ನಾಡಿಗೆ ಬಂದ ಸಾರಂಗ ರಕ್ಷಣೆ
Team Udayavani, Jul 10, 2021, 6:43 PM IST
ಬೆಳಗಾವಿ: ಖಾನಾಪುರ ತಾಲೂಕಿನ ನಾಗರಗಾಳಿ ಅರಣ್ಯದಿಂದ ಆಹಾರ ಹುಡುಕುತ್ತ ಕರ್ಜಗಿ ಗ್ರಾಮದೊಳಗೆ ಬಂದ ಸಾರಂಗವನ್ನು ರಕ್ಷಿಸಿದ ಗ್ರಾಮಸ್ಥರು ಅದನ್ನು ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಮರಳಿ ಅರಣ್ಯದೊಳಗೆ ಬಿಟ್ಟಿದ್ದಾರೆ.
ಕರ್ಜಗಿ ಗ್ರಾಮಕ್ಕೆ ಬಂದ ಸಾರಂಗವನ್ನು ಗಮನಿಸಿದ ಬೀದಿ ನಾಯಿಗಳು ಅದರ ಮೇಲೆ ಹಲ್ಲೆಗೆ ಮುಂದಾಗಿದ್ದವು. ಜೀವ ಭಯದಿಂದ ಸಾರಂಗ ಗ್ರಾಮದ ಮನೆಯೊಂದಕ್ಕೆ ನುಗ್ಗಿತ್ತು. ಮನೆಯ ಸದಸ್ಯರು ಅದನ್ನು ನಾಯಿಗಳಿಂದ ರಕ್ಷಿಸಿ ಗ್ರಾಮಸ್ಥರಿಗೆ ವಿಷಯ ತಿಳಿಸಿದರು.
ಗ್ರಾಮಸ್ಥರು ಅದೇ ಗ್ರಾಮದ ನಿವಾಸಿ ಹಾಗೂ ಮಾಜಿ ಶಾಸಕ ಅರವಿಂದ ಪಾಟೀಲ ಅವರ ಗಮನಕ್ಕೆ ಈ ವಿಷಯ ತಂದಿದ್ದಾರೆ. ಅರಣ್ಯ ಇಲಾಖೆ ಅ ಧಿಕಾರಿಗಳ ಜೊತೆ ಗ್ರಾಮಕ್ಕೆ ಅರವಿಂದ ಪಾಟೀಲ ಭೇಟಿ ನೀಡಿದರು. ನಂತರ ಪಶು ವೈದ್ಯರಿಂದ ಚಿಕಿತ್ಸೆ ಕೊಡಿಸಿ ಮರಳಿ ಅರಣ್ಯಕ್ಕೆ ಬಿಡಲಾಗಿದೆ ಎಂದು ಉಪ ವಲಯ ಅರಣ್ಯ ಅ ಧಿಕಾರಿ ಎನ್.ಜಿ. ಹಿರೇಮಠ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ