ಶಿಕ್ಷಣದಲ್ಲಿ ಮರೆಯಾದ ಸಾಮಾಜಿಕ ಕಾಳಜಿ: ಭಾರದ್ವಾಜ್
Team Udayavani, Apr 26, 2019, 3:36 PM IST
ಬೆಳಗಾವಿ: ಇಂದು ಶಿಕ್ಷಣ ಕೇವಲ ಉದ್ಯೋಗ ದೊರಕಿಸಿಕೊಡುವ ಒಂದು ಸಾಧನವಾಗಿದ್ದು ಸಾಮಾಜಿಕ ಕಳಕಳಿ ಮರೆಯಾಗಿದೆ ಎಂದು ಪದ್ಮಶ್ರೀ ಪುರಸ್ಕೃತ ಖ್ಯಾತ ವಿಜ್ಞಾನಿ ಸೇತುಬಂಧು ಡಾ| ಗಿರೀಶ ಭಾರದ್ವಾಜ್ ವಿಷಾದಿಸಿದರು.
ಇಲ್ಲಿಯ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗುರುವಾರ ಆರಂಭವಾದ ಎರಡು ದಿನಗಳ ರಾಷ್ಟ್ರೀಯ ತಾಂತ್ರಿಕ ಉತ್ಸವ-ಸಂವೀಕ್ಷಣಾ-2019 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಾಂತ್ರಿಕ ಜ್ಞಾನ ಪಡೆದ ಎಂಜಿನಿಯರುಗಳು ದೇಶದ ಸಮಸ್ಯೆ ಬಗೆಹರಿಸುವಲ್ಲಿ ಮಹತ್ವದ ಪಾತ್ರವಹಿಸಬೇಕಾಗಿದೆ. ತಮ್ಮ ಉದಾಹರಣೆಯನ್ನೇ ನೀಡಿದ ಅವರು, ತಾವು ಮೂಲ ಮೆಕ್ಯಾನಿಕಲ್ ಎಂಜಿನಿಯರಿಂಗ್ಓದಿದ್ದು ಈಗ ಖ್ಯಾತ ಸೇತುವೆ ಎಂಜನೀಯರ್ ಎಂದು ಗುರುತಿಸಲ್ಪಡುತ್ತಿರುವುದು ಕೇವಲ ಆಸಕ್ತಿ ಮತ್ತು ತಮ್ಮ ಸುತ್ತಮುತ್ತಲಿನ ಪರಿಸರ ಕಾಳಜಿಯಿಂದಾಗಿ ಮಾತ್ರ ಎಂದರು.
ಇದೇ ರೀತಿ ಪ್ರತಿ ಎಂಜಿನಿಯರ್ ಮೊದಲು ತಮ್ಮ ಸುತ್ತಮುತ್ತಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರೆ ಇಡೀ ಮನುಕುಲದ ಸಮಸ್ಯೆಗಳನ್ನು ಬಗೆಹರಿಸಬಹುದು. ಶಿಕ್ಷಣದ ಜೊತೆಗೆ ಸದ್ವಿಚಾರ, ವಿನಯಶೀಲತೆ, ಪರೋಪಕಾರಿ ಮನೋಭಾವನೆ ಹೊಂದುವುದು ಇಂದಿನ ಶಿಕ್ಷಣಾರ್ಥಿಗಳಿಗೆ ಅವಶ್ಯವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ| ಸಿದ್ಧರಾಮಪ್ಪ ಇಟ್ಟಿ ಮಾತನಾಡಿ, ಇಂದು ಎಲ್ಲ ಕಾಲೇಜುಗಳಲ್ಲಿ ತಾಂತ್ರಿಕ ಸಮಾವೇಶಗಳು ಜರುಗುತ್ತಿದ್ದು ಅವುಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವಗುಣ, ತಾಂತ್ರಿಕತೆ ಬಗೆಗೆ ವಿಸ್ತಾರವಾದ ಜ್ಞಾನ, ಹೊಸಹೊಸ ವಿಷಯಗಳ ಮಂಡನೆ ಇತ್ಯಾದಿ ವಿಷಯಗಳಲ್ಲಿ ವಿದ್ಯಾರ್ಥಿಗಳು ಪರಿಣಿತಿ ಹೊಂದಬಹುದಾಗಿದೆ ಎಂದು ಹೇಳಿದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಜಿ. ಸಂಬರಗಿಮಠ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ಡಾ| ಯು.ಸಿ.ಕಪಾಳೆ ಸ್ವಾಗತಿಸಿದರು, ಪರೀಣಿತಾ ಹಾಗೂ ಸೇವಿಯೋ ಲೋಬೋ ಕಾರ್ಯಕ್ರಮ ನಿರ್ವಹಿಸಿದರು. ಪ್ರೊ. ಶರಣಬಸಪ್ಪ ಜಂಪಾ ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಕುಮಾರ ಸತೀಶ ತುಳಜಣ್ಣವರ ಹಾಗೂ ಕುಮಾರ ಮಂಜುನಾಥ ಅಲ್ಲಯ್ಯನವರಮಠ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!