ ದೃಶ್ಯ ಎಂತಹ ಕಲ್ಲುಹೃದಯದವರ ಮನಸ್ಸನ್ನೂ ಕರಗಿಸುಬಂತಿತ್ತು. ಇಷ್ಟು ಮಾತ್ರವಲ್ಲದೇ ಈ ಕೋವಿಡ್ ಮಹಾಮಾರಿಯ ನಿಷ್ಕಾರುಣ್ಯತೆಯ ಚಿತ್ರಣವವನ್ನು ನಮಗೆ ಕಟ್ಟಿಕೊಡುವಂತಿತ್ತು.

ನರ್ಸ್ ಸುಗಂಧ ಅವರಂತೆ ಲಕ್ಷಾಂತರ ವೈದ್ಯಕೀಯ ಸಿಬ್ಬಂದಿಗಳು ತಮ್ಮ ಮನೆ-ಸಂಸಾರವನ್ನು ತಾತ್ಕಾಲಿಕವಾಗಿ ತ್ಯಜಿಸಿ ನಮ್ಮ ಒಳಿತಿಗಾಗಿ ಕೋವಿಡ್ ಮಹಾಮಾರಿಯ ವಿರುದ್ಧ ಹೋರಾಡುತ್ತಿದ್ದಾರೆ – ಇವರೆಲ್ಲರ ಮೇಲಿನ ಗೌರವ, ಅಭಿಮಾನಕ್ಕಾದರೂ ನಾವೆಲ್ಲರೂ ಪ್ಲೀಸ್ ಮನೆಯಲ್ಲೇ ಇರೋಣ.
– ಈ ಲಾಕ್ ಡೌನ್ ನಮ್ಮದೇ ಒಳಿತಿಗಾಗಿ ಮತ್ತು ಆರೋಗ್ಯದ ಸುರಕ್ಷತೆಗಾಗಿ.

ಅಮ್ಮ ಮಗಳ ಈ ಭಾವನಾತ್ಮಕ ಭೇಟಿಯ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಇದನ್ನು ಕಂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಹ ಭಾವುಕರಾದರು ಮತ್ತು ನರ್ಸ್ ಸುಂಗಂಧ ಅವರಿಗೆ ಕರೆ ಮಾಡಿ ಮಾತನಾಡಿದ ಮುಖ್ಯಮಂತ್ರಿಯವರು ಅವರ ಸೇವೆಯನ್ನು ಸ್ಮರಿಸಿಕೊಂಡು ಮಾನಸಿಕ ಸ್ಥೈರ್ಯವನ್ನು ತುಂಬಿದ್ದು ವಿಶೇಷವಾಗಿತ್ತು.


ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.