ಶ್ರೀ ಪಂಚಲಿಂಗೇಶ್ವರಮಹಾರಥೋತ್ಸವ
Team Udayavani, Feb 24, 2020, 1:02 PM IST
ಮುನವಳ್ಳಿ: ಪಟ್ಟಣದ ಆರಾಧ್ಯ ದೈವ ಶ್ರೀ ಪಂಚಲಿಂಗೇಶ್ವರ ಮಹಾರಥೋತ್ಸವ ರವಿವಾರ ಸಂಜೆ ಸಂಭ್ರಮದಿಂದ ನಡೆಯಿತು. ಶ್ರೀ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು ರಥಕ್ಕೆ ಪೂಜೆ ಸಲ್ಲಿಸಿ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.
ಭಕ್ತರು ಬಾಳೆಹಣ್ಣು, ಉತ್ತತ್ತಿ ರಥಕ್ಕೆ ಹಾರಿಸಿ ಭಕ್ತಿಭಾವ ಸಮರ್ಪಿಸಿದರು. ಹರಹರ ಮಹಾದೇವ, ಓಂ ನಮಃ ಶಿವಾಯ, ಪಂಚಲಿಂಗೇಶ್ವರ ಮಹಾರಾಜ್ ಕೀ ಜೈ ಎಂಬ ಘೋಷಣೆ ಕೂಗಿದರು. ವಿವಿಧ ಮಂಗಲ ವಾದ್ಯ ವೈಭವಗಳು, ವೀರ ಪುರವಂತರ ಒಡಪುಗಳು ಹಾಗೂ ನೂರಾರು ಮೀಟರ್ ಉದ್ದದ ದಾರದೊಂದಿಗೆ ಪುರವಂತರು ಹಾಗೂ ಭಕ್ತರು ನಾಲಿಗೆಗೆ ಹಾಗೂ ಕೆನ್ನೆಗೆ ಶಸ್ತ್ರ ಚುಚ್ಚಿಕೊಳ್ಳುವ ದೃಶ್ಯಗಳು ಗಮನ ಸೆಳೆದವು.
ರಥೋತ್ಸವಕ್ಕೂ ಮೊದಲು ಬಣಗಾರ ಓಣಿಯಿಂದ ನಂದಿಕೋಲುಗಳು ಪೂಜೆಗೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಪಂಚಲಿಂಗೇಶ್ವರ ದೇವಸ್ಥಾನ ತಲುಪಿದವು. ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ, ಜಾತ್ರಾ ಉತ್ಸವ ಕಮಿಟಿ ಸದಸ್ಯರು, ಭಕ್ತರು ಪಾಲ್ಗೊಂಡಿದ್ದರು. ದೇವಸ್ಥಾನದ ಸಮುತ್ಛಯದಲ್ಲಿರುವ ಮೂರು ಲಿಂಗ ದೇವರಿಗೆ ಬುತ್ತಿಪೂಜೆ ಕಟ್ಟಲಾಗಿತ್ತು. ಶ್ರೀ ಮಲ್ಲಿಕಾರ್ಜುನ, ಶ್ರೀ ಬೊರಮ್ಮ, ಶ್ರೀ ತ್ರಂಬಕೇಶ್ವರ, ಶ್ರೀ ಬನಶಂಕರಿ, ನಾಗದೇವತೆ, ರುದ್ರಮುನೀಶ್ವರ, ಶ್ರೀ ರೇಣುಕಾ, ಶ್ರೀ ಕಾಲಭೈರವ ದೇವರಿಗೆ ರುದ್ರಾಭಿಷೇಕ, ಅಲಂಕಾರ ಪೂಜೆ ನೆರವೇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ