ಉತ್ತಮ ಆರೋಗ್ಯಕ್ಕೆ ಕ್ರೀಡೆ ಅಗತ್ಯ
Team Udayavani, Nov 30, 2019, 5:31 PM IST
ಬೈಲಹೊಂಗಲ: ದೈಹಿಕ ಶಿಕ್ಷಣ ಎಲ್ಲರಿಗೂ ಅವಶ್ಯವಾಗಿದ್ದು, ಕ್ರೀಡೆಯಿಂದ ಉತ್ತಮ ಆರೋಗ್ಯ ಹಾಗೂ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಪ್ರತಿಯೊಬ್ಬರು ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಆರೋಗ್ಯ ಹೊಂದಬೇಕು ಎಂದು ಶಿಕ್ಷಣ ಇಲಾಖೆ ದೈಹಿಕ ಶಿಕ್ಷಣ ಪರಿವಿಕ್ಷಕ ಆರ್.ಬಿ. ಗೋಕಾಕ ಹೇಳಿದರು.
ಪಟ್ಟಣದ ಬೈಲವಾಡ ರಸ್ತೆಯಲ್ಲಿರುವ ಖಾಸ್ಗತೇಶ್ವರ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಮಾನವನ ಸರ್ವಾಂಗೀಣ ಬೆಳವಣಿಗೆ ಕ್ರೀಡೆ ಅವಶ್ಯವಾಗಿದ್ದು, ಕ್ರೀಡೆಯಿಂದ ಸದೃಢ ದೇಹ, ಸದೃಢ ಮನಸ್ಸು ಹಾಗೂ ಶಿಸ್ತು ನೀಡುತ್ತದೆ . ಎಲ್ಲರೂ ಕ್ರೀಡಾಮನೋಭಾವನೆ ಹೊಂದಿ, ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಕ್ರೀಡಾಪಟುಗಳಾಗಬೇಕು ಎಂದರು.
ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅದ್ಯಕ್ಷ ಎಸ್.ಎಂ. ಕರೀಕಟ್ಟಿ ಮಾತನಾಡಿ, ಉತ್ತಮ ಕ್ರೀಡಾ ಪಟುಗಳಿಗೆ ಜಿಲ್ಲಾ ಸಂಘದಿಂದ ಪ್ರೋತ್ಸಾಹ ನೀಡಿ ಅವರನ್ನು ರಾಷ್ಟ್ರಮಟ್ಟದ ಕ್ರೀಡಾ ಪಟುಗಳನ್ನಾಗಿ ಮಾಡಲುಸಂಪೂರ್ಣ ಸಹಾಯ ಸಹಕಾರ ನೀಡುತ್ತವೆ. ಆದ್ದರಿಂದ ಎಲ್ಲರೂ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಕಾಶೀನಾಥ ಬಿರಾದಾರ ಮಾತನಾಡಿ, ಜೀವನದಲ್ಲಿ ಸಾಧನೆ ಮಾಡಬೇಕಾದರೆ ಛಲ ಹಾಗೂ ಗುರು ಅವಶ್ಯವಾಗಿದ್ದು, ಕ್ರೀಡೆಯಿಂದ ಸಹಕಾರ ಮನೋಭಾವನೆ ಬಂದು ಸಮಾಜದಲ್ಲಿ ಉತ್ತಮವಾಗಿ ಬಾಳಬೇಕಾದರೆ ಕ್ರೀಡೆ ಅವಶ್ಯವಾಗಿದೆ ಎಂದರು. ಈ ವೇಳೆ ಉಪಾಧ್ಯಕ್ಷ ಯೋಗೀಶ ಬಿರಾದಾರ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಮಮತಾ ಹಿರೇಮಠ, ಮಹಾಂತೇಶ ರೇಶ್ಮಿ, ಬಿ.ಎಸ್.ರಾಗಿ, ಶಿಕ್ಷಕರಾದ ವಿ.ಎಸ್.ಕುದರಿ, ರಮೇಶ ರೋಟ್ಟಿ, ದೀಪಕ ಪಾಟೀಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ