ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಿ

•ಶಿಥಿತಗೊಂಡ ಶಾಲಾ ಕಟ್ಟಡ ದುರಸ್ತಿಗೊಳಿಸಿ•ರೈತರಿಗೆ ನೇರವಾಗಿ ಬೀಜ ವಿತರಿಸುವಂತೆ ಆಗ್ರಹ

Team Udayavani, Jun 20, 2019, 10:04 AM IST

bg-tdy-1..

ಹುಕ್ಕೇರಿ: ತಾಲೂಕಾ ಪಂಚಾಯತ ಸಭಾಭವನದಲ್ಲಿ ಸಾಮಾನ್ಯ ಸಭೆ ನಡೆಯಿತು.

ಹುಕ್ಕೇರಿ: ತಾಲೂಕಿನ ಮದಿಹಳ್ಳಿ ಹಾಗೂ ಶಿರಗಾಂವ ಗ್ರಾಮದಲ್ಲಿ ನೀರು ಸಮಸ್ಯೆ ಹೋಗಲಾಡಿಸಲು ಬೋರೆವೆಲ್ ಕೊರೆಸುವಂತೆ ಮಾಹಿತಿ ತಿಳಿಸಿದರೂ ಇನ್ನೂವರಿಗೆ ಕ್ರಮ ಕೈಗೊಂಡಿಲ್ಲ ಎಂದು ತಾಪಂ ಸದಸ್ಯ ಆನಂದ ನಾಡಗೌಡ ಆರೋಪಿಸಿದರು.

ತಾಲೂಕಾ ಪಂಚಾಯತ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿ, ಕೃಷಿ ಇಲಾಖೆಯಿಂದ ಬೀಜಗಳನ್ನು ವಿತರಿಸಲು ರೈತರಿಂದ ಹಲವಾರು ದಾಖಲಾತಿ ಪಡೆಯುತ್ತಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಕಾರಣ ರೈತರಿಗೆ ನೇರವಾಗಿ ಬೀಜ ವಿತರಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಸಹಾಯಕ ಕೃಷಿ ನಿರ್ದೇಶಕ ಎಂ.ಎಸ್‌. ಪಟಗುಂದಿ ಮಾತನಾಡಿ, ಕಳೆದ ವರ್ಷದಲ್ಲಿ ರೈತರಿಗೆ ಬೇಡಿದಷ್ಟು ಬೀಜಗಳನ್ನು ವಿತರಿಸಿದ ಪರಿಣಾಮ ಕೆಲ ರೈತರು ಮಹಾರಾಷ್ಟ್ರದ ತಮ್ಮ ಸಂಬಂಧಿಕರಿಗೆ ನೀಡಿದ್ದಾರೆ. ಈ ವರ್ಷ ಸರ್ಕಾರದ ನಿಯಮದಂತೆ ದಾಖಲಾತಿಗಳೊಂದಿಗೆ ಬೀಜ ವಿತರಿಸಲು ತಿರ್ಮಾಣಿಸಲಾಗಿದೆ ಎಂದು ಸದಸ್ಯರಿಗೆ ತಿಳಿಸಿದರು.

ಶಾಲಾ ಕಾಲೇಜಗಳು ಪ್ರಾರಂಭವಾಗಿದ್ದು, ಶಿಥಲಗೊಂಡಿರುವ ಶಾಲಾ ಕಟ್ಟಡಗಳಲ್ಲಿ ಮಕ್ಕಳಿಗೆ ಅವಕಾಶ ನೀಡದೇ. ಅಂತಹ‌ ಶಾಲೆಗಳನ್ನು ಗುರುತಿಸಿ ಹೊಸ ಕಟ್ಟಡ ಹಾಗೂ ಖಾಲಿ ಇರುವ ಶಿಕ್ಷರನ್ನು ನೇಮಕ ಮಾಡಿಕೊಳಬೇಕೆಂದು ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಅವರಿಗೆ ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಬಿಇಒ, ಶೈಕ್ಷಣಿಕ ವರ್ಷದಲ್ಲಿ 4534 ಮಕ್ಕಳು ಹೊಸದಾಗಿ ದಾಖಲಾತಿಯಾಗಿವೆ. ತಾಲೂಕಿನಲ್ಲಿ 331 ಶಾಲಾ ಕಟ್ಟಡಗಳು ಶಿಥಲಾವಸ್ಥೆಯಲ್ಲಿದ್ದು, ಸರಕಾರದಿಂದ ಅನುದಾನ ಬಂದ ನಂತರ ಹಂತ ಹಂತವಾಗಿ ದುರಸ್ತಿ ಹಾಗೂ ಹೊಸ ಕಟ್ಟಡ ನಿರ್ಮಿಸಲಾಗುವುದು ಎಂದರು.

ನ್ಯಾಯ ಬೆಲೆ ಅಂಗಡಿಗಳಲ್ಲಿ ಒತ್ತಾಯ ಪೂರ್ವಕವಾಗಿ ಚಹಾ ಪುಡಿ, ಸಾಬೂನು, ಕಡ್ಡಿಪೆಟ್ಟಿಗೆ ಅಡುಗೆ ಎಣ್ಣಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಪಡೆದುಕೊಂಡರೇ ಮಾತ್ರ ಪಡಿತರ ಧಾನ್ಯ ನೀಡುವುದಾಗಿ ಹೇಳುತ್ತಿದ್ದಾರೆ. ಇದನ್ನು ತಡೆಯಬೇಕೆಂದು ಸದಸ್ಯ ಶೋಭಾ ಜರಳೆ ಆಹಾರ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಗ್ರೇಡ್‌ ತಹಶೀಲ್ದಾರ ಕಿರಣ ಬೆಳವಿ ಮಾತನಾಡಿ, ಯಾವುದೇ ಪಡಿತರ ಅಂಗಡಿಗಳಲ್ಲಿ ಒತ್ತಾಯವಾಗಿ ದಿನದಿಸಿ ವಸ್ತುಗಳನ್ನು ನೀಡದಂತೆ ಈಗಾಗಲೇ ನ್ಯಾಯ ಅಂಗಡಿಕಾರರಿಗೆ ತಿಳಿಸಲಾಗಿದೆ ಎಂದರು.

ಈ ವೇಳೆ ಸದಸ್ಯರಾದ ಲಕ್ಷ್ಮೀ ಪಂಚನ್ನವರ, ಮೀನಾಕ್ಷಿ ಮಾನಗಾಂವಿ, ಸುರೇಖಾ ರಾಚನ್ನವರ, ಬಸವರಾಜ ನಾಯಿಕ, ರಾಜು ಕಲ್ಲಟ್ಟಿ, ಸುರೇಶ ಬೆಣ್ಣಿ, ಬಾಳಾಸಾಹೇಬ ನಾಯಿಕ ಮೊದಲಾದ ತಾಪಂ ಸದಸ್ಯರು ಸಮಸ್ಯೆಗಳ ಕುರಿತು ಮಾತನಾಡಿದರು.

ತಾಪಂ ಅಧ್ಯಕ್ಷ ದಸ್ತಗೀರ ಬಸ್ಸಾಪೂರೆ ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷ ಸುನೀತಾ ಬಿಸಿರೊಟ್ಟಿ, ಇ.ಒ ಮಹಾದೇವ ಬಿರಾದಾರ ಪಾಟೀಲ, ಗ್ರೇಡ್‌ 2 ತಹಶೀಲ್ದಾರ್‌ ಕಿರಣ ಬೆಳವಿ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

ಎಂ.ಬಿ. ನಾಯಿಕ ಸ್ವಾಗತಿದರು. ವ್ಯವಸ್ಥಾಪಕ ಆರ್‌.ಎ. ಚಟ್ನಿ ವಂದಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.