ಜನರ ಸಮಸ್ಯೆ ಪರಿಹರಿಸಿ

 ಕಾಟಾಚಾರವಾಗದಿರಲಿ ಕುಂದುಕೊರತೆ ಸಭೆಗಳು

Team Udayavani, Mar 31, 2022, 2:54 PM IST

12

ಹುಕ್ಕೇರಿ: ಗ್ರಾಮಗಳ ಕುಂದು ಕೊರತೆ ಸಭೆಯನ್ನು ಕಾಟಾಚಾರಕ್ಕೆ ಮಾಡದೇ ಸಾರ್ವಜನಿಕರ ಸಮಸ್ಯೆಗಳನ್ನು ತಿಳಿದು, ಪರಿಹರಿಸಲು ಅಧಿಕಾರಿಗಳು ಕಾರ್ಯನಿರತರಾಗಬೇಕೆಂದು ತಾಲೂಕಿನ ಇಂಗಳಿ , ಹೂಸೂರ, ಸುಲ್ತಾನಪೂರ ಗ್ರಾಮಸ್ಥರು ಆಗ್ರಹಿಸಿದರು.

ತಾಲೂಕಿನ ಹೂಸೂರ ಗ್ರಾಮದಲ್ಲಿ ಜರುಗಿದ ಕುಂದು ಕೊರತೆ ಸಭೆಯಲ್ಲಿ ಗ್ರಾಮಸ್ಥರು ಮಾತನಾಡಿ, ಕಳೆದೆರಡು ವರ್ಷಗಳಿಂದ ನೆರೆಹಾವಳಿಯಿಂದ ಮನೆ, ಜಾನುವಾರು ಜಲಾವೃತಗೊಂಡು ಲಕ್ಷಾಂತರ ರೂ. ಹಾನಿಯಾಗಿದೆ. ಜನ ಕಷ್ಟ ಅನುಭವಿಸುತ್ತಿದ್ದರೂ ಕೂಡ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ವರ್ಷ ಮಳೆಗಾಲ ಪ್ರಾರಂಭದ ಮುಂಚೆ ನಮಗೆ ಶಾಶ್ವತವಾಗಿ ಮನೆ ಕಟ್ಟಿಕೊಳ್ಳಲು ಸ್ಥಳಾವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದರು.

ಕಳೆದ ಎರಡು ವರ್ಷದ ಹಿಂದೆ ಸುಲ್ತಾನಪೂರ ಹಾಗೂ ಇಂಗಳಿ ನಡುವೆ ಹಿರಣ್ಯಕೇಶಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರೀಜ್‌ ಕಂ ಬಾಂದಾರದಿಂದಾಗಿ ಇಂಗಳಿ ಹಾಗೂ ಹೊಸೂರ ಗ್ರಾಮದಲ್ಲಿ ನೀರು ನುಗ್ಗುತ್ತಿದೆ. ಅದನ್ನು ತೆರವುಗೊಳಿಸಿ ದೊಡ್ಡದಾಗಿ ಬ್ರಿಜ್‌ ನಿರ್ಮಿಸಿ ಗ್ರಾಮದಲ್ಲಿ ನೀರು ನುಗ್ಗದಂತೆ ಮಾಡಬೇಕು. ಹೊಸೂರದಿಂದ ಹಿಡಕಲ್‌ ಡ್ಯಾಂ ಗೆ ಹೋಗುವ ರಸ್ತೆ ಹೆದಗೆಟ್ಟು ಹಲವಾರು ವರ್ಷಗಳು ಕಳೆದಿವೆ ಈ ರಸ್ತೆಯನ್ನು ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರೂ ಕೂಡ ನಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳುತ್ತಾರೆ.

ಈ ರಸ್ತೆ ಯಾರ ವ್ಯಾಪ್ತಿಗೆ ಒಳಪಡುತ್ತದೆ ಎಂಬುದೇ ತಿಳಿಯದಂತಾಗಿದೆ. ತಹಶೀಲ್ದಾರ್‌ ಈ ಕುರಿತು ವಿಚಾರಿಸಿ, ರಸ್ತೆ ಮಾಡಬೇಕೆಂದು ಹೇಳಿದರು. ತಹಶೀಲ್ದಾರ ಡಿ.ಎಚ್‌ ಹೂಗಾರ ಸಾರ್ವಜನಿಕರ ಸಮಸ್ಯೆ ಅರಿತು, ಕೆಲವಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಮನೆಗೆ ಶಾಶ್ವತ ಸ್ಥಳ ಹಾಗೂ ಬ್ರಿಜ್‌ ನಿರ್ಮಾಣ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಪರಿಹರಿಸಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಲಗಮಣ್ಣಾ ಮಾಲಾಡಿ, ಉಪಾಧ್ಯಕ್ಷ ತನುಶ್ರೀ ನಾಯಿಕ, ಜಿ.ಪಂ ಮಾಜಿ ಸದಸ್ಯ ಭೀಮಣ್ಣಾ ರಾಮಗೋನಟ್ಟಿ, ಪಿಡಿಒ ಎಮ್‌ ಗುಡಸಿ, ಬಸವರಾಜ ಕಟ್ಟಿ ಮತ್ತು ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.