ಸಮುದಾಯ ಭವನ ಕಾಮಗಾರಿಗೆ ಚಾಲನೆ
Team Udayavani, Sep 8, 2019, 10:07 AM IST
ಬೈಲಹೊಂಗಲ: ನನಗುಂಡಿಕೊಪ್ಪ ಗ್ರಾಮದಲ್ಲಿ ಸಮುದಾಯ ಭವನ ಕಾಮಗಾರಿಗೆ ಮಾಜಿ ಶಾಸಕ ಡಾ| ವಿಶ್ವನಾಥ ಪಾಟೀಲ ಚಾಲನೆ ನೀಡಿದರು.
ಬೈಲಹೊಂಗಲ: ಯಾರು ಎಷ್ಟೇ ಆರೋಪಗಳನ್ನು ಮಾಡಿದರೂ ತಲೆಕೆಡಿಸಿಕೊಳ್ಳದೆ ರಾಜ್ಯ ಬಿಜೆಪಿ ಸರಕಾರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿದೆ. ಎಲ್ಲ ವರ್ಗದವರ ಸರ್ವಾಂಗೀಣ ಅಭಿವೃದ್ಧಿಯೇ ಸಿಎಂ ಯಡಿಯೂರಪ್ಪನವರ ಕನಸಾಗಿದೆ ಎಂದು ಮಾಜಿ ಶಾಸಕ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಡಾ| ವಿಶ್ವನಾಥ ಪಾಟೀಲ ಹೇಳಿದರು.
ತಾಲೂಕಿನ ನನಗುಂಡಿಕೊಪ್ಪ ಗ್ರಾಮದ ಶಿವಾನಂದ ಮಠದ ಬಳಿ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಈ ಅವಧಿಯಲ್ಲಿ ಅಂದಾಜು 5 ಲಕ್ಷ ರೂ.ಗಳ ಅನುದಾನದಲ್ಲಿ ಈ ಸುಮುದಾಯ ಭವನ ನಿರ್ಮಿಸಲಾಗುತ್ತಿದೆ ಎಂದರು. ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ನಿಂಗಪ್ಪ ಚೌಡಣ್ಣವರ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಕೂಡ ಗ್ರಾಮಕ್ಕೆ 5 ಲಕ್ಷ ರೂ.ಗಳ ಅನುದಾನ ನೀಡಿದ್ದಾರೆ. ಅದರ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಲಾಗುವುದು ಎಂದರು. ಗ್ರಾಪಂ ಸದಸ್ಯ ಮಹೇಶ ಯಡವಟ್ಟಿ, ಮುಖಂಡರಾದ ಅರ್ಜುನಗೌಡ ಪಾಟೀಲ, ಈರನಗೌಡ ಪಾಟೀಲ, ಮಹಾಂತೇಶ ಅಸುಂಡಿ, ಉದಯ ಕೊಟಬಾಗಿ, ಮುರಿಗೆಪ್ಪ ಅಡಕಿ, ಮುತ್ತು ಚುಳಕಿಮಠ, ವಿಠuಲ ಅಡಕಿ, ವಿರುಪಾಕ್ಷಿ ಆರೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ