ಮನೆಯಿಂದಲೇ ಪರಿಸರ ಜಾಗೃತಿ ಆರಂಭವಾಗಲಿ


Team Udayavani, Jun 6, 2019, 9:43 AM IST

bg-tdy-2..

ಚಿಕ್ಕೋಡಿ: ನ್ಯಾಯಾಲಯದ ಮುಂಭಾಗದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಹಾಂತಪ್ಪ ಎ.ಡಿ. ಮಕ್ಕಳಿಗೆ ಸಸಿ ವಿತರಿಸಿದರು.

ಚಿಕ್ಕೋಡಿ: ಪರಿಸರ ರಕ್ಷಣೆಯ ಮಹತ್ವದ ಅರಿವು ಮೂಡಿಸುವ ಕಾರ್ಯ ಮನೆಯಿಂದಲೇ ಆರಂಭವಾದಾಗ ಮಾತ್ರ ಪರಿಸರ ಸಮತೋಲನ ಕಾಯ್ದುಕೊಳ್ಳಬಹುದು. ಮನೆಯ ಯಜಮಾನ ತನ್ನ ಕುಟುಂಬಕ್ಕೆ ಪರಿಸರದ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಿದ ಮೇಲೆ ಉಳಿದ ಸಂಘ-ಸಂಸ್ಥೆಗಳು ಅದನ್ನು ನಿಭಾಯಿಸಿಕೊಂಡು ಹೋಗಲು ಸಾಧ್ಯ ಎಂದು ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ಮಹಾಂತಪ್ಪ ಎ.ಡಿ.ಹೇಳಿದರು.

ಇಲ್ಲಿನ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪರಿಸರ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಸಿ ವಿತರಿಸಿ ಅವರು ಮಾತನಾಡಿದರು.

ಇಂದು ಅತಿಯಾದ ಪ್ಲಾಸ್ಟಿಕ್‌ ಬಳಕೆಯಿಂದ ಮಳೆ ಕಡಿಮೆ ಆಗುತ್ತಿದೆ. ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡು ಪ್ಲಾಸ್ಟಿಕ್‌ ಬಳಕೆಯನ್ನು ಕಡ್ಡಾಯವಾಗಿ ನಿಷೇಧ ಮಾಡಬೇಕು. ಇದರಿಂದ ನೀರಿನ ಸದ್ಬಳಕೆ ಸಾಧ್ಯವಾಗುತ್ತದೆ. ನೀರಿನ ಸೆಲೆಗಳು ಇಂದು ಮಂಗಮಾಯವಾಗುತ್ತಿವೆ. ಗ್ರಾಮಗಳಲ್ಲಿರುವ ಕೆರೆ ಕಟ್ಟೆಗಳು ನೋಡಲು ಹೋದರೆ ಸಿಗುವುದಿಲ್ಲ, ನೀರಿನ ಸೆಲೆಗಳು ಇದ್ದರೆ ಮಾತ್ರ ನೀರಿನ ಜಲಮೂಲಗಳು ಸಿಗಲು ಸಾಧ್ಯ. ಸರ್ಕಾರ ಅನವಶ್ಯಕವಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ. ಅದನ್ನೆಲ್ಲ ಬಿಟ್ಟು ಹಳ್ಳಿಯಲ್ಲಿರುವ ಕೆರೆಗಳನ್ನು ಪುನಶ್ಚೇತನಗೊಳಿಸಿದರೆ ರೈತರಿಗೆ ವರದಾನವಾಗುತ್ತದೆ ಎಂದರು.

ಕಾಲಕ್ಕೆ ತಕ್ಕಂತೆ ಮಳೆಯಾಗಲು ಸರ್ಕಾರ ಪ್ಲಾಸ್ಟಿಕ್‌ ಕಡ್ಡಾಯ ನಿಷೇಧ ಮಾಡಿದರೆ ವಾಯು ಮಾಲಿನ್ಯ, ಜಲಮಾಲಿನ್ಯ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದ ಅವರು, ಸ್ವಚ್ಛ ಸುಂದರ ಮತ್ತು ಹಚ್ಚ ಹಸಿರಿನ ನಗರ ನಿರ್ಮಾಣ ಮಾಡಲು ಪ್ರತಿಯೊಬ್ಬ ನಾಗರಿಕನು ಮನೆ ಮುಂದೆ ಒಂದೊಂದು ಗಿಡ ನೆಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಎಸ್‌.ಎಲ್.ಚವಾಣ ಮಾತನಾಡಿ, ಬೆಳೆದ ಗಿಡಗಳನ್ನು ಮಾನವ ಕಡಿದು ಹಾಕಿರುವು‌ದರಿಂದ ಇಂದು ಸಮರ್ಪಕ ಮಳೆ ಆಗುತ್ತಿಲ್ಲ, ಭೂಮಿಯಲ್ಲಿ ಬೆಳೆ ಬರುತ್ತಿಲ್ಲ, ಆದ್ದರಿಂದ ಮಳೆ ಬೆಳೆ ಚೆನ್ನಾಗಿ ಆಗಬೇಕಾದರೆ ಮರಗಳನ್ನು ಬೆಳೆಸುವುದು ಅತೀ ಅವಶ್ಯಕ ಎಂದರು. ಇದೇ ಸಂದರ್ಭದಲ್ಲಿ ನ್ಯಾಯಾಲಯದಿಂದ ಸಿಎಲ್ಇ ಸಂಸ್ಥೆಯವರಿಗೆ ಪರಿಸರ ಕುರಿತು ಜಾಗೃತಿ ಜಾಥಾ ನಡೆಯಿತು. ನ್ಯಾಯಾಲಯದ ಮುಂಭಾಗದಲ್ಲಿ ಸಸಿ ನೆಡಲಾಯಿತು.

ವೇದಿಕೆ ಮೇಲೆ ಪ್ರಧಾನ ದಿವಾಣಿ ನ್ಯಾಯಾಧಿಧೀಶ ವಿಜಯಕುಮಾರ ಬಾಗಡೆ, ಒಂದನೆ ಹೆಚ್ಚುವರಿ ದಿವಾಣಿ ನ್ಯಾಯಾಧೀಶ, ಮಂಜುಳ ಬಿ. ಎರಡನೆ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಯೋಗೇಶ ಕೆ. ನ್ಯಾಯವಾದಿಗಳ ಸಂಘದ ಅಧ್ಯಕ್ಷ ನಾಗೇಶ ಕಿವಡ, ಪರಿಸರ ಅಧಿಕಾರಿ ಐ.ಎಚ್.ಜಗದೀಶ, ವಲಯ ಅರಣ್ಯಾಧಿಕಾರಿ ಎಂ.ಬಿ.ಗಣಾಚಾರಿ, ನ್ಯಾಯವಾದಿ ಎಂ.ಬಿ.ಪಾಟೀಲ, ಎಸ್‌.ಜಿ.ಹಿರೇಮಠ, ಪ್ರಿಯಂಕಾ ವಿನಾಯಕ ಮುಂತಾದವರು ಇದ್ದರು. ನ್ಯಾಯವಾದಿ ಕಲ್ಮೇಶ ಕಿವಡ ಸ್ವಾಗತಿಸಿದರು. ಪ್ರಾಚಾರ್ಯ ಸುರೇಶ ಉಕ್ಕಲಿ ನಿರೂಪಿಸಿದರು.

ಟಾಪ್ ನ್ಯೂಸ್

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.